Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಜುಗಾರಿ ಕ್ರಾಸ್' ಸಿನಿಮಾದ ಫಸ್ಟ್ ಲುಕ್ ಬಿಡುಗಡೆ
ಕವಿ ಪೂರ್ಣಚಂದ್ರ ತೇಜಸ್ವಿಯವರ 'ಜುಗಾರಿ ಕ್ರಾಸ್' ಕಾದಂಬರಿಯನ್ನು ಓದಿ ಸಂತಸ ಪಟ್ಟವರು ಸಾಕಷ್ಟು ಜನರಿದ್ದಾರೆ. ಈಗ ಈ ಕಾದಂಬರಿ ಸಿನಿಮಾ ರೂಪ ಪಡೆದುಕೊಳ್ಳುತ್ತಿದೆ.
'ಜುಗಾರಿ ಕ್ರಾಸ್' ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಇಂದು ಬಿಡುಗಡೆಯಾಗಿದೆ. ಚಿತ್ರದ ಮುಹೂರ್ತ ಕಾರ್ಯಕ್ರಮ ಇಂದು ನಡೆದಿದ್ದು, ಮೊದಲ ಪೋಸ್ಟರ್ ಅನಾವರಣವಾಗಿದೆ. 'ಕಡ್ಡಿಪುಡಿ' ಖ್ಯಾತಿಯ ಚಂದ್ರು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.
ಸರ್ಜಾ ಕುಟುಂಬದ ಕುಡಿ ಜೊತೆಗೆ ಶ್ರುತಿ ಹರಿಹರನ್ ಸಿನಿಮಾ.!
ಟಿ ಎಸ್ ನಾಗಾಭರಣ ಅವರ ಹೊಸ ಚಿತ್ರ ಇದಾಗಿದೆ. ಕನ್ನಡದ ಮತ್ತೊಂದು ಶ್ರೇಷ್ಠ ಕಾದಂಬರಿಗೆ ಅವರು ದೃಶ್ಯ ರೂಪ ನೀಡುತ್ತಿದ್ದಾರೆ. ಅವರ ಪುತ್ರ ಪನ್ನಗ ಭರಣ ಸಹ ನಿರ್ದೇಶನ ಮಾಡುತ್ತಿದ್ದಾರೆ.
ವಿಶೇಷ ಅಂದರೆ, ಈ ಸಿನಿಮಾದ ನಾಯಕನಾಗಿರುವುದು ಚಿರಂಜೀವಿ ಸರ್ಜಾ. ಇಷ್ಟು ದಿನ ಕಮರ್ಶಿಯಲ್ ಸಿನಿಮಾಗಳ ನಾಯಕನಾಗಿದ್ದ ಚಿರು ಈಗ ಹೊಸ ಬಗೆಯ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರ ಚಿರು ಪಾಲಿಗೆ ದೊಡ್ಡ ಚಾಲೆಂಜ್ ಆಗಿದೆ.
ಉಳಿದಂತೆ, ವಾಸುಕೀ ವೈಭವ್ ಸಂಗೀತ, ಹೆಚ್ ಸಿ ವೇಣು ಛಾಯಾಗ್ರಹಣ, ಕೆಂಪರಾಜು ಸಂಕಲನ, ಹರೀಶ್ ಹಾಗಲವಾಡಿ ಚಿತ್ರಕಥೆ ಮತ್ತು ಸಂಭಾಷಣೆ ಚಿತ್ರಕ್ಕೆ ಇರಲಿದೆ.