Don't Miss!
- News Air India: ಹಾರಾಟ ನಿಲ್ಲಿಸಿದ ಆಕಾಶದ ರಾಣಿ: ಐಶಾರಾಮಿ ವಿಮಾನದ ಬಗ್ಗೆ ಇಲ್ಲಿದೆ ಇಂಟ್ರಸ್ಟಿಂಗ್ ಮಾಹಿತಿ
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಾಳಿದಾಸ ಕನ್ನಡ ಮೇಷ್ಟ್ರು' ಚಿತ್ರಕ್ಕೆ ಎಲ್ಲೆಲ್ಲೂ ಹೌಸ್ ಫುಲ್ ಬೋರ್ಡ್.!
'ಕಾಳಿದಾಸ ಕನ್ನಡ ಮೇಷ್ಟ್ರು' ಚಿತ್ರಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ನವರಸ ನಾಯಕ ಜಗ್ಗೇಶ್ ನಿನ್ನೆಯಷ್ಟೇ ಆಕ್ರೋಶ ವ್ಯಕ್ತಪಡಿಸಿದ್ದರು. ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿರುವ 'ಕಾಳಿದಾಸ ಕನ್ನಡ ಮೇಷ್ಟ್ರು' ಚಿತ್ರವನ್ನ ಎಷ್ಟೋ ಚಿತ್ರಮಂದಿರಗಳಲ್ಲಿ ಎತ್ತಂಗಡಿ ಮಾಡಲಾಗಿತ್ತು. ಇದನ್ನ ಕಂಡ ಜಗ್ಗೇಶ್ ''ದಕ್ಷಿಣೆ ಪಡೆದು ಕಳಿಸುವ ಚಾಂಡಾಳ ವೃತ್ತಿಯಾಗಿದೆ ಚಿತ್ರರಂಗ'' ಎನ್ನುತ್ತಾ ಟ್ವಿಟ್ಟರ್ ನಲ್ಲಿ ಗುಡುಗಿದ್ದರು.
ಇಷ್ಟೆಲ್ಲಾ ಆದ ಮೇಲೆ ಒಂದು ಪವಾಡ ನಡೆದೇ ಹೋಯ್ತು ನೋಡಿ. ನಿನ್ನೆ ಶನಿವಾರ.. ವೀಕೆಂಡ್ ಮಸ್ತಿ ಮೂಡ್ ನಲ್ಲಿದ್ದ ಕನ್ನಡ ಸಿನಿ ಪ್ರಿಯರು 'ಕಾಳಿದಾಸ ಕನ್ನಡ ಮೇಷ್ಟ್ರು' ಚಿತ್ರ ವೀಕ್ಷಿಸಲು ಮುಗಿಬಿದ್ದರು. ಪರಿಣಾಮ ನಿನ್ನೆ ಎಲ್ಲೆಲ್ಲೂ 'ಕಾಳಿದಾಸ ಕನ್ನಡ ಮೇಷ್ಟ್ರು' ಚಿತ್ರ ಹೌಸ್ ಫುಲ್ ಪ್ರದರ್ಶನ ಕಂಡಿದೆ. ಇದರಿಂದ ಸಹಜವಾಗಿಯೇ 'ಕಾಳಿದಾಸ ಕನ್ನಡ ಮೇಷ್ಟ್ರು' ಶೋಗಳ ಸಂಖ್ಯೆ ದುಪ್ಪಟ್ಟಾಗಿದೆ.
ಬೆಂಗಳೂರಿನ ಮುಖ್ಯ ಚಿತ್ರಮಂದಿರ ನರ್ತಕಿಯಲ್ಲೂ 'ಕಾಳಿದಾಸ ಕನ್ನಡ ಮೇಷ್ಟ್ರು' ಮತ್ತೆ ಪ್ರದರ್ಶನ ಆಗುತ್ತಿದೆ. ಮೈಸೂರಿನ ಪದ್ಮ ಥಿಯೇಟರ್ ನಲ್ಲೂ ಪ್ರೇಕ್ಷಕರ ಒತ್ತಾಯದ ಮೇರೆಗೆ 'ಕಾಳಿದಾಸ ಕನ್ನಡ ಮೇಷ್ಟ್ರು' ಪುನಃ ಪಾಠ ಶುರು ಮಾಡಲಿದ್ದಾರೆ. ಮುಂದೆ ಓದಿರಿ...
ಪ್ರತಿಭಟನೆ ಸಜ್ಜಾದ ಚಿತ್ರತಂಡ
ಈ ಎಲ್ಲದರ ನಡುವೆ 'ಕಾಳಿದಾಸ ಕನ್ನಡ ಮೇಷ್ಟ್ರು' ಚಿತ್ರಕ್ಕೆ ಕೆಲ ಪ್ರದರ್ಶಕರು ತೊಂದರೆ ಕೊಡುತ್ತಿದ್ದಾರಂತೆ. ಅವರುಗಳ ವಿರುದ್ಧ ಪ್ರತಿಭಟನೆ ಮಾಡಲು ಚಿತ್ರತಂಡ ಸಜ್ಜಾಗಿದೆ.
'ದಕ್ಷಿಣೆ ಪಡೆದು ಕಳಿಸುವ ಚಾಂಡಾಳ ವೃತ್ತಿಯಾಗಿದೆ ಚಿತ್ರರಂಗ': ನಟ ಜಗ್ಗೇಶ್ ಆಕ್ರೋಶ
ಗಣ್ಯರು ಮೆಚ್ಚಿದ ಸಿನಿಮಾ
ಕಾನ್ವೆಂಟ್ ಶಾಲೆಗಳ ಅಬ್ಬರ, ಮುಚ್ಚುತ್ತಿರುವ ಸರ್ಕಾರಿ ಶಾಲೆಗಳು, ಶಿಕ್ಷಣ ದಂಧೆ, ಮುಗ್ಧ ಮನಸ್ಸಿನ ಮಕ್ಕಳು ಪಡುವ ಮಾನಸಿಕ ವೇದನೆಯಂತಹ ಗಂಭೀರ ಸಮಸ್ಯೆಗಳ ಸುತ್ತ ಸುತ್ತುವ ಸಿನಿಮಾ 'ಕಾಳಿದಾಸ ಕನ್ನಡ ಮೇಷ್ಟ್ರು'. ಈ ಚಿತ್ರ ವೀಕ್ಷಿಸಿ ಜಯಂತ್ ಕಾಯ್ಕಿಣಿ, ಯೋಗರಾಜ್ ಭಟ್, ಕವಿತಾ ಲಂಕೇಶ್, ಪರಿಮಳ ಜಗ್ಗೇಶ್ ಸೇರಿದಂತೆ ಹಲ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
'ಕಾಳಿದಾಸ ಕನ್ನಡ ಮೇಷ್ಟ್ರು' ಚಿತ್ರವನ್ನು ನೋಡಿ ಜಗ್ಗೇಶ್ ಪತ್ನಿ ಪರಿಮಳ ಹೇಳಿದ್ದು ಹೀಗೆ.!
ಕರುಣೆ ತೋರದ ಥಿಯೇಟರ್ ಮಾಲೀಕರು
ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಇದ್ದರೂ, ಕೆಲ ಥಿಯೇಟರ್ ಗಳಿಂದ 'ಕಾಳಿದಾಸ ಕನ್ನಡ ಮೇಷ್ಟ್ರು' ಚಿತ್ರವನ್ನು ಕಿತ್ತು ಹಾಕಲಾಗಿತ್ತು. ಅಸಲಿಗೆ, ಮೊನ್ನೆ ಶುಕ್ರವಾರ ಕನ್ನಡದ 9 ಸಿನಿಮಾಗಳು ತೆರೆಗೆ ಬಂದಿತ್ತು. ಇದರೊಂದಿಗೆ ಪರಭಾಷೆಯ 30 ಕ್ಕೂ ಹೆಚ್ಚು ಚಿತ್ರಗಳು ಬೆಂಗಳೂರಿನಲ್ಲಿ ಬಿಡುಗಡೆ ಆಗಿತ್ತು. ಹೀಗಾಗಿ, 'ಕಾಳಿದಾಸ ಕನ್ನಡ ಮೇಷ್ಟ್ರು'ಗೆ ಥಿಯೇಟರ್ ಮಾಲೀಕರು ಕರುಣೆ ತೋರಲಿಲ್ಲ.
'ಕಾಳಿದಾಸ ಕನ್ನಡ ಮೇಷ್ಟ್ರು'ಗೆ ಜೈಕಾರ ಹಾಕಿದ ಯೋಗರಾಜ್ ಭಟ್
ಪ್ರೇಕ್ಷಕರೇ ಪೋಷಕರಾಗಬೇಕು.!
ಕನ್ನಡ ಸಿನಿ ಪ್ರಿಯರು ನಿನ್ನೆ 'ಕಾಳಿದಾಸ ಕನ್ನಡ ಮೇಷ್ಟ್ರು' ಕೈಹಿಡಿದ ಕಾರಣ ಚಿತ್ರತಂಡಕ್ಕೆ ಮತ್ತೆ ಜೀವ ಬಂದಿದೆ. ಕರ್ನಾಟಕದ ಹಲವೆಡೆ ಮತ್ತೆ ಮೇಷ್ಟ್ರ ಪಾಠ ಜೋರಾಗಿ ಕೇಳಿ ಬರುವ ಸಾಧ್ಯತೆ ಇದೆ. ಕಾಳಿದಾಸನಿಗೆ ಪ್ರೇಕ್ಷಕರೇ ಪೋಷಕರಾದರೆ, ಚಿತ್ರತಂಡಕ್ಕೆ ಅದಕ್ಕಿಂತ ಇನ್ನೇನು ಬೇಕು.?