Don't Miss!
- News 'ಚೆಂಬು' ಜಾಹೀರಾತಿನ ಮೂಲಕ ಮೋದಿ ಸರ್ಕಾರದ ವಿರುದ್ದ ನೇರ ದಾಳಿಗಿಳಿದ ಕಾಂಗ್ರೆಸ್
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಳ್ಬೆಟ್ಟದ ದರೋಡೆಕೋರರು' ಬರ್ತಿದ್ದಾರೆ ಹುಷಾರ್.!
'ಭಾಗ್ಯರಾಜ್' ಚಿತ್ರದ ಮೂಲಕ ಭರವಸೆ ಮೂಡಿಸಿದ್ದ ನಿರ್ದೇಶಕ ದೀಪಕ್ ಮಧುವನಹಳ್ಳಿ ತಮ್ಮ ಎರಡನೇ ಚಿತ್ರ ಮುಗಿಸಿದ್ದಾರೆ. ಮೊದಲ ಚಿತ್ರದಲ್ಲಿ ಔಟ್ ಅಂಡ್ ಔಟ್ ಕಮರ್ಷಿಯಲ್ ಸಿನಿಮಾ ಮಾಡಿದ್ದ ದೀಪಕ್ ಈ ಬಾರಿ ಕಾದಂಬರಿ ಆಧಾರಿತ ಸಿನಿಮಾದೊಂದಿಗೆ ಎಂಟ್ರಿ ಕೊಡ್ತಿದ್ದಾರೆ.
ಹೌದು, ಅನುಷ್ ಶೆಟ್ಟಿ ಬರೆದಿರುವ 'ಕಳ್ಬೆಟ್ಟದ ದರೋಡೆಕೋರರು' ಕಾದಂಬರಿಗೆ ಸಿನಿಮಾ ರೂಪ ನೀಡಿರುವ ದೀಪಕ್, ಚಿತ್ರೀಕರಣ ಮುಗಿಸಿದ್ದಾರೆ. 'ರಾಮಾ ರಾಮಾ ರೇ' ಖ್ಯಾತಿಯ ನಟರಾಜ್ ಈ ಚಿತ್ರದ ನಾಯಕ. ನಟರಾಜ್ ಗೆ ಶ್ವೇತಾ ಪ್ರಸಾದ್ ಜೋಡಿಯಾಗಿದ್ದಾರೆ.
ಸದ್ಯ, ಕಂಪ್ಲೀಟ್ ಶೂಟಿಂಗ್ ಮುಗಿಸಿರುವ 'ಕಳ್ಬೆಟ್ಟದ ದರೋಡೆಕೋರರು' ಜನವರಿ ಅಂತ್ಯದಲ್ಲಿ ಡಬ್ಬಿಂಗ್ ಆರಂಭಿಸಲಿದ್ದಾರೆ. ಸಂಪೂರ್ಣವಾಗಿ ಹಳ್ಳಿಯ ಸೊಗಡಿನಲ್ಲೇ ಈ ಸಿನಿಮಾ ಮಾಡಿದ್ದಾರೆ. ಅನೂಪ್ ಅವರ ಜೆಪಿ ಮ್ಯೂಸಿಕ್ ಚಿತ್ರಕ್ಕೆ ಸಾಥ್ ನೀಡಿದ್ದು, ಅನೂಪ್ ಸಿಳೀನ್ ಅವರು ಎರಡು ಹಾಡುಗಳಿಗೆ ಸಂಗೀತ ಓದಗಿಸಿದ್ದಾರೆ.
ಇನ್ನುಳಿದಂತೆ ಚಿತ್ರದಲ್ಲಿ ಸುಮಾರು 35 ಪಾತ್ರಗಳು ಇರಲಿದ್ದು, ಎಲ್ಲರನ್ನ ಆಟಿಷನ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗಿದೆ. ಚಿತ್ರಕ್ಕೆ ವಿದೇಶದಲ್ಲಿ ನೆಲೆಸಿರುವ ದೀಪಕ್ ಅವರ 5-6 ಸ್ನೇಹಿತರು ಬಂಡವಾಳ ಹೂಡುತ್ತಿದ್ದಾರೆ.