Don't Miss!
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಪ್ಪು 'ಚಕ್ರವ್ಯೂಹಕ್ಕೆ' ಕಾಜಲ್ ಸಖತ್ತಾಗಿ ಹಾಡಿದ್ರು
ತಮಿಳು ನಿರ್ದೇಶಕ ಎಮ್.ಸರವಣನ್ ಆಕ್ಷನ್-ಕಟ್ ಹೇಳಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಬಹುನಿರೀಕ್ಷಿತ ಸಿನಿಮಾ 'ಚಕ್ರವ್ಯೂಹ' ಹಲವಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಚಿತ್ರಕ್ಕೆ ದಕ್ಷಿಣ ಭಾರತದ ಖ್ಯಾತ ನಟ ಎನ್.ಟಿ ಆರ್ ಧ್ವನಿ ನೀಡಿದ ನಂತರ ನಟಿ ಕಾಜಲ್ ಅಗರ್ ವಾಲಾ ಅವರು ಧ್ವನಿ ನೀಡುತ್ತಾರೆ ಎಂದು ನಾವು ನಿಮಗೆ ಇದೇ ಫಿಲ್ಮಿಬೀಟಲ್ಲಿ ಹೇಳಿದ್ವಿ ತಾನೆ. ಇದೀಗ ನಟಿ ಕಾಜಲ್ ಅವರು ಹೈದ್ರಾಬಾದ್ ನಲ್ಲಿರುವ ಸಂಗೀತ ನಿರ್ದೇಶಕ ಎಸ್.ತಮನ್ ಅವರ ಸ್ಟುಡಿಯೋದಲ್ಲಿ ಹಾಡಿದ್ದಾರೆ.[ಪುನೀತ್ ಜೊತೆ ಡ್ಯುಯೆಟ್ ಸಾಂಗ್ ಹಾಡ್ತಾರಂತೆ ಕಾಜಲ್]
ಪವರ್ ಸ್ಟಾರ್ ಪುನೀತ್ ಮತ್ತು ನಟಿ ಕಾಜಲ್ ಅಗರ್ ವಾಲಾ ಅವರು ಹಾಡಿರುವ ಡ್ಯುಯೆಟ್ ಸಾಂಗ್ ಗೆ ಸಂಗೀತ ಮಾಂತ್ರಿಕ ಎಸ್ ತಮನ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಈಗಾಗಲೇ ಪುನೀತ್ ಅವರು ಹಾಡಿ ಮುಗಿಸಿದ್ದರು. ಇದೀಗ ಕಾಜಲ್ ಅವರೂ ಕೂಡ ಯಶಸ್ವಿಯಾಗಿ ಹಾಡಿ ಮುಗಿಸಿದ್ದಾರೆ.[ಬೆಸ್ಟ್ ಆಫ್ ಸ್ಯಾಂಡಲ್ ವುಡ್ : ನಿಮ್ಮ ಆಯ್ಕೆ ಯಾವುದು?]
ಕನ್ನಡ ಸಿನಿಮಾಗೆ ತಮಿಳು ನಿರ್ದೇಶಕರ ಆಕ್ಷನ-ಕಟ್, ನೆಗೆಟಿವ್ ಪಾತ್ರದಲ್ಲಿ ತಮಿಳು ನಟ ಅರುಣ್ ವಿಜಯ್, ಚಿತ್ರದ ಹಾಡೊಂದಕ್ಕೆ ತೆಲುಗು ನಟ ಜ್ಯೂನಿಯರ್ ಎನ್.ಟಿ ಆರ್ ಮತ್ತು ನಟಿ ಕಾಜಲ್ ಅಗರ್ ವಾಲಾ ತಮ್ಮ ಧ್ವನಿ ನೀಡಿರುವುದರಿಂದ ಈ ಸಿನಿಮಾ ಗಾಂಧಿನಗರದಲ್ಲಿ ಸದ್ಯಕ್ಕೆ ಟಾಕ್ ಆಫ್ ದ ಟಾಪಿಕ್ ಆಗಿದೆ.[ಪವರ್ ಸ್ಟಾರ್ ಚಿತ್ರಕ್ಕೆ ಧ್ವನಿ ನೀಡಿದ ಯಂಗ್ ಟೈಗರ್ NTR]
Here
it
is
!!
Just
recorded
another
song
with
the
stunner.
@MusicThaman
Thanks
a
lot
Kaj,
Overwhelmed
😃
Kaj's
debut🎤
pic.twitter.com/MqsSrQOqCS
—
N
K
LOHITH
(@lok12009)
January
7,
2016
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನಾಯಕಿಯಾಗಿ ನಟಿ ರಚಿತಾ ರಾಮ್ ಅವರು ಕಾಣಿಸಿಕೊಂಡಿದ್ದು, ಅರುಣ್ ವಿಜಯ್ ಮತ್ತು ಅಭಿನವ್ ಸಿಂಗ್ ವಿಲನ್ ಪಾತ್ರದಲ್ಲಿ ಮಿಂಚಿದ್ದಾರೆ. ಎನ್.ಕೆ ಲೋಹಿತ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಬಹಳ ನಿರೀಕ್ಷೆಯನ್ನು ಹುಟ್ಟುಹಾಕಿದೆ.