Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿಸಿದ್ದ ಗಂಗಾ ಕುಲಕರ್ಣಿ ನ್ಯಾಯಾಲಯದಲ್ಲೇ ಆತ್ಮಹತ್ಯೆ
ಚಿತ್ರ ಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿಸಿದ್ದ ಮನೆ ಕೆಲಸದಾಕೆ ಗಂಗಾ ಕುಲಕರ್ಣಿ ಕೋರ್ಟ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಂದು(ಅಕ್ಟೋಬರ್ 29) ವಿಷ ಸೇವಿಸಿ ಕೊಪ್ಪಳ ಜಿಲ್ಲೆಯ ಕುಷ್ಟಗಿ ನ್ಯಾಯಾಲಯಕ್ಕೆ ಆಗಮಿಸಿದ್ದ ಗಂಗಾ ಕುಸಿದು ಬಿದ್ದಿದ್ದಾರೆ. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ.
Recommended Video
ಗಂಗಾ ಕುಲಕರ್ಣಿ, ಕೆ.ಕಲ್ಯಾಣ್ ದಾಂಪತ್ಯ ಕಲಹಕ್ಕೆ ಕಾರಣರಾಗಿ, ವಿಚ್ಛೇದನದ ಹಂತ ತಲುಪಿತ್ತು. ಈ ಕುರಿತು ಕೆ.ಕಲ್ಯಾಣ್ ದೂರು ದಾಖಲಿಸಿದ್ದರು. ತನ್ನ ಪತ್ನಿಯೊಂದಿಗೆ ಮಾತನಾಡಲು ಬಿಡುತ್ತಿಲ್ಲ ಎಂದು ಹೇಳಿಕೊಂಡಿದ್ದರು. ವಿಚಾರಣೆ ಬಳಿಕ ಇದರ ಹಿಂದೆ ಶಿವಾನಂದ ವಾಲಿ ಎಂಬ ವ್ಯಕ್ತಿ ಹಾಗೂ ಮನೆ ಕೆಲಸ ಮಾಡಿಕೊಂಡಿದ್ದ ಗಂಗಾ ಕುಲಕರ್ಣಿ ಕೈವಾಡವಿದೆ ಎಂದು ತಿಳಿದುಬಂದಿತ್ತು.
ಪ್ರೇಮಕವಿ ಕೆ.ಕಲ್ಯಾಣ್ ಬಾಳಲ್ಲಿ ಮತ್ತೆ ಸಂತಸ: ವಿಚ್ಛೇದನ ಅರ್ಜಿ ವಾಪಸ್ ಪಡೆದ ಪತ್ನಿ
ಶಿವಾನಂದ ವಾಲಿ ಜೊತೆ ಸೇರಿ ಗಂಗಾ, ಕೆ.ಕಲ್ಯಾಣ್ ಪತ್ನಿ ಅಶ್ವಿನಿ ಅವರ ತವರು ಮನೆಯ ಆಸ್ತಿ ಲಪಟಾಯಿಸಲು ಹೊಂಚು ಹಾಕಿದ್ದರು ಎಂಬ ವಿಷಯ ಬೆಳಕಿಗೆ ಬಂದಿತ್ತು. ಅಲ್ಲದೇ ಯುವಕನೊಬ್ಬನಿಗೆ ಕೆಲಸ ಕೊಡಿಸುವುದಾಗಿ ಮೂರು ಲಕ್ಷ ರೂಪಾಯಿ ದೋಚಿದ್ದರು. ಈ ಸಂಬಂಧ 2016ರಲ್ಲಿ ಕುಷ್ಟಗಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.
ಕೆ.ಕಲ್ಯಾಣ್ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಶಿವಾನಂದ ವಾಲಿ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಗಂಗಾ ತಲೆಮರೆಸಿಕೊಂಡಿದ್ದರು. ಆದರೆ ಇಂದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಷ್ಟಗಿ ನ್ಯಾಯಾಲಯಕ್ಕೆ ಗಂಗಾ ಕುಲಕರ್ಣಿ ಹಾಜರಾಗಿದ್ದರು. ಈ ವೇಳೆ ಕೋರ್ಟ್ ಆವರಣದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.