Don't Miss!
- News Namma Metro Pink Line: ಮೆಟ್ರೋ ಸುರಂಗ ಕಾಮಗಾರಿ ಬಹುತೇಕ ಪೂರ್ಣ: ಯೋಜನೆಯ ಅಪ್ಡೇಟ್
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Sports IPL 2024: ಐಪಿಎಲ್ನಲ್ಲಿ ಉಮೇಶ್ ಯಾದವ್ ಅವರ ವಿಶೇಷ ದಾಖಲೆ ಸರಿಗಟ್ಟಿದ ಜಸ್ಪ್ರೀತ್ ಬುಮ್ರಾ
- Automobiles ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರರಂಗಕ್ಕೆ ಸುದೀಪ್ ಅಳಿಯ, ಜಯತೀರ್ಥ ಆಕ್ಷನ್ ಕಟ್.!
Recommended Video
ಬೆಲ್ ಬಾಟಮ್ ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ಜಯತೀರ್ಥ ಸೂಪರ್ ಪ್ರಾಜೆಕ್ಟ್ ಆರಂಭಿಸುವ ಸೂಚನೆ ನೀಡಿದ್ದಾರೆ. ಕಿಚ್ಚ ಸುದೀಪ್ ಸೋದರ ಅಳಿಯನ ಚಿತ್ರಕ್ಕೆ ಜಯತೀರ್ಥ ಆಕ್ಷನ್ ಕಟ್ ಹೇಳಲು ಸಜ್ಜಾಗುತ್ತಿದ್ದಾರಂತೆ.
ಒಲವೇ ಮಂದಾರ, ಬುಲೆಟ್ ಬಸ್ಯಾ, ಬ್ಯೂಟಿಫುಲ್ ಮನಸುಗಳು, ಬೆಲ್ ಬಾಟಮ್ ಅಂತಹ ಹಿಟ್ ಚಿತ್ರಗಳನ್ನ ನೀಡಿರುವ ಜಯತೀರ್ಥ, ಈಗ ಸುದೀಪ್ ಸಂಬಂಧಿ ಸಂಚಿತ್ ಸಂಜೀವ್ ಅವರನ್ನ ಕನ್ನಡ ಚಿತ್ರರಂಗಕ್ಕೆ ಕರೆತರುವ ತಯಾರಿ ನಡೆಸುತ್ತಿದ್ದಾರೆ.
ಈಗಾಗಲೇ ಸಂಚಿತ್ ಸಂಜೀವ್ ವಿದೇಶದಲ್ಲಿ ಮತ್ತು ಮುಂಬೈನಲ್ಲಿ ನಟನೆ ತರಬೇತಿ ಪಡೆದುಕೊಂಡಿದ್ದಾರೆ. 'ಅಂಬಿ ನಿಂಗ್ ವಯಸ್ಸಾಯ್ತೋ' ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಕೂಡ ಮಾಡಿದ್ದಾರೆ.
ಈ ಬಗ್ಗೆ ಸುದೀಪ್ ಜೊತೆ ಜಯತೀರ್ಥ ಅವರು ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ. ಆದ್ರೆ, ಈ ಪ್ರಾಜೆಕ್ಟ್ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ'' ಎಂದು ಜಯತೀರ್ಥ ಅವರು ತಿಳಿಸಿದ್ದಾರೆ.
ಇದರ ಜೊತೆಗೆ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಮಗನ ಚಿತ್ರವನ್ನ ನಿರ್ದೇಶಿಸಲು ಜಯತೀರ್ಥ ಅವರಿಗೆ ಆಫರ್ ಬಂದಿದೆ ಎನ್ನಲಾಗಿದೆ. ಆದ್ರೆ, ಇದು ಕೂಡ ಅಧಿಕೃತವಾಗಿಲ್ಲ.