Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರೇಮಕವಿ ಕೆ.ಕಲ್ಯಾಣ್ ಬಾಳಲ್ಲಿ ಮತ್ತೆ ಸಂತಸ: ವಿಚ್ಛೇದನ ಅರ್ಜಿ ವಾಪಸ್ ಪಡೆದ ಪತ್ನಿ
ಚಿತ್ರ ಸಾಹಿತಿ ಕೆ. ಕಲ್ಯಾಣ್ ದಾಂಪತ್ಯ ಕಲಹ ಸುಖಾಂತ್ಯ ಕಂಡಿದೆ. ಕಲ್ಯಾಣ್ ಪತ್ನಿ ಅಶ್ವಿನಿ ಬೆಳಗಾವಿ ಕೌಟುಂಬಿಕ ನ್ಯಾಯಾಲಯಕ್ಕೆ ಸಲ್ಲಿಸಿದ ವಿಚ್ಛೇದನ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.
ಅಕ್ಟೋಬರ್ 17 ರಂದು ಕಲ್ಯಾಣ್ ದಂಪತಿ ಅರ್ಜಿ ವಿಚಾರಣೆ ನಡೆದಿದ್ದು, ಈ ವೇಳೆ ಪತ್ನಿ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ. ಈ ಮೂಲಕ ಸಾಹಿತಿ ಕಲ್ಯಾಣ್ ಕುಟುಂಬದಲ್ಲಿ ಎದ್ದಿದ್ದ ಬಿರುಗಾಳಿ ತಣ್ಣಗಾಗಿದೆ.
ವಿಚ್ಛೇದನ ಅರ್ಜಿಯನ್ನು ಹಿಂಪಡೆಯುತ್ತೇನೆ: ಕೆ. ಕಲ್ಯಾಣ್ ಪತ್ನಿ ಅಶ್ವಿನಿ
ವಿಚ್ಛೇದನ ಅರ್ಜಿ ವಾಪಸ್ ಪಡೆದು ಮತ್ತೆ ಕಲ್ಯಾಣ್ ಜೊತೆ ಜೀವನ ನಡೆಸುವುದಾಗಿ ಅಶ್ವಿನಿ ಹೇಳಿದ್ದರು. ಮಾತಿನಂತೆ ಅರ್ಜಿ ವಾಪಸ್ ಪಡೆದು ಮತ್ತೆ ಪತಿಯ ಜೊತೆ ಸಂತೋಷದ ಜೀವನ ಪ್ರಾರಂಭಿಸಿದ್ದಾರೆ. ಅಕ್ಟೋಬರ್ 3ರಂದು ಕೆ ಕಲ್ಯಾಣ್ ಪತ್ನಿ ತಮ್ಮ ಪತಿಯ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ನಂತರ ವಿಚ್ಛೇದನ ನೀಡುವ ಸಲುವಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಮನೆಯ ಕೆಲಸದಾಕೆ ಗಂಗಾ ವಿರುದ್ಧ ದೂರು ದಾಖಲಿಸಿದ್ದರು. ಬಳಿಕ ಪೊಲೀಸ್ ಆ ಬಗ್ಗೆ ತನಿಖೆ ಕೈಗೊಂಡಾಗ ಸತ್ಯ ಬಯಲಿಗೆ ಬಂದಿದೆ. ಮನೆಕೆಲಸದಾಕೆ ಗಂಗಾ ಮತ್ತು ಶಿವಾನಂದ ವಾಲಿ ಎಂಬ ಮಂತ್ರವಾದಿ ಕಲ್ಯಾಣ್ ಪತ್ನಿ ಅಶ್ವಿಯವರನ್ನು ವಂಚಿಸಿ, ವಶೀಕರಣ ಮಾಡಿದ್ದರು. ಅಲ್ಲದೆ ಆ ಮಂತ್ರವಾದಿ ಅಶ್ವಿನಿ ತಂದೆ-ತಾಯಿಗೆ ಸೇರಿದ ಆಸ್ತಿಯನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದರಂತೆ.
Recommended Video
ಈ ಪ್ಕರಣಕ್ಕೆ ಸಂಬಂಧಿಸಿದಂತೆ ಶಿವಾನಂದ ವಾಲಿಯನ್ನು ಬಂಧಿಸಲಾಗಿತ್ತು. ಇಂದು (ಅ.22) ಶಿವಾನಂದ ವಾಲಿ ಜಾಮೀನು ಪಡೆದು ಹೊರಬಂದಿದ್ದಾರೆ. 50 ಸಾವಿರ ರೂಪಾಯಿ ಶ್ಯುರಿಟಿಯ ಮೇಲೆ ಷರತ್ತು ಬದ್ಧ ಜಾಮೀನು ನೀಡಿದೆ. ಇನ್ನೂ ಮತ್ತೋರ್ವ ಆರೋಪಿ ಮನೆ ಕೆಲಸದಾಕೆ ಗಂಗಾ ತಲೆಮರೆಸಿಕೊಂಡಿದ್ದಾರೆ.