Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರರಂಗಕ್ಕೆ ಸುದೀಪ್ ಅಳಿಯ, ಜಯತೀರ್ಥ ಆಕ್ಷನ್ ಕಟ್.!
Recommended Video
ಬೆಲ್ ಬಾಟಮ್ ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ಜಯತೀರ್ಥ ಸೂಪರ್ ಪ್ರಾಜೆಕ್ಟ್ ಆರಂಭಿಸುವ ಸೂಚನೆ ನೀಡಿದ್ದಾರೆ. ಕಿಚ್ಚ ಸುದೀಪ್ ಸೋದರ ಅಳಿಯನ ಚಿತ್ರಕ್ಕೆ ಜಯತೀರ್ಥ ಆಕ್ಷನ್ ಕಟ್ ಹೇಳಲು ಸಜ್ಜಾಗುತ್ತಿದ್ದಾರಂತೆ.
ಒಲವೇ ಮಂದಾರ, ಬುಲೆಟ್ ಬಸ್ಯಾ, ಬ್ಯೂಟಿಫುಲ್ ಮನಸುಗಳು, ಬೆಲ್ ಬಾಟಮ್ ಅಂತಹ ಹಿಟ್ ಚಿತ್ರಗಳನ್ನ ನೀಡಿರುವ ಜಯತೀರ್ಥ, ಈಗ ಸುದೀಪ್ ಸಂಬಂಧಿ ಸಂಚಿತ್ ಸಂಜೀವ್ ಅವರನ್ನ ಕನ್ನಡ ಚಿತ್ರರಂಗಕ್ಕೆ ಕರೆತರುವ ತಯಾರಿ ನಡೆಸುತ್ತಿದ್ದಾರೆ.
ಈಗಾಗಲೇ ಸಂಚಿತ್ ಸಂಜೀವ್ ವಿದೇಶದಲ್ಲಿ ಮತ್ತು ಮುಂಬೈನಲ್ಲಿ ನಟನೆ ತರಬೇತಿ ಪಡೆದುಕೊಂಡಿದ್ದಾರೆ. 'ಅಂಬಿ ನಿಂಗ್ ವಯಸ್ಸಾಯ್ತೋ' ಚಿತ್ರದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಕೂಡ ಮಾಡಿದ್ದಾರೆ.
ಈ ಬಗ್ಗೆ ಸುದೀಪ್ ಜೊತೆ ಜಯತೀರ್ಥ ಅವರು ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ. ಆದ್ರೆ, ಈ ಪ್ರಾಜೆಕ್ಟ್ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ'' ಎಂದು ಜಯತೀರ್ಥ ಅವರು ತಿಳಿಸಿದ್ದಾರೆ.
ಇದರ ಜೊತೆಗೆ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಮಗನ ಚಿತ್ರವನ್ನ ನಿರ್ದೇಶಿಸಲು ಜಯತೀರ್ಥ ಅವರಿಗೆ ಆಫರ್ ಬಂದಿದೆ ಎನ್ನಲಾಗಿದೆ. ಆದ್ರೆ, ಇದು ಕೂಡ ಅಧಿಕೃತವಾಗಿಲ್ಲ.