ಪತ್ನಿ ಸಮೇತರಾಗಿ ತಿರುಪತಿ ಹಾಗೂ ಶ್ರೀಕಾಳಹಸ್ತಿ ದೇವಸ್ಥಾನಗಳಲ್ಲಿ ನಟ ದರ್ಶನ್ ಪೂಜೆ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗೆ ತಮ್ಮ ವೈಯಕ್ತಿಕ ವಿಚಾರಗಳಿಂದ ಭಾರೀ ಸುದ್ದಿ ಆಗಿದ್ದರು. ಜೊತೆಗೆ 'ಕಾಟೇರ' ಸಿನಿಮಾ ಸಕ್ಸಸ್ ಸಂಭ್ರಮದಲ್ಲೂ ತೇಲುತ್ತಿದ್ದಾರೆ. ಇದೆಲ್ಲದರ ನಡುವೆ ದರ್ಶನ್ ಕುಟುಂಬಸ್ಥರು ಹಾಗೂ ಸ್ನೇಹಿತರ ಜೊತೆ ತಿರುಪತಿ, ಕಾಳಹಸ್ತಿ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ.
ಇತ್ತೀಚೆಗೆ ನಟಿ ಪವಿತ್ರಾ ಗೌಡ 10 ವರ್ಷಗಳಿಂದ ನಟ ದರ್ಶನ್ ಜೊತೆ ರಿಲೇಷನ್ಶಿಪ್ನಲ್ಲಿ ಇರುವುದಾಗಿ ಸೋಶಿಯಲ್ ಮೀಡಿಯಾದಲ್ಲಿ ಬಹಿರಂಗಪಡಿಸಿದ್ದರು. ಈ ಬಗ್ಗೆ ವಿಜಯಲಕ್ಷ್ಮಿ ದರ್ಶನ್ ಹಾಗೂ ಪವಿತ್ರಾ ಗೌಡ ನಡುವೆ ತಿಕ್ಕಾಟ ಶುರುವಾಗಿತ್ತು. ಬಳಿಕ ಇಬ್ಬರೂ ಸುಮ್ಮನಾಗಿದ್ದರು. ಇದೀಗ ಪತ್ನಿ ಹಾಗೂ ಪುತ್ರ ವಿನೀಶ್ ಜೊತೆ ದರ್ಶನ್ ತಿರುಪತಿ ಹಾಗೂ ಕಾಳಹಸ್ತಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೊಗಳು ವೈರಲ್ ಆಗುತ್ತಿದೆ.

ಈ ಹಿಂದೆ ತಮಿಳುನಾಡಿನ ತಿರುನಲ್ಲೂರ್ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಈ ವರ್ಷ ನಟ ದರ್ಶನ್ ಹುಟ್ಟುಹಬ್ಬಕ್ಕೆ 7 ದಿನಗಳು ಮಾತ್ರ ಬಾಕಿಯಿದೆ. 'ಕಾಟೇರ' ಸಕ್ಸಸ್ ಬೆನ್ನಲ್ಲೇ ದರ್ಶನ್ 'ಡೆವಿಲ್' ಸಿನಿಮಾ ಚಿತ್ರೀಕರಣಕ್ಕೆ ಮುಂದಾಗಿದ್ದಾರೆ. ಅದಕ್ಕೂ ಮುನ್ನ ತಿರುಪತಿ ಹಾಗೂ ಕಾಳಹಸ್ತಿಗೆ ಭೇಟಿ ನೀಡಿದ್ದಾರೆ. ಮಿಲನಾ ಪ್ರಕಾಶ್ ಆ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ.
ಕೆಲ ದಿನಗಳ ಹಿಂದೆ ವಿಜಯಲಕ್ಷ್ಮಿ ದರ್ಶನ್ ಹಾಗೂ ನಟಿ ಪವಿತ್ರಾ ಗೌಡ ಇನ್ಸ್ಟಾಗ್ರಾಮ್ ಪೋಸ್ಟ್ಗಳು ವೈರಲ್ ಆಗಿತ್ತು. ಒಬ್ಬರ ಮೇಲೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದರು. ಇಬ್ಬರೂ ಕಾನೂನು ಸಮರದ ಎಚ್ಚರಿಕೆ ಕೊಟ್ಟಿದ್ದರು. ಬಳಿಕ ವಿಚಾರ ತಣ್ಣಗಾಗಿತ್ತು. ವಿಜಯಲಕ್ಷ್ಮಿ ದರ್ಶನ್ ಮಾಡಿದ್ದ ಅದೊಂದು ಪೋಸ್ಟ್ಗೆ ಪ್ರತಿಯಾಗಿ ನಟ ದರ್ಶನ್ ಜೊತೆಗಿನ ರಿಲೇಷನ್ಶಿಪ್ ಬಗ್ಗೆ ಪವಿತ್ರಾ ಗೌಡ ಪೋಸ್ಟ್ ಮಾಡಿದ್ದರು.
ದರ್ಶನ್ ಜೊತೆಗಿನ ಆತ್ಮೀಯವಾದ ಒಂದಷ್ಟು ಫೋಟೊಗಳನ್ನು ಕೊಲಾಜ್ ಮಾಡಿ ವಿಡಿಯೀ ಹಂಚಿಕೊಂಡಿದ್ದರು. "ನಮ್ಮ ರಿಲೇಷನ್ಶಿಪ್ಗೆ 10 ವರ್ಷಗಳಾಯಿತು, ಇದು ಹೀಗೆ ಮುಂದುವರೆಯುತ್ತದೆ" ಎಂದು ಬರೆದುಕೊಂಡಿದ್ದರು. ಇದಕ್ಕೆ ವಿಜಯಲಕ್ಷ್ಮಿ ದರ್ಶನ್ ಆಕ್ರೋಶ ವ್ಯಕ್ತಪಡಿಸಿದ್ದರು. ಪವಿತ್ರಾ ಗೌಡ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿದ್ದರು.
"ಈ ಮಹಿಳೆಗೆ ಪ್ರಜ್ಞೆ ಇದ್ದಿದ್ದರೆ ಮತ್ತೊಬ್ಬರ ಗಂಡನ ಫೋಟೊಗಳನ್ನು ಈ ರೀತಿ ಪೋಸ್ಟ್ ಮಾಡುತ್ತಿರಲಿಲ್ಲ. ಈ ಕಾರ್ಯ ಆಕೆಯ ನೈತಿಕತೆ ಹಾಗೂ ಆದರ್ಶ ಎಂಥಹದ್ದು ಅಂತ ತೋರಿಸುತ್ತದೆ. ವ್ಯಕ್ತಿಯೊಬ್ಬ ವಿವಾಹಿತನೆಂದು ತಿಳಿದಿದ್ದರೂ ಕೂಡ ಈಕೆ ತನ್ನ ವೈಯಕ್ತಿಕ ಅಗತ್ಯಗಳಿಗಾಗಿ ಹಾಗೂ ಲಾಭಕ್ಕಾಗಿ ಆತನಿಗೆ ಹತ್ತಿರವಾಗುತ್ತಾಳೆ. ಪವಿತ್ರಾ ಮತ್ತು ಸಂಜಯ್ ಸಿಂಗ್ ಅವರ ಮಗಳು ಖುಷಿ ಗೌಡ ಎಂಬುದನ್ನು ಈ ಚಿತ್ರಗಳು ಸ್ಪಷ್ಟವಾಗಿ ಸಾಬೀತು ಮಾಡುತ್ತವೆ."
"ಸಾಮಾನ್ಯವಾಗಿ ನಾನು ವೈಯಕ್ತಿಕ ವಿಷಯಗಳ ಬಗ್ಗೆ ಮಾತನಾಡಲು ಸಾಮಾಜಿಕ ಮಾಧ್ಯಮವನ್ನು ಬಳಸುವುದಿಲ್ಲ. ಆದರೆ ನನ್ನ ಫ್ಯಾಮಿಲಿ ಹಿತದೃಷ್ಟಿಯಿಂದ ಈಗ ಧ್ವನಿ ಎತ್ತುವ ಸಮಯ ಬಂದಿದೆ ಎಂದು ನನಗೆ ಅನಿಸುತ್ತಿದೆ. ಸಮಾಜಕ್ಕೆ ತಪ್ಪು ಚಿತ್ರಣ ನೀಡಲು ಯತ್ನಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ವಿಜಯಲಕ್ಷ್ಮಿ ದರ್ಶನ್ ಎಚ್ಚರಿಕೆ ನೀಡಿದ್ದರು.

ವಿಜಯಲಕ್ಷ್ಮಿ ಪೋಸ್ಟ್ಗೆ ಪ್ರತಿಯಾಗಿ ಪವಿತ್ರಾ ಗೌಡ, "ಇಲ್ಲಿಯವರೆಗೂ ಖುಷಿ ಗೌಡ, ದರ್ಶನ್ ಶ್ರೀನಿವಾಸರವರ ಮಗಳೆಂದು ನಾನು ಎಲ್ಲೂ ಹೇಳಿಲ್ಲ!! ನಾನು ಹಾಗೂ ದರ್ಶನ್ ಶ್ರೀನಿವಾಸರವರು ಕಳೆದ 10 ವರ್ಷಗಳಿಂದ ಜೊತೆಯಲ್ಲಿ ಸಂತೋಷವಾಗಿದ್ದೀವಿ. ಒಂದು ವಿಚಾರ ಗಮನದಲ್ಲಿ ಇರಲಿ, ನಾನು ಇಲ್ಲಿ ಯಾವುದೇ ವೈಯಕ್ತಿಕ ಅಗತ್ಯಗಳು ಹಾಗೂ ಅಜೆಂಡಾಗಾಗಿ ಇಲ್ಲಿಲ್ಲ. ನಮ್ಮದು 10 ವರ್ಷಗಳ ಪರಿಶುದ್ಧ ಪ್ರೀತಿ ಹಾಗೂ ಕಾಳಜಿ. ವಿಷಯ ವಿಜಯಲಕ್ಷ್ಮಿ ಅವರಿಗೂ ಮೊದಲೇ ತಿಳಿದಿರುತ್ತದೆ. ಈ ವಿಚಾರವಾಗಿ ವಿಜಯಲಕ್ಷ್ಮಿರವರೆ ನನಗೆ ಹಲವಾರು ಸಾರಿ ಕರೆ ಮಾಡಿ ನನ್ನ ಬಳಿ ಮಾತನಾಡಿದ್ದು ವಿಜಯಲಕ್ಷ್ಮಿರವರಿಗೆ ಯಾವುದೇ ರೀತಿಯ ಪ್ರಾಬ್ಲಂ ಇಲ್ಲವೆಂದು ತಿಳಿಸಿರುತ್ತಾರೆ." ಎಂದು ಬರೆದುಕೊಂಡಿದ್ದರು.


Click it and Unblock the Notifications










