Just In
Don't Miss!
- News
ಡ್ರಗ್ಸ್ ಪ್ರಕರಣ: ಜೈಲಿನಲ್ಲಿ ಜೀವಕ್ಕೆ ಬೆದರಿಕೆ ಇದೆ ಎಂದು ಬಿಜೆಪಿ ಯುವ ನಾಯಕಿ ಪಮೇಲಾ ಆರೋಪ
- Automobiles
ರ್ಯಾಪಿಡ್ ಬದಲಾಗಿ ಹೊಸ ಸಿ ಸೆಗ್ಮೆಂಟ್ ಸೆಡಾನ್ ಬಿಡುಗಡೆ ಮಾಡಲಿದೆ ಸ್ಕೋಡಾ
- Lifestyle
ಬೆಡ್ನಲ್ಲಿ ಪುರುಷರ ಸಾಮರ್ಥ್ಯ ಹೆಚ್ಚಿಸುತ್ತೆ ಈ ಕೆಗೆಲ್ ವ್ಯಾಯಾಮ
- Sports
ಭಾರತ vs ಇಂಗ್ಲೆಂಡ್: ಕೊಹ್ಲಿ ಜೊತೆಗಿನ ಮಾತಿನ ಚಕಮಕಿ ಬಗ್ಗೆ ಪ್ರತಿಕ್ರಿಯಿಸಿದ ಬೆನ್ ಸ್ಟೋಕ್ಸ್
- Finance
ಮತ್ತಷ್ಟು ಕಡಿಮೆಯಾಯ್ತು ಚಿನ್ನದ ಬೆಲೆ: ಮಾರ್ಚ್ 04ರ ಬೆಲೆ ಇಲ್ಲಿದೆ
- Education
UAS Dharwad Recruitment 2021: ಅರೆಕಾಲಿಕ ಉಪನ್ಯಾಸಕ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ಕಳ್ಬೆಟ್ಟದ ದರೋಡೆಕೋರರು' ಬರ್ತಿದ್ದಾರೆ ಹುಷಾರ್.!
'ಭಾಗ್ಯರಾಜ್' ಚಿತ್ರದ ಮೂಲಕ ಭರವಸೆ ಮೂಡಿಸಿದ್ದ ನಿರ್ದೇಶಕ ದೀಪಕ್ ಮಧುವನಹಳ್ಳಿ ತಮ್ಮ ಎರಡನೇ ಚಿತ್ರ ಮುಗಿಸಿದ್ದಾರೆ. ಮೊದಲ ಚಿತ್ರದಲ್ಲಿ ಔಟ್ ಅಂಡ್ ಔಟ್ ಕಮರ್ಷಿಯಲ್ ಸಿನಿಮಾ ಮಾಡಿದ್ದ ದೀಪಕ್ ಈ ಬಾರಿ ಕಾದಂಬರಿ ಆಧಾರಿತ ಸಿನಿಮಾದೊಂದಿಗೆ ಎಂಟ್ರಿ ಕೊಡ್ತಿದ್ದಾರೆ.
ಹೌದು, ಅನುಷ್ ಶೆಟ್ಟಿ ಬರೆದಿರುವ 'ಕಳ್ಬೆಟ್ಟದ ದರೋಡೆಕೋರರು' ಕಾದಂಬರಿಗೆ ಸಿನಿಮಾ ರೂಪ ನೀಡಿರುವ ದೀಪಕ್, ಚಿತ್ರೀಕರಣ ಮುಗಿಸಿದ್ದಾರೆ. 'ರಾಮಾ ರಾಮಾ ರೇ' ಖ್ಯಾತಿಯ ನಟರಾಜ್ ಈ ಚಿತ್ರದ ನಾಯಕ. ನಟರಾಜ್ ಗೆ ಶ್ವೇತಾ ಪ್ರಸಾದ್ ಜೋಡಿಯಾಗಿದ್ದಾರೆ.
ಸದ್ಯ, ಕಂಪ್ಲೀಟ್ ಶೂಟಿಂಗ್ ಮುಗಿಸಿರುವ 'ಕಳ್ಬೆಟ್ಟದ ದರೋಡೆಕೋರರು' ಜನವರಿ ಅಂತ್ಯದಲ್ಲಿ ಡಬ್ಬಿಂಗ್ ಆರಂಭಿಸಲಿದ್ದಾರೆ. ಸಂಪೂರ್ಣವಾಗಿ ಹಳ್ಳಿಯ ಸೊಗಡಿನಲ್ಲೇ ಈ ಸಿನಿಮಾ ಮಾಡಿದ್ದಾರೆ. ಅನೂಪ್ ಅವರ ಜೆಪಿ ಮ್ಯೂಸಿಕ್ ಚಿತ್ರಕ್ಕೆ ಸಾಥ್ ನೀಡಿದ್ದು, ಅನೂಪ್ ಸಿಳೀನ್ ಅವರು ಎರಡು ಹಾಡುಗಳಿಗೆ ಸಂಗೀತ ಓದಗಿಸಿದ್ದಾರೆ.
ಇನ್ನುಳಿದಂತೆ ಚಿತ್ರದಲ್ಲಿ ಸುಮಾರು 35 ಪಾತ್ರಗಳು ಇರಲಿದ್ದು, ಎಲ್ಲರನ್ನ ಆಟಿಷನ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗಿದೆ. ಚಿತ್ರಕ್ಕೆ ವಿದೇಶದಲ್ಲಿ ನೆಲೆಸಿರುವ ದೀಪಕ್ ಅವರ 5-6 ಸ್ನೇಹಿತರು ಬಂಡವಾಳ ಹೂಡುತ್ತಿದ್ದಾರೆ.