Just In
Don't Miss!
- News
ಸಂಸತ್ ಕಟ್ಟಡದ ಮಹಾತ್ಮ ಗಾಂಧಿ ಪ್ರತಿಮೆ ತರಾತುರಿಯಲ್ಲಿ ಸ್ಥಳಾಂತರ
- Sports
ಐಎಸ್ಎಲ್: ಬೆಂಗಳೂರಿಗೆ ಸೋಲಿನ ಆಘಾತ ನೀಡಿದ ಕೇರಳ ಬ್ಲಾಸ್ಟರ್ಸ್
- Education
WAPCOS Recruitment 2021: 11 ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Finance
ಇಪ್ಪತ್ತು ದಿನದಲ್ಲಿ 47 ಪರ್ಸೆಂಟ್ ನಷ್ಟು ಏರಿಕೆ ಕಂಡ ಟಾಟಾ ಮೋಟಾರ್ಸ್ ಷೇರು
- Automobiles
ಡ್ಯುಯಲ್ ಟೋನ್ ಬಣ್ಣದ ಆಯ್ಕೆಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸಿದ ಸಿಟ್ರನ್ ಸಿ5 ಏರ್ಕ್ರಾಸ್ ಕಾರು
- Lifestyle
ಯಾವಾಗ ಸಂಗಾತಿಗೆ ಮೋಸ ಮಾಡಿ ಅನೈತಿಕ ಸಂಬಂಧ ಬೆಳೆಸುತ್ತಾರೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಟಾಲಿವುಡ್ ನಲ್ಲಿ ಶುರುವಾಯ್ತು 'ಜೂಡಾ' ಗಾನಬಜಾನ
'ಬದ್ಮಾಶ್' ಸಿನಿಮಾ ಮೂಲಕ ಕನ್ನಡ ಸಿನಿಮಾರಂಗದಲ್ಲಿ ವಿಭಿನ್ನ ರೀತಿಯ ಸಂಗೀತವನ್ನು ಪ್ರೇಕ್ಷಕರಿಗೆ ನೀಡಿದ ಸಂಗೀತ ನಿರ್ದೇಶಕ ಜೂಡಾ ಸ್ಯಾಂಡಿ ಟಾಲಿವುಡ್ ಗೆ ಹಾರಿದ್ದಾರೆ. 'ಬದ್ಮಾಶ್' ಚಿತ್ರದ ನಂತರ 'ಆಪರೇಷನ್ ಅಲಮೇಲಮ್ಮ' ಹಾಗೂ 'ಚಮಕ್' ಚಿತ್ರಕ್ಕೆ ಜೂಡಾ ಟ್ಯೂನ್ ನೀಡಿದ್ದರು.
'ಚಮಕ್' ಚಿತ್ರದ ಹಾಡಿಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿತ್ತು. ಚಿತ್ರರಂಗಕ್ಕೆ ಬರುವ ಮುನ್ನ ಜೂಡಾ ತಮ್ಮದೇ ಆದ ಬ್ಯಾಂಡ್ ಮೂಲಕ ಸಂಗೀತ ಪ್ರಿಯರಿಗೆ ಚಿರಪರಿಚಿತರಾಗಿದ್ದರು. ವಿಭಿನ್ನ ಸಂಗೀತದಿಂದಲೇ ಪ್ರಖ್ಯಾತಿಗಳಿಸಿದ್ದ ಜೂಡಾ, ಅಲ್ಲು ಸಿರೀಶ್ ಅಭಿನಯದ 'ಎಬಿಸಿಡಿ' ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ.
ಗೊಂಬೆ ಹಾಡಿಗೆ ಮತ್ತೆ ಜೀವ ತುಂಬಿದ ರಾಘವೇಂದ್ರ ರಾಜ್ ಕುಮಾರ್
ಅಲ್ಲು ಸಿರೀಶ್ ಇತ್ತೀಚಿನ ದಿನಗಳಲ್ಲಿ ಕನ್ನಡ ಸಿನಿಮಾರಂಗ ಹಾಗೂ ಇಲ್ಲಿಯ ಕಲಾವಿದರ ಜೊತೆಯಲ್ಲಿ ಉತ್ತಮ ಬಾಂದವ್ಯವನ್ನು ಹೊಂದಿದ್ದು, ಇಲ್ಲಿಯವರರೇ ಆದ ಜೂಡಾ ಅವರನ್ನು ತಮ್ಮ ಚಿತ್ರಕ್ಕೆ ಸಂಗೀತ ನೀಡಲು ಆಹ್ವಾನ ನೀಡಿದ್ದಾರೆ.
ಚಮಕ್ ಚಿತ್ರದ ಹಾಡುಗಳನ್ನ ಹೇಳಿ ಇಂಪ್ರೆಸ್ ಆದ ಸಿರೀಶ್ ಇವರನ್ನೇ ಚಿತ್ರಕ್ಕೆ ಸಂಗೀತ ನಿರ್ದೇಶಕರಾಗಿ ಆಯ್ಕೆ ಮಾಡಿಕೊಳ್ಳೋಣ ಎಂದು ನಿರ್ಧರಿಸಿದ್ದಾರೆ. ನಂತರ ಜೂಡಾ ಅವರನ್ನೇ ಹೈದ್ರಾಬಾದ್ ಗೆ ಕರೆಸಿ ಮಾತನಾಡಿದ್ದಾರೆ. ಕನ್ನಡದ ಪ್ರತಿಭೆ ಪರಭಾಷೆಯಲ್ಲೂ ಮಿಂಚುತ್ತಿರುವುದು ಅಭಿಮಾನಿಗಳಿಗೆ ಮಾತ್ರವಲ್ಲದೆ ಜೂಡಾ ಅವರಿಗೂ ಖುಷಿ ತಂದಿದ್ಯಂತೆ.