Don't Miss!
- News Kotak Mahindra Bank: ಕೋಟಕ್ ಮಹಿಂದ್ರಾ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ: ಗ್ರಾಹಕರ ಮೇಲೆ ಪರಿಣಾಮಗಳೇನು?
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಎಸ್ಆರ್ ಕಾಂಗ್ರೆಸ್ ಅಪ್ಪಿಕೊಂಡ ಹಳ್ಳಿಹೈದ ರಾಜೇಶ್
ಇತ್ತೀಚೆಗಷ್ಟೇ ಈಟಿವಿ ಕನ್ನಡ ವಾಹಿನಿಯ 'ಬಿಗ್ ಬಾಸ್' ಕಾರ್ಯಕ್ರಮದ ವಿಶೇಷ ಅತಿಥಿಯಾಗಿದ್ದ ಹಳ್ಳಿಹೈದ ರಾಜೇಶ್ ಈಗ ಬಿಎಸ್ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎಲ್.ಸೋಮಣ್ಣ ಅವರ ಪರ ರಾಜೇಶ್ ಪ್ರಚಾರ ಮಾಡಲಿದ್ದಾರೆ.
ಬಡವರ, ಶ್ರಮಿಕರ ಹಾಗೂ ರೈತರ ಪಕ್ಷದ ಸಂಸ್ಥಾಪಕ ಶ್ರೀರಾಮುಲು ಅವರು ಈ ರಾಜ್ಯದ ಮುಖ್ಯಮಂತ್ರಿ ಆಗಬೇಕು ತಾವು ಆಶಿಸಿರುವುದಾಗಿ ರಾಜೇಶ್ ಈ ಸಂದರ್ಭದಲ್ಲಿ ಹೇಳಿದ್ದಾರೆ. 'ಹಳ್ಳಿ ಹೈದ ಪ್ಯಾಟೆಗೆ ಬಂದ' ರಿಯಾಲಿಟಿ ಶೋ ಮೂಲಕ ರಾಜೇಶ್ ಗುರುತಿಸಿಕೊಂಡಿದ್ದ.
ಈಗ ರಾಜಕೀಯಕ್ಕೆ ಅಡಿಯಿಟ್ಟಿದ್ದಾರೆ ರಾಜೇಶ್. ಕೆಲದಿನಗಳ ಹಿಂದೆ ಮಾನಸಿಕ ಅಸ್ವಸ್ಥನಾಗಿದ್ದ ರಾಜೇಶ್ ಅವರು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಅದ್ಯಾಕೋ ಏನೋ ಬಿಎಸ್ಆರ್ ಕಾಂಗ್ರೆಸ್ ಕಡೆಗೆ ಸಿನಿಮಾ ತಾರೆಗಳ ಒಲವು ಜಾಸ್ತಿಯಾಗುತ್ತಿದೆ.
ಆದರೆ ರಕ್ಷಿತಾ ಮಾತ್ರ ಬಿಎಸ್ಆರ್ ಕಾಂಗ್ರೆಸ್ ತೊರೆದು ಈಗ ಜೆಡಿಎಸ್ ಸೇರಿದ್ದಾರೆ. ಪೂಜಾಗಾಂಧಿ ಮಾತ್ರ ರಾಯಚೂರಿನ ಬಿಸಿಲನ್ನೂ ಲೆಕ್ಕಿಸದೆ ಬೆವರು ಹರಿಸಿ ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಇನ್ನು ಮದನ್ ಪಟೇಲ್ ಹಾಗೂ ಮಯೂರ್ ಪಟೇಲ್ ಅವರು ಬಿಎಸ್ಆರ್ ಕಾಂಗ್ರೆಸ್ ನಲ್ಲಿ ಬಿಜಿಯಾಗಿದ್ದಾರೆ. (ಏಜೆನ್ಸೀಸ್)