Don't Miss!
- News Lok Sabha Election: ಮತದಾನದ ದಿನ ಬಸ್ಗಳ ಟಿಕೆಟ್ ದರ ಹೆಚ್ಚಳ ಮಾಡದಂತೆ ಸೂಚನೆ
- Technology OnePlus: ಒನ್ಪ್ಲಸ್ 13 ಸ್ಮಾರ್ಟ್ಫೋನ್ ಡಿಸ್ಪ್ಲೇ, ವಿನ್ಯಾಸ ಲೀಕ್!..ಯಾವಾಗ ಲಾಂಚ್?
- Automobiles ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- Sports RCB: ಯುಜ್ವೇಂದ್ರ ಚಹಾಲ್ ಮರಳಿ ಬರುವಂತೆ ಬೇಡಿಕೊಳ್ಳಿ; ಆರ್ಸಿಬಿಗೆ ಸಲಹೆ ನೀಡಿದ ರಾಬಿನ್ ಉತ್ತಪ್ಪ
- Lifestyle ಗರಿ ಗರಿಯಾದ ಕೋಡುಬಳೆ ಮನೆಯಲ್ಲೇ ಮಾಡಿ.! 4 ವಸ್ತು ಇದ್ದರೆ ಸಾಕು
- Finance ಝಿಲಿಂಗೋನ ಸಹ-ಸಂಸ್ಥಾಪಕ ಹಾಗೂ ಮಾಜಿ ಸಿಒಒ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಅಂಕಿತಿ ಬೋಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟಾಲಿವುಡ್ ನಲ್ಲಿ ಶುರುವಾಯ್ತು 'ಜೂಡಾ' ಗಾನಬಜಾನ
'ಬದ್ಮಾಶ್' ಸಿನಿಮಾ ಮೂಲಕ ಕನ್ನಡ ಸಿನಿಮಾರಂಗದಲ್ಲಿ ವಿಭಿನ್ನ ರೀತಿಯ ಸಂಗೀತವನ್ನು ಪ್ರೇಕ್ಷಕರಿಗೆ ನೀಡಿದ ಸಂಗೀತ ನಿರ್ದೇಶಕ ಜೂಡಾ ಸ್ಯಾಂಡಿ ಟಾಲಿವುಡ್ ಗೆ ಹಾರಿದ್ದಾರೆ. 'ಬದ್ಮಾಶ್' ಚಿತ್ರದ ನಂತರ 'ಆಪರೇಷನ್ ಅಲಮೇಲಮ್ಮ' ಹಾಗೂ 'ಚಮಕ್' ಚಿತ್ರಕ್ಕೆ ಜೂಡಾ ಟ್ಯೂನ್ ನೀಡಿದ್ದರು.
'ಚಮಕ್' ಚಿತ್ರದ ಹಾಡಿಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿತ್ತು. ಚಿತ್ರರಂಗಕ್ಕೆ ಬರುವ ಮುನ್ನ ಜೂಡಾ ತಮ್ಮದೇ ಆದ ಬ್ಯಾಂಡ್ ಮೂಲಕ ಸಂಗೀತ ಪ್ರಿಯರಿಗೆ ಚಿರಪರಿಚಿತರಾಗಿದ್ದರು. ವಿಭಿನ್ನ ಸಂಗೀತದಿಂದಲೇ ಪ್ರಖ್ಯಾತಿಗಳಿಸಿದ್ದ ಜೂಡಾ, ಅಲ್ಲು ಸಿರೀಶ್ ಅಭಿನಯದ 'ಎಬಿಸಿಡಿ' ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ.
ಗೊಂಬೆ ಹಾಡಿಗೆ ಮತ್ತೆ ಜೀವ ತುಂಬಿದ ರಾಘವೇಂದ್ರ ರಾಜ್ ಕುಮಾರ್
ಅಲ್ಲು ಸಿರೀಶ್ ಇತ್ತೀಚಿನ ದಿನಗಳಲ್ಲಿ ಕನ್ನಡ ಸಿನಿಮಾರಂಗ ಹಾಗೂ ಇಲ್ಲಿಯ ಕಲಾವಿದರ ಜೊತೆಯಲ್ಲಿ ಉತ್ತಮ ಬಾಂದವ್ಯವನ್ನು ಹೊಂದಿದ್ದು, ಇಲ್ಲಿಯವರರೇ ಆದ ಜೂಡಾ ಅವರನ್ನು ತಮ್ಮ ಚಿತ್ರಕ್ಕೆ ಸಂಗೀತ ನೀಡಲು ಆಹ್ವಾನ ನೀಡಿದ್ದಾರೆ.
ಚಮಕ್ ಚಿತ್ರದ ಹಾಡುಗಳನ್ನ ಹೇಳಿ ಇಂಪ್ರೆಸ್ ಆದ ಸಿರೀಶ್ ಇವರನ್ನೇ ಚಿತ್ರಕ್ಕೆ ಸಂಗೀತ ನಿರ್ದೇಶಕರಾಗಿ ಆಯ್ಕೆ ಮಾಡಿಕೊಳ್ಳೋಣ ಎಂದು ನಿರ್ಧರಿಸಿದ್ದಾರೆ. ನಂತರ ಜೂಡಾ ಅವರನ್ನೇ ಹೈದ್ರಾಬಾದ್ ಗೆ ಕರೆಸಿ ಮಾತನಾಡಿದ್ದಾರೆ. ಕನ್ನಡದ ಪ್ರತಿಭೆ ಪರಭಾಷೆಯಲ್ಲೂ ಮಿಂಚುತ್ತಿರುವುದು ಅಭಿಮಾನಿಗಳಿಗೆ ಮಾತ್ರವಲ್ಲದೆ ಜೂಡಾ ಅವರಿಗೂ ಖುಷಿ ತಂದಿದ್ಯಂತೆ.