Don't Miss!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Sports PBKS vs MI IPL 2024: ಪಂಜಾಬ್ ರಾಜರಿಗೆ ಮುಂಬೈ ಇಂಡಿಯನ್ಸ್ ಸವಾಲು; ಟಾಸ್ ವರದಿ, ಆಡುವ 11ರ ಬಳಗ
- Lifestyle ಊಟದ ರುಚಿ ಹೆಚ್ಚಿಸುತ್ತೆ ಚೌಳಿಕಾಯಿ ಪಲ್ಯ..! ಹೀಗೆ ಮಾಡಿ
- News Karnataka Lok Sabha Elections: ರಾಷ್ಟ್ರೀಯ ಮುಖಂಡರು VS ರಾಜ್ಯ ನಾಯಕರು; ಗೆಲ್ಲೋದು ಯಾರು?
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ಮಾಪಕ ಕೆ ಮಂಜುಗೆ ಕಾಂಗ್ರೆಸ್ ಟಿಕೆಟ್ ಗ್ಯಾರಂಟಿ
ಏತನ್ಮಧ್ಯೆ ಗಂಡುಗಲಿ ಮಂಜು ಅವರೇ ಹೇಳುವಂತೆ ತಮಗೆ ಕಾಂಗ್ರೆಸ್ ಟಿಕೆಟ್ ಗ್ಯಾರಂಟಿ ಎಂದಿದ್ದಾರೆ. ಈ ಹಿಂದೊಮ್ಮೆ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕರ್ನಾಟಕ ಜನತಾ ಪಕ್ಷದಿಂದ (ಕೆಜೆಪಿ) ಸ್ಪರ್ಧಿಸಲಿದ್ದಾರೆ ಎನ್ನಲಾಗಿತ್ತು.
ಮಂಜು ಅವರು ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರನ್ನು ಸಂಪರ್ಕಿಸಿ ಈ ಬಗ್ಗೆ ಮಾತುಕತೆಯೂ ನಡೆಸಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಈಗ ಕಾಂಗ್ರೆಸ್ ಪಕ್ಷದ ಟಿಕೆಟ್ ಗ್ಯಾರಂಟಿ ಎಂಬ ಸುದ್ದಿ ಹರಿದಾಡುತ್ತಿದೆ.
ಕೆ.ಮಂಜು ಅವರು ಯಾವ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಸದ್ಯಕ್ಕೆ ಊಹಾಪೋಹಗಳಲ್ಲೇ ಇದೆ. ಅದು ಖಚಿತವಾಗುವ ತನಕ ಏನೂ ಹೇಳುವಂತಿಲ್ಲ. ಆದರೆ ಮಂಜು ಮಾತ್ರ ತಮಗೆ ಕಾಂಗ್ರೆಸ್ ಟಿಕೆಟ್ ಗ್ಯಾರಂಟಿ ಎಂದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ತುರುವೇಕೆರೆ ಕ್ಷೇತ್ರದಿಂದ ಕೊಬ್ರಿ ಮಂಜು ಕಣಕ್ಕಿಳಿದರೆ ಬಿಜೆಪಿ ಪಕ್ಷವೇನು ಕೈಕಟ್ಟಿ ಕೂರುವುದಿಲ್ಲ. ನವರಸ ನಾಯಕ ಜಗ್ಗೇಶ್ ಅವರನ್ನು ಮಂಜು ವಿರುದ್ಧ ಕಣಕ್ಕಳಿಸಲಿದೆ. ಸದ್ಯಕ್ಕೆ ಜೆಡಿ(ಎಸ್) ಭದ್ರಕೋಟೆಯಾಗಿರುವ ತುರುವೇಕೆರೆ ಕ್ಷೇತ್ರದಲ್ಲಿ ಎಂ.ಟಿ.ಕೃಷ್ಣಪ್ಪ ವಿರುದ್ಧ ಸೆಣೆಸುವುದು ಕಾಂಗ್ರೆಸ್ ಹಾಗೂ ಬಿಜೆಪಿ ಇಬ್ಬರಿಗೂ ಸವಾಲಿನ ಪ್ರಶ್ನೆ. (ಏಜೆನ್ಸೀಸ್)