Don't Miss!
- News HSRP; ಸಾರಿಗೆ ಇಲಾಖೆಯಿಂದ ಮಹತ್ವದ ಮಾಹಿತಿ
- Finance ಬೆಂಗಳೂರಿನಲ್ಲಿ ಈ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧ, ದಿನಾಂಕ, ಸಮಯ ತಿಳಿಯಿರಿ
- Technology ಡೇಟಾ ಬಳಕೆಯಲ್ಲಿ ಚೀನಾ ಮೊಬೈಲ್ ಹಿಂದಿಕ್ಕಿದ ಜಿಯೋ, ಈಗ ವಿಶ್ವದಲ್ಲೇ ದೊಡ್ಡಣ್ಣ!
- Automobiles ಕ್ರ್ಯಾಶ್ಟೆಸ್ಟ್ನಲ್ಲಿ ಈ ಹೋಂಡಾ ಕಾರಿಗೆ ಕೇವಲ 2 ಸ್ಟಾರ್: ಆದರೂ ಭಾರತೀಯರಿಗೆ ಈ ಕಾರು ಅಚ್ಚುಮೆಚ್ಚು!
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆರೆಮೇಲೆ ಬರುತ್ತಿದೆ ಮಿನುಗುತಾರೆ ಕಲ್ಪನಾ ಭೂತ
ಕನ್ನಡ ಚಿತ್ರರಂಗ ಕಂಡ ಅದ್ಭುತ ನಟಿ ಮಿನುಗುತಾರೆ ಕಲ್ಪನಾ. ಚಿತ್ರರಂಗದಲ್ಲಿ ಪ್ರಕಾಶಮಾನವಾಗಿ ಮಿನುಗಿ ಮರೆಯಾದರು ಕಲ್ಪನಾ ನೆನಪು ಸದಾ ಹಸಿರಾಗೆ ಇದೆ. ಆತ್ಮಹತ್ಯೆ ಮಾಡಿಕೊಂಡು ದುರಂತ ಅಂತ್ಯ ಕಂಡ ಕಲ್ಪನಾ ಅವರ ಆತ್ಮಕ್ಕೆ ಇನ್ನು ಮುಕ್ತಿ ಸಿಕ್ಕಂತೆ ಕಾಣುತ್ತಿಲ್ಲ.
ಕಲ್ಪನಾ ಇಹಲೋಕ ತ್ಯಜಿಸಿ 40 ವರ್ಷಗಳೆ ಆಗಿವೆ. ಆದ್ರೆ ಅವರು ಸಾವನ್ನಪ್ಪಿದ ಗೋಟೂರು ಐಬಿಯಲ್ಲಿ ಇಂದಿಗೂ ಅಮಾವಾಸ್ಯೆ-ಹುಣ್ಣಿಮೆ ಬಂತೆಂದ್ರೆ ನಟಿ ಪ್ರೇತಾತ್ಮ ಸುಳಿದಾಡುತ್ತಂತೆ. ಕಲ್ಪನಾ ಧ್ವನಿಯನ್ನ ಅಲ್ಲಿನ ಸ್ಥಳೀಯರು ಕೇಳಿ ಬೆಚ್ಚಿಬಿದ್ದಿದ್ದಾರಂತೆ. ಗೆಜ್ಜೆ ಸಪ್ಪಳ ಕೇಳಿ ಸ್ಥಳೀಯ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರಂತೆ.
ಮಿನುಗುತಾರೆ ಕಲ್ಪನಾ ಪ್ರೇತಾತ್ಮ! ವದಂತಿಯೋ..ವಾಸ್ತವವೋ?
ಹೀಗಂತ ಸುದ್ದಿಗಳು ಅನೇಕ ವರ್ಷಗಳಿಂದ ಹರಿದಾಡುತ್ತಲೆ ಇದೆ. ಕಲ್ಪನಾ ಭೂತದ ವಿಚಾರವಾಗಿ ಸ್ಯಾಂಡಲ್ ವುಡ್ ನಲ್ಲಿ ಸಿನಿಮಾವೊಂದು ತಯಾರಾಗುತ್ತಿದೆ. ಕಲ್ಪನಾ ಸಾವಿನ ನಂತರ ಆ ಊರಿನ ಸುತ್ತಮುತ್ತಿಲನ ಜನಕ್ಕೆ ಆದ ಅನುಭವವನ್ನು ಇಟ್ಟುಕೊಂಡೆ ಸಿನಿಮಾ ಮಾಡುತ್ತಿದ್ದಾರೆ ಐಟಿ ಉದ್ಯೋಗಿಗಳು.
ಈ ಚಿತ್ರಕ್ಕೆ 'ಕಲ್ಪನಾ ನಿವಾಸ' ಎಂದು ಟೈಟಲ್ ಇಡಲಾಗಿದೆ. ವಿಶೇಷ ಅಂದ್ರೆ ಈ ಚಿತ್ರದಲ್ಲಿ ಕಲ್ಪನ ಅವರ ಬಗ್ಗೆ ಯಾವುದೆ ವಿಚಾರವನ್ನು ತೋರಿಸುವುದಿಲ್ಲವಂತೆ. ಅವರ ಸಾವಿನ ನಂತರ ಆ ಊರಿನಲ್ಲಿ ಹರಿದಾಡುತ್ತಿರುವ ಕಲ್ಪನ ಭೂತದ ಬಗ್ಗೆ ಸಿನಿಮಾ ಇರಲಿದೆಯಂತೆ.
ಅಂದ್ಹಾಗೆ ಚಿತ್ರಕ್ಕೆ ವಿಜಯ್ ರಾಮ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಶೋಕ್ ಭಾರದ್ವಜ್ ನಿರ್ಮಾಣ ಮಾಡುತ್ತಿದ್ದಾರೆ. ವೇದಾ ಮತ್ತು ಆಶಿಶ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸಾಕಷ್ಟು ಕುತೂಹಲ ಮೂಡಿಸಿರುವ ಕಲ್ಪನಾ ನಿವಾಸ ಹೇಗಿರಲಿದೆ ಎನ್ನುವುದು ಸಧ್ಯದಲ್ಲೇ ಗೊತ್ತಾಗಲಿದೆ.