Don't Miss!
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಎಸ್ಆರ್ ಕಾಂಗ್ರೆಸ್ ಅಪ್ಪಿಕೊಂಡ ಹಳ್ಳಿಹೈದ ರಾಜೇಶ್
ಇತ್ತೀಚೆಗಷ್ಟೇ ಈಟಿವಿ ಕನ್ನಡ ವಾಹಿನಿಯ 'ಬಿಗ್ ಬಾಸ್' ಕಾರ್ಯಕ್ರಮದ ವಿಶೇಷ ಅತಿಥಿಯಾಗಿದ್ದ ಹಳ್ಳಿಹೈದ ರಾಜೇಶ್ ಈಗ ಬಿಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಲ್.ಸೋಮಣ್ಣ ಅವರ ಪರ ರಾಜೇಶ್ ಪ್ರಚಾರ ಮಾಡಲಿದ್ದಾರೆ.
ಬಡವರ, ಶ್ರಮಿಕರ ಹಾಗೂ ರೈತರ ಪಕ್ಷದ ಸಂಸ್ಥಾಪಕ ಶ್ರೀರಾಮುಲು ಅವರು ಈ ರಾಜ್ಯದ ಮುಖ್ಯಮಂತ್ರಿ ಆಗಬೇಕು ತಾವು ಆಶಿಸಿರುವುದಾಗಿ ರಾಜೇಶ್ ಈ ಸಂದರ್ಭದಲ್ಲಿ ಹೇಳಿದ್ದಾರೆ. 'ಹಳ್ಳಿ ಹೈದ ಪ್ಯಾಟೆಗೆ ಬಂದ' ರಿಯಾಲಿಟಿ ಶೋ ಮೂಲಕ ರಾಜೇಶ್ ಗುರುತಿಸಿಕೊಂಡಿದ್ದ.
ಈಗ ರಾಜಕೀಯಕ್ಕೆ ಅಡಿಯಿಟ್ಟಿದ್ದಾರೆ ರಾಜೇಶ್. ಕೆಲದಿನಗಳ ಹಿಂದೆ ಮಾನಸಿಕ ಅಸ್ವಸ್ಥನಾಗಿದ್ದ ರಾಜೇಶ್ ಅವರು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಅದ್ಯಾಕೋ ಏನೋ ಬಿಎಸ್ಆರ್ ಕಾಂಗ್ರೆಸ್ ಕಡೆಗೆ ಸಿನಿಮಾ ತಾರೆಗಳ ಒಲವು ಜಾಸ್ತಿಯಾಗುತ್ತಿದೆ.
ಆದರೆ ರಕ್ಷಿತಾ ಮಾತ್ರ ಬಿಎಸ್ಆರ್ ಕಾಂಗ್ರೆಸ್ ತೊರೆದು ಈಗ ಜೆಡಿಎಸ್ ಸೇರಿದ್ದಾರೆ. ಪೂಜಾಗಾಂಧಿ ಮಾತ್ರ ರಾಯಚೂರಿನ ಬಿಸಿಲನ್ನೂ ಲೆಕ್ಕಿಸದೆ ಬೆವರು ಹರಿಸಿ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಇನ್ನು ಮದನ್ ಪಟೇಲ್ ಹಾಗೂ ಮಯೂರ್ ಪಟೇಲ್ ಅವರು ಬಿಎಸ್ಆರ್ ಕಾಂಗ್ರೆಸ್ ನಲ್ಲಿ ಬಿಜಿಯಾಗಿದ್ದಾರೆ. (ಏಜೆನ್ಸೀಸ್)