Don't Miss!
- News 11 ಕೋಟಿ ಮಹಿಳೆಯರಿಗೆ ಅಡುಗೆ ಅನಿಲ: ಡಾ. ಕೆ. ಸುಧಾಕರ್
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Lifestyle ಮನೆಯಲ್ಲಿ ಸುಲಭವಾಗಿ ಬೀನ್ಸ್ ಬೆಳೆಯಬಹುದು..! ಹೇಗೆ ನೋಡಿ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಣಧೀರನಲ್ಲಿ ಒಂದಾಗಲಿರುವ ಪ್ರೇಮಲೋಕ ಜೋಡಿ
ಒಂದು ಕಾಲದ ಕನ್ನಡ ಬೆಳ್ಳಿಪರದೆಯ ರೊಮ್ಯಾಂಟಿಕ್ ಜೋಡಿ ಮತ್ತೆ ಪ್ರೇಕ್ಷಕರ ಮುಂದೆ ಬರಲು ಅಣಿಯಾಗುತ್ತಿದ್ದಾರೆ. ಕನಸುಗಾರ, ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಜೂಹಿ ಚಾವ್ಲಾ ಮತ್ತೆ ಜೊತೆಯಾಗಿ ಬಣ್ಣ ಹಚ್ಚುತ್ತಿದ್ದಾರೆ. ಇವರಿಬ್ಬರೂ ಒಂದಾಗಲಿರುವುದು ಮನೋರಂಜನ್ ಅವರ 'ರಣಧೀರ' ಚಿತ್ರದಲ್ಲಿ ಎಂಬುದು ವಿಶೇಷ.
ಸ್ವತಃ ಈ ಬಗ್ಗೆ ರವಿಚಂದ್ರನ್ ಅವರು ಗುಟ್ಟು ಬಿಟ್ಟುಕೊಟ್ಟಿದ್ದಾರೆ. ತಾವಿಬ್ಬರೂ ಮತ್ತೆ ಒಂದಾಗುತ್ತಿದ್ದೇವೆ ಎಂದಿದ್ದಾರೆ. ತಮ್ಮ ಪುತ್ರನ 'ರಣಧೀರ' ಚಿತ್ರದ ಮುಹೂರ್ತಕ್ಕೆ ಜೂಹಿ ಚಾವ್ಲಾ ಬರಬೇಕಾಗಿತ್ತು. ಸ್ವಲ್ಪ ತಡವಾಗಿ ಆಗಮಿಸಿ ಶುಭಕೋರಲಿದ್ದಾರಂತೆ. [ಸ್ಯಾಂಡಲ್ ವುಡ್ ನಲ್ಲಿ ಹೊಸ ರಣಧೀರನ ಉದಯ]
ಇದು ಕಂಪ್ಲೀಟ್ ತಮ್ಮ ಪುತ್ರನ ಚಿತ್ರವಾಗಬೇಕು ಎಂಬುದು ರವಿ ಅಭಿಲಾಷೆ. ಅನಾವಶ್ಯಕ ಪಾತ್ರಗಳನ್ನು ತುರುಕಲು ಅವರಿಗೂ ಸುತಾರಾಂ ಇಷ್ಟವಿಲ್ಲವಂತೆ. ಹಾಗಾಗಿ ಆದಷ್ಟು ಪಾತ್ರಗಳನ್ನು ಕಡಿಮೆ ಮಾಡಬೇಕೆಂಬುದು ರವಿ ಇಚ್ಛೆ. ಈ ಮಾಜಿ ಮಿಸ್ ಇಂಡಿಯಾ ಮತ್ತೆ ಕನ್ನಡದಲ್ಲಿ ಬಣ್ಣ ಹಚ್ಚುತ್ತಾರಾ? ಎಂಬುದನ್ನು ಕಾದು ನೋಡಬೇಕು.
ರವಿಚಂದ್ರನ್ ಹಾಗೂ ಜೂಹಿ ಚಾವ್ಲಾ ಜೋಡಿಯಾಗಿ ಅಭಿನಯಿಸಿದ ಕೊನೆಯ ಚಿತ್ರ 'ಶಾಂತಿಕ್ರಾಂತಿ' (1991). ಇದಾದ ಬಳಿಕ ಜೂಹಿ ಕನ್ನಡದಲ್ಲಿ ಅಭಿನಯಿಸಲಿಲ್ಲ. 'ಪ್ರೇಮಲೋಕ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಅಡಿಯಿಟ್ಟ ಜೂಹಿ ಚಾವ್ಲಾ ಬಳಿಕ 'ಕಿಂದರಿ ಜೋಗಿ' ಹಾಗೂ 'ಶಾಂತಿ ಕ್ರಾಂತಿ' ಚಿತ್ರಗಳಲ್ಲಿ ರವಿಚಂದ್ರನ್ ಜೊತೆ ಅಭಿನಯಿಸಿದ್ದರು.
ಇತ್ತೀಚೆಗೆ ಜೂಹಿ ಚಾವ್ಲಾ ಬಾಲಿವುಡ್ ನಲ್ಲಿ ಅಭಿನಯಿಸಿದ 'ಗುಲಾಬ್ ಗ್ಯಾಂಗ್' ಚಿತ್ರ ಉತ್ತಮ ವಿಮರ್ಶೆಗೆ ಪಾತ್ರವಾಯಿತು. ಈ ಚಿತ್ರದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಹೋಲುವ ಸುಮಿತ್ರಾ ದೇವಿ ಪಾತ್ರವನ್ನು ಪೋಷಿಸಿದ್ದರು. (ಏಜೆನ್ಸೀಸ್)