ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿಸಿದ್ದ ಗಂಗಾ ಕುಲಕರ್ಣಿ ನ್ಯಾಯಾಲಯದಲ್ಲೇ ಆತ್ಮಹತ್ಯೆ
ಚಿತ್ರ ಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿಸಿದ್ದ ಮನೆ ಕೆಲಸದಾಕೆ ಗಂಗಾ ಕುಲಕರ್ಣಿ ಕೋರ್ಟ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂದು(ಅಕ್ಟೋಬರ್ 29) ವಿಷ ಸೇವಿಸಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕುಸಿದು ಬಿದ್ದಿದ್ದಾರೆ. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ.
Recommended Video

ಗಂಗಾ ಕುಲಕರ್ಣಿ, ಕೆ.ಕಲ್ಯಾಣ್ ದಾಂಪತ್ಯ ಕಲಹಕ್ಕೆ ಕಾರಣರಾಗಿ, ವಿಚ್ಛೇದನದ ಹಂತ ತಲುಪಿತ್ತು. ಈ ಕುರಿತು ಕೆ.ಕಲ್ಯಾಣ್ ದೂರು ದಾಖಲಿಸಿದ್ದರು. ತನ್ನ ಪತ್ನಿಯೊಂದಿಗೆ ಮಾತನಾಡಲು ಬಿಡುತ್ತಿಲ್ಲ ಎಂದು ಹೇಳಿಕೊಂಡಿದ್ದರು. ವಿಚಾರಣೆ ಬಳಿಕ ಇದರ ಹಿಂದೆ ಶಿವಾನಂದ ವಾಲಿ ಎಂಬ ವ್ಯಕ್ತಿ ಹಾಗೂ ಮನೆ ಕೆಲಸ ಮಾಡಿಕೊಂಡಿದ್ದ ಗಂಗಾ ಕುಲಕರ್ಣಿ ಕೈವಾಡವಿದೆ ಎಂದು ತಿಳಿದುಬಂದಿತ್ತು.
ಶಿವಾನಂದ ವಾಲಿ ಜೊತೆ ಸೇರಿ ಗಂಗಾ, ಕೆ.ಕಲ್ಯಾಣ್ ಪತ್ನಿ ಅಶ್ವಿನಿ ಅವರ ತವರು ಮನೆಯ ಆಸ್ತಿ ಲಪಟಾಯಿಸಲು ಹೊಂಚು ಹಾಕಿದ್ದರು ಎಂಬ ವಿಷಯ ಬೆಳಕಿಗೆ ಬಂದಿತ್ತು. ಅಲ್ಲದೇ ಯುವಕನೊಬ್ಬನಿಗೆ ಕೆಲಸ ಕೊಡಿಸುವುದಾಗಿ ಮೂರು ಲಕ್ಷ ರೂಪಾಯಿ ದೋಚಿದ್ದರು. ಈ ಸಂಬಂಧ 2016ರಲ್ಲಿ ಕುಷ್ಟಗಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಕೆ.ಕಲ್ಯಾಣ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಶಿವಾನಂದ ವಾಲಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಗಂಗಾ ತಲೆಮರೆಸಿಕೊಂಡಿದ್ದರು. ಆದರೆ ಇಂದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಷ್ಟಗಿ ನ್ಯಾಯಾಲಯಕ್ಕೆ ಗಂಗಾ ಕುಲಕರ್ಣಿ ಹಾಜರಾಗಿದ್ದರು. ಈ ವೇಳೆ ಕೋರ್ಟ್ ಆವರಣದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


Click it and Unblock the Notifications











