Don't Miss!
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Lifestyle ದೇಹದಲ್ಲಿ ಈ ಬದಲಾವಣೆ ಆದರೆ ನಿಮ್ಮಲ್ಲಿ ವಿಟಮಿನ್ ಬಿ12 ಕೊರತೆಯಾಗಿದೆ ಎಂದರ್ಥ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾ ಮತ್ತು ಧರ್ಮ-ಸಂಸ್ಕೃತಿ ಬಗ್ಗೆ ಕಲ್ಲಡ್ಕ ಪ್ರಭಾಕರ್ ಭಟ್ಟ ಮಾತು
ಧರ್ಮ ಸಂಸ್ಕೃತಿಯನ್ನು ಉಳಿಸಿಕೊಳ್ಳುವಲ್ಲಿ ಸಿನಿಮಾಗಳ ಪಾತ್ರ ಮಹತ್ತರವಾದದ್ದು, ಅದಲ್ಲದೇ ಚಲನಚಿತ್ರಗಳು ಧರ್ಮ ಸತ್ವವನ್ನು ಉಳಿಸಿಕೊಳ್ಳುವಂತ ಕಾರ್ಯವನ್ನು ಬೆಳೆಸಿಕೊಳ್ಳಬೇಕಾಗಿದೆ ಎಂದು ಪುತ್ತೂರು ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ಉಪ್ಪಿನಂಗಡಿಯ ಮಹಾಕಾಳಿ ಮೆಚ್ಚಿ ಜಾತ್ರೆಯ ಸಂದರ್ಭದಲ್ಲಿ ದೇವಸ್ಥಾನದ ಸಭಾಂಗಣದಲ್ಲಿ ನಡೆದ ವಿಕ್ರಾಂತ್ ತುಳು ಸಿನಿಮಾದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಆಡಿಯೋ ಬಿಡುಗಡೆ ಮಾಡಿ ಮಾತನಾಡಿದ ಅವರು, ಧರ್ಮದ ಪ್ರತಿಷ್ಠಾಪನೆಗಾಗಿ ವಿಕ್ರಾಂತ್ ಸಿನಿಮಾವು ಮಾದರಿಯಾಗಲೀ ಎಂದರು.
ಮಣ್ಣನ ಸತ್ವ, ತತ್ವ ಏನು ಎಂದು ಬಿಂಬಿಸುವ ತುಳು ಚಲನಚಿತ್ರ, ಇಂದಿನ ವಿಕಾರ ಪರಿಸ್ಥಿತಿಯಲ್ಲಿ ಸಮಾಜಕ್ಕೆ ಉತ್ತಮ ಸಂದೇಶ ನೀಡುವಂತ ಈ ತುಳು ಚಲನಚಿತ್ರವನ್ನು ರಚಿಸಿದ ತಂಡವನ್ನು ಅಭಿನಂದಿಸುವುದಾಗಿ ಹೇಳಿದ ಅವರು, ಇಂದಿನ ಆಧುನಿಕ ಯುಗದಲ್ಲಿ ಕುಟುಂಬ ಸಮೇತ ನೋಡುವಂತಹ ಸಿನಿಮಾ ಇದಾಗಲಿ, ಯಶಸ್ಸು ಕಾಣಲಿ ಎಂದು ಅವರು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಚಲಚಿತ್ರ ನಿರ್ಮಾಪಕರಾದ ರಾಜೇಂದ್ರ ಯಶು ಬೆದ್ರೋಡಿ, ಚಲನಚಿತ್ರ ನಿರ್ದೇಶಕಾದ ನವೀನ್ ಮಾರ್ಲ ಕೊಡಂಗೆ, ಸಾಹಿತ್ಯ , ಸಂಗೀತ ನಿರ್ದೇಶಕ ಭಾಸ್ಕರ್ ರಾವ್ ಬಿಸಿ ರೋಡ್, ಉದ್ಯಮಿಗಳಾದ ರವಿ ಕಕ್ಕೆಪದವು ಹಾಗೂ ಸಹಸ್ರಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಹಕಾರದೊಂದಿಗೆ ಆಡಿಯೋ ಕಾರ್ಯಕ್ರಮ ನೆರವೇರಿತು.
Recommended Video
ಏಪ್ರಿಲ್ 23ಕ್ಕೆ ಚಲನಚಿತ್ರ ಬಿಡುಗಡೆಯಾಗಲಿದ್ದು, ಸಿನಿಮಾವನ್ನು ಚಿತ್ರಮಂದಿರಗಳಲ್ಲಿಯೇ ವೀಕ್ಷಿಸುವಂತೆ ಚಿತ್ರ ತಂಡವು ಮನವಿ ಮಾಡಿಕೊಂಡಿತು.