Don't Miss!
- News ಅಮಿತ್ ಶಾ ಓರ್ವ ಗೂಂಡಾ, ರೌಡಿ.! ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
- Automobiles Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಚ್ಛೇದನ ಅರ್ಜಿಯನ್ನು ಹಿಂಪಡೆಯುತ್ತೇನೆ: ಕೆ. ಕಲ್ಯಾಣ್ ಪತ್ನಿ ಅಶ್ವಿನಿ
ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯ ಕಲಹ ಸುಖಾಂತ್ಯ ಕಂಡಿದೆ. ಕಲ್ಯಾಣ್ ಪತ್ನಿ ಅಶ್ವಿನಿ ವಿಚ್ಛೇದನ ಅರ್ಜಿ ಹಿಂಪಡೆದು ಪತಿ ಕಲ್ಯಾಣ್ ಜೊತೆ ಜೀವನ ನಡೆಸುವುದಾಗಿ ಹೇಳಿದ್ದಾರೆ.
ಬೆಳಗಾವಿಯ 'ಕೌಟುಂಬಿಕ ನ್ಯಾಯಾಲಯದಲ್ಲಿ ಸಲ್ಲಿಸಿರುವ ವಿವಾಹ ವಿಚ್ಛೇದನ ಅರ್ಜಿಯನ್ನು ಹಿಂಪಡೆಯುತ್ತೇನೆ, ಈ ನಿಟ್ಟಿನಲ್ಲಿ ಅಗತ್ಯ ಪ್ರಕ್ರಿಯೆ ಆರಂಭಿಸಿದ್ದೇನೆ' ಎಂದು ಅಶ್ವಿನಿ ತಿಳಿಸಿದ್ದಾರೆ. ಮಾಧ್ಯಮದ ವರ ಜೊತೆ ಮಾತನಾಡಿದ ಅವರು, 'ಶೀಘ್ರವೇ ಪತಿ ಕೆ.ಕಲ್ಯಾಣ ಅವರನ್ನು ಭೇಟಿ ಮಾಡುತ್ತೇನೆ. ಅವರೊಂದಿಗೆ ದಾಂಪತ್ಯ ಜೀವನ ಮುಂದುವರೆಸುತ್ತೇನೆ. ನಾವಿಬ್ಬರೂ ಕುಳಿತು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತೇವೆ. ನಮ್ಮ ಕುಟುಂಬದಲ್ಲಿ ನಡೆದ ಕೆಟ್ಟ ಗಳಿಗೆ ಇದು' ಎಂದಿದ್ದಾರೆ.
ನಮ್ಮ ದಾಂಪತ್ಯದಲ್ಲಿ ವಿರಸಕ್ಕೆ ಕಾರಣವಾಗಿದ್ದು ಒಬ್ಬ ಮಂತ್ರವಾದಿ: ಕೆ.ಕಲ್ಯಾಣ್
'ಶಿವಾನಂದ ವಾಲಿಯನ್ನು ನಾವು ತುಂಬಾ ನಂಬಿದ್ದೆವು. ಆದರೆ ನಮಗೆ ನಂಬಿಕೆ ದ್ರೋಹ ಮಾಡಿದ್ದಾನೆ. ನಾವು ಅವರ ಮಾತನ್ನ ಕೇಳಬೇಕು, ಹೇಳಿದ್ದನ್ನು ಮಾಡಬೇಕು ಎಂಬ ಪರಿಸ್ಥಿತಿ ನಿರ್ಮಾಣವಾಗಿತ್ತು ಈ ಎಲ್ಲದರ ಬಗ್ಗೆ ಕಲ್ಯಾಣ ಅವರನ್ನು ಸದ್ಯದಲ್ಲೇ ಭೇಟಿ ಮಾಡಿ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಮುಂದಿನ ಜೀವನವನ್ನು ಅವರೊಂದಿಗೆ ಕಳೆಯುತ್ತೇನೆ. ನ್ಯಾಯಾಲಯಕ್ಕೆ ಸಲ್ಲಿಸಿದ ವಿಚ್ಛೇದನ ಅರ್ಜಿಯನ್ನು ಹಿಂಪಡೆಯುತ್ತೇನೆ. ಈ ಕುರಿತು ಕೆಲವೊಂದಿಷ್ಟು ದಾಖಲೆ ಪತ್ರಗಳಿಗೆ ಈಗಾಗಲೇ ಸಹಿ ಮಾಡಿದ್ದೇನೆ' ಎಂದು ಹೇಳಿದ್ದಾರೆ.
Recommended Video
'ಬೆಳಗಾವಿ ಪೊಲೀಸರು ಪರಿಸ್ಥಿತಿ ಮನವರಿಗೆ ಮಾಡಿಕೊಟ್ಟಿದ್ದಾರೆ. ದೇವರ ರೂಪದಲ್ಲಿ ಬಂದು ಕಾಪಾಡಿದ್ದಾರೆ. ಅವರಿಗೆ ಕೃತಜ್ಞತೆ ಸಲ್ಲಸುತ್ತೇನೆ. ಕಾನೂನಿನಿಂದ ನಮಗೆ ಸಹಾಯ ದೊರೆತಿದೆ. ಮನಗೆಲಸಕ್ಕೆ ಸೇರಿಸಿಕೊಳ್ಳುವ ಮುನ್ನ ಮಾಹಿತಿ ಸಂಗ್ರಹಿಸಬೇಕು' ಎಂದಿದ್ದಾರೆ.