Don't Miss!
- News Namma Metro Service Extension: ಲೋಕಸಭಾ ಚುನಾವಣೆಗಾಗಿ ಮೆಟ್ರೋ ಸೇವೆ ವಿಸ್ತರಣೆ, ಗಮನಿಸಿ
- Automobiles Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್ನಲ್ಲಿ ಸರಿ ಸಾಟಿಯಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಾಲಾ' ನಿಷೇಧಿಸಲು ದೇವೇಗೌಡರು ಬಿಡುವುದಿಲ್ಲ ಎಂದ ರಜನಿಕಾಂತ್
ಕರ್ನಾಟಕದಲ್ಲಿ ರಜನಿಕಾಂತ್ ಅಭಿನಯದ 'ಕಾಲಾ' ಬಿಡುಗಡೆಯಾಗುತ್ತೋ ಇಲ್ವೋ ಎಂಬ ಕುತೂಹಲ ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದೆ. ಇದೇ ವಾರ ತೆರೆಕಾಣಬೇಕಿರುವ ಚಿತ್ರವನ್ನ ಕರ್ನಾಟಕದಲ್ಲಿ ರಿಲೀಸ್ ಮಾಡಲು ಬಿಡಲ್ಲ ಎಂದು ಕನ್ನಡ ಪರ ಸಂಘಟನೆಗಳು ಎಚ್ಚರಿಕೆ ನೀಡಿದೆ.
ಆದ್ರೆ, ಅತ್ತ ನಟ ರಜನಿಕಾಂತ್ ಮಾತ್ರ ''ಕಾಲಾ ಚಿತ್ರಕ್ಕೆ ಕರ್ನಾಟಕದಲ್ಲಿ ಯಾವುದೇ ಸಮಸ್ಯೆ ಆಗಲ್ಲ. ರಿಲೀಸ್ ಆಗುತ್ತೆ'' ಎನ್ನುತ್ತಿದ್ದಾರೆ. ಕರ್ನಾಟಕ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳುತ್ತೆ ಎಂದಿರುವ ರಜನಿ, ''ದೇವೇಗೌಡರು ಇದ್ದಾರೆ, ಸಿನಿಮಾಗೆ ತೊಂದರೆಯಾಗಲು ಬಿಡುವುದಿಲ್ಲ'' ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಜನಾಭಿಪ್ರಾಯ: ಕರ್ನಾಟಕದಲ್ಲಿ 'ಕಾಲಾ' ರಿಲೀಸ್ ಆಗ್ಬೇಕಾ-ಬೇಡವಾ.?
ಹಾಗಿದ್ರೆ, ರಜನಿಕಾಂತ್ ಹೇಳುವ ರೀತಿಯಲ್ಲಿ ದೇವೇಗೌಡರ ಮಧ್ಯೆ ಪ್ರವೇಶ ಆಗುತ್ತಾ.? ಕಾಲಾ ಚಿತ್ರದ ವಿವಾದಕ್ಕೆ ಮಾಜಿ ಪ್ರಧಾನಿಗಳು ಬರ್ತಾರ.? ಹೀಗೊಂದು ಅನುಮಾನಗಳನ್ನ ತಲೈವಾ ಹುಟ್ಟಿಹಾಕಿದ್ದಾರೆ. ಇನ್ನು ರಜನಿಕಾಂತ್ ಅವರು ಈ ಬಗ್ಗೆ ಏನಂದ್ರು ಎಂಬ ಪೂರ್ತಿ ಮಾಹಿತಿ ತಿಳಿಯಲು ಮುಂದೆ ಓದಿ....
'ಕಾಲಾ' ಸಿನಿಮಾಗೆ ತೊಂದರೆಯಾಗಲ್ಲ
ಕರ್ನಾಟಕದಲ್ಲಿ ಕಾಲಾ ಬಿಡುಗಡೆಯಾಗುತ್ತಾ? ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಜನಿಕಾಂತ್ ''ಕರ್ನಾಟಕದಲ್ಲಿ ಕಾಲಾ ಸಿನಿಮಾಕ್ಕೆ ಯಾವುದಾದರೂ ಸಮಸ್ಯೆ ಎದುರಾಗುತ್ತದೆ ಎಂದು ನಾನು ಭಾವಿಸುವುದಿಲ್ಲ. ಕರ್ನಾಟಕದಲ್ಲಿರುವ ತಮಿಳು ಜನರು ಮಾತ್ರವಲ್ಲ, ಆದರೆ ಬೇರೆ ಭಾಷೆ ಮಾತನಾಡುವ ಜನರೂ ಸಿನಿಮಾ ನೋಡಲು ಬಯಸಿದ್ದಾರೆ'' ಎಂದಿದ್ದಾರೆ.
ಮತ್ತೊಂದು ವಿವಾದದಲ್ಲಿ 'ಕಾಲಾ': ವರ್ಲ್ಡ್ ವೈಡ್ ಬಿಡುಗಡೆಗೆ ಸಂಕಷ್ಟ.!
ದೇವೇಗೌಡರು ಇದ್ದಾರೆ ಬಿಡಿ
''ಕರ್ನಾಟಕ ಸರ್ಕಾರ ಚಿತ್ರಮಂದಿರ ಮತ್ತು ಪ್ರೇಕ್ಷಕರಿಗೆ ಸೂಕ್ತ ಭದ್ರತೆಯನ್ನು ನೀಡಲಿದೆ ಎಂಬುದಾಗಿ ನಾನು ನಂಬಿದ್ದೇನೆ. ಎಲ್ಲಕ್ಕಿಂತ ಮುಖ್ಯವಾಗಿ ಹಿರಿಯರಾದ ದೇವೇಗೌಡ ಅವರು ಅಲ್ಲಿದ್ದಾರೆ. ಸಿನಿಮಾದ ನಿಷೇಧಕ್ಕೆ ಅವರು ಖಂಡಿತಾ ಅವಕಾಶ ನೀಡುವುದಿಲ್ಲ'' ಎಂದು ರಜನಿಕಾಂತ್ ಹೇಳಿಕೆ ನೀಡಿದ್ದಾರೆ.
'ಕಾಲಾ' ವಿವಾದ: ಅವರು ಮಾಡಿದ್ರೆ ಸರಿ, ನಾವ್ ಮಾಡಿದ್ರೆ ತಪ್ಪಾ.?
ವಿರೋಧ ನಿರೀಕ್ಷೆ ಮಾಡಿದ್ದೆ
''ನಾನು ಬಹಳ ವಿರೋಧವನ್ನು ನಿರೀಕ್ಷೆ ಮಾಡಿದ್ದೆ. ಆದರೆ, ಅದರ ಪ್ರಮಾಣ ತೀರಾ ಕಡಿಮೆ ಇದೆ. ಸಿನಿಮಾದಲ್ಲಿ ನಿಜಕ್ಕೂ ಒಳ್ಳೆಯ ಕಥೆಯಿದೆ. ಅದು ಚೆನ್ನಾಗಿ ಓಡಲಿದೆ. ಒಳ್ಳೆಯದನ್ನು ಪ್ರೇಕ್ಷಕರು ಖಂಡಿತಾ ಇಷ್ಟಪಡುತ್ತಾರೆ. ಚೆನ್ನಾಗಿಲ್ಲದಿದ್ದರೆ ಅವರು ಅದನ್ನು ಕೈಬಿಡುತ್ತಾರೆ' ಎಂದು ರಜನಿ ಹೇಳಿದ್ದಾರೆ.
ಕರ್ನಾಟಕದಲ್ಲಿ 'ಕಾಲಾ' ರಿಲೀಸ್ ಆಗಿಲ್ಲ ಅಂದ್ರೆ ಎಷ್ಟು ಕೋಟಿ ನಷ್ಟವಾಗುತ್ತೆ.?
ಹೈ ಕೋರ್ಟ್ ಮೊರೆ ಹೋದ ನಿರ್ಮಾಪಕ
ಮತ್ತೊಂದೆಡೆ 'ಕಾಲಾ' ಸಿನಿಮಾಗೆ ಅಡ್ಡಿಯಾಗದಂತೆ ರಕ್ಷಣೆ ನೀಡಬೇಕು ಎಂದು ನಿರ್ಮಾಪಕರು ಕರ್ನಾಟಕ ಹೈ ಕೋರ್ಟ್ ಮೊರೆ ಹೋಗಿದ್ದಾರೆ. ಸರ್ಕಾರ ಅಧಿಕೃತವಾಗಿ ನಿಷೇಧ ಮಾಡಿಲ್ಲ. ಹೀಗಾಗಿ, ಕೋರ್ಟ್ ತೀರ್ಮಾನದ ಬಗ್ಗೆ ಕುತೂಹಲ ಹೆಚ್ಚಾಗಿದೆ.