Just In
- 2 min ago
RRR ಸಿನಿಮಾಕ್ಕೆ ವಿದೇಶದಲ್ಲಿ ಭಾರಿ ಭೇಡಿಕೆ: ಭಾರಿ ಮೊತ್ತಕ್ಕೆ ಸೇಲ್ ಆದ ವಿದೇಶ ಪ್ರದರ್ಶನ ಹಕ್ಕು
- 29 min ago
ಚಿತ್ರಮಂದಿರ: 100% ಸೀಟು ಭರ್ತಿಗೆ ಕೇಂದ್ರ ಸರ್ಕಾರ ಅಸ್ತು
- 2 hrs ago
ದುಬೈಗೆ ಬಂದಿಳಿದ ಅಭಿನಯ ಚಕ್ರವರ್ತಿ ಸುದೀಪ್ಗೆ ಭರ್ಜರಿ ಸ್ವಾಗತ
- 2 hrs ago
ಆ ಜಾಹೀರಾತುಗಳಲ್ಲಿ ನಟಿಸಿದ್ದಕ್ಕೆ ಈಗಲೂ ಪಶ್ಚಾತ್ತಾಪ ಪಡುತ್ತಿರುವ ಪ್ರಿಯಾಂಕಾ ಚೋಪ್ರಾ
Don't Miss!
- News
ಕೋಳಿ, ಕಾಗೆ, ನವಿಲುಗಳಲ್ಲೂ ಹಕ್ಕಿಜ್ವರ; ಭಾರತದ 12 ರಾಜ್ಯಗಳಿಗೆ ಆಘಾತ!
- Automobiles
ಕೈಗೆಟುಕುವ ದರದ ಕ್ವಿಡ್ ಕಾರಿನ ಟಿವಿಸಿ ಬಿಡುಗಡೆಗೊಳಿಸಿದ ರೆನಾಲ್ಟ್
- Education
IBPS PO/MT Mains Admit Card 2021: ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Sports
ಐಎಸ್ಎಲ್: ಕೇರಳ ಬ್ಲಾಸ್ಟರ್ಸ್ಗೆ ಜೆಮ್ಷೆಡ್ಪುರ ಎಫ್ಸಿ ಸವಾಲು: Live ಸ್ಕೋರ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 27ರ ಚಿನ್ನ, ಬೆಳ್ಳಿ ದರ
- Lifestyle
ಲಸಿಕೆ ಸಿಕ್ಕಿದರೂ 2021ರಲ್ಲಿ ಕೊರೊನಾವೈರಸ್ ಸಂಪೂರ್ಣ ನಾಶವಾಗಲ್ಲ:WHO ಎಚ್ಚರಿಕೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಆಕ್ಷನ್ ಕಟ್ ಗೆ ಗೀತಸಾಹಿತಿ ಕೆ ಕಲ್ಯಾಣ್ 'ಅಂಬೆಗಾಲು'
ಇದೇ ಮೊಟ್ಟ ಮೊದಲ ಬಾರಿಗೆ ಅವರು ಆಕ್ಷನ್ ಕಟ್ ಹೇಳಲು ಹೊರಟಿರುವುದು ಗೊತ್ತೇ ಇದೆ. ಈ ಚಿತ್ರಕ್ಕೆ 'ಅಂಬೆಗಾಲು' ಎಂದು ಹೆಸರಿಟ್ಟಿದ್ದಾರೆ. ಇದು ಭಾವನೆಗಳ ಅಂಬೆಗಾಲು, ಧ್ಯೇಯಗಳ ಅಂಬೆಗಾಲು.
ಕೇವಲ ನಿರ್ದೇಶನದ ಜವಾಬ್ದಾರಿ ಅಷ್ಟೇ ಅಲ್ಲದೆ ಕತೆ, ಚಿತ್ರಕತೆ, ಸಂಭಾಷಣೆ, ಸಾಹಿತ್ಯ, ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದಾರೆ. ಈ ಚಿತ್ರದ ನಿರ್ಮಾಪಕರು ಬೆಂ.ಕೋ.ಶ್ರೀ (ಬಿ.ಕೆ. ಶ್ರೀನಿವಾಸ್). ವರ್ಷದ ಹಿಂದೆಯೇ ಕಲ್ಯಾಣ್ ಅವರಿಗೆ ಚಿತ್ರಕತೆ ಸಿದ್ಧತೆ ಮಾಡಿಕೊಳ್ಳುವಂತೆ ಬೆಂಕೋಶ್ರೀ ಹೇಳಿದ್ದರಂತೆ.
ಈಗ ಚಿತ್ರಕತೆ ಅಂತಿಮ ಹಂತಕ್ಕೆ ಬಂದಿದ್ದು ಬಹುಶಃ ಸೆಪ್ಟೆಂಬರ್ ವೇಳೆಗೆ ಚಿತ್ರ ಸೆಟ್ಟೇರುವ ಸಾಧ್ಯತೆಳಿವೆ ಎಂದಿದ್ದಾರೆ. ಚಿತ್ರಕತೆ ಪೂರ್ಣವಾಗುವವರೆಗೆ ಪಾತ್ರವರ್ಗದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಮೊದಲ ಆದ್ಯತೆ ಚಿತ್ರಕತೆಗೆ. ಆ ಬಳಿಕವಷ್ಟೇ ತಾಂತ್ರಿಕ ಹಾಗೂ ತಾರಾ ಬಳಗದ ಆಯ್ಕೆ ಎಂದಿದ್ದಾರೆ.
'ಅಮೃತ ವರ್ಷಿಣಿ' ಚಿತ್ರದ "ಈ ಸುಂದರ ಬೆಳದಿಂಗಳ ಈ ತಂಪಿನ ಅಂಗಳದಲಿ, ನನ್ನ ನಿನ್ನ ನಡುವಿನಲಿ.." ಎಂಬ ಸಾಹಿತ್ಯದ ಮೂಲಕ ಅಮೃತ ಹನಿಸಿದ ಪ್ರೇಮಕವಿ ಕೆ ಕಲ್ಯಾಣ್. ನೆನಪುಗಳ ಮಾತು ಮಧುರಾ (ಚಂದ್ರಮುಖಿ ಪ್ರಾಣಸಖಿ), ಸವಿ ಸವಿ ನೆನಪು ಸಾವಿರ ನೆನಪು (ಮೈ ಆಟೋಗ್ರಾಫ್), ಆಹಾ ಎಂಥಾ ಆ ಕ್ಷಣ ನೆನೆದರೆ ತಲ್ಲಣ (ಆಕಾಶ್), ಸಿಹಿ ಗಾಳಿ ಸಿಹಿ ಗಾಳಿ ಸಹಿ ಹಾಕಿದೆ ಮನಸಿನಲಿ (ಆ ದಿನಗಳು)...ಹೀಗೆ ಸೂಪರ್ ಹಿಟ್ ಗೀತೆಗಳನ್ನು ಕೊಟ್ಟಂತಹ ಸಾಹಿತಿ ಕಲ್ಯಾಣ್. ಅವರ ನಿರ್ದೇಶನ ಎಂದ ಮೇಲೆ ಸಹಜವಾಗಿ ಕುತೂಹಲ ಇದ್ದೇ ಇರುತ್ತದೆ.
ಈ ಹಿಂದೊಮ್ಮೆ ಅವರು ಮಾತನಾಡುತ್ತಾ, ಚೊಚ್ಚಲ ಚಿತ್ರವಾದ ಕಾರಣ ಹೆಚ್ಚಿನ ಕಾಳಜಿ ವಹಿಸುತ್ತಿದ್ದೇನೆ.ಸಂಗೀತ ನಿರ್ದೇಶಕನಾಗಿ ಈಗಾಗಲೆ ಯಶಸ್ಸು ಕಂಡಿದ್ದೇನೆ. ಚಿತ್ರನಿರ್ದೇಶನದಲ್ಲೂ ಗೆಲ್ಲಬೇಕೆಂಬ ಆಸೆ ಇದೆ " ಎಂದಿದ್ದರು. (ಏಜೆನ್ಸೀಸ್)