Don't Miss!
- News ಮಳೆ.. ಮಳೆ.. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆ!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ತೆರೆಮೇಲೆ ಬರುತ್ತಿದೆ ಮಿನುಗುತಾರೆ ಕಲ್ಪನಾ ಭೂತ
ಕನ್ನಡ ಚಿತ್ರರಂಗ ಕಂಡ ಅದ್ಭುತ ನಟಿ ಮಿನುಗುತಾರೆ ಕಲ್ಪನಾ. ಚಿತ್ರರಂಗದಲ್ಲಿ ಪ್ರಕಾಶಮಾನವಾಗಿ ಮಿನುಗಿ ಮರೆಯಾದರು ಕಲ್ಪನಾ ನೆನಪು ಸದಾ ಹಸಿರಾಗೆ ಇದೆ. ಆತ್ಮಹತ್ಯೆ ಮಾಡಿಕೊಂಡು ದುರಂತ ಅಂತ್ಯ ಕಂಡ ಕಲ್ಪನಾ ಅವರ ಆತ್ಮಕ್ಕೆ ಇನ್ನು ಮುಕ್ತಿ ಸಿಕ್ಕಂತೆ ಕಾಣುತ್ತಿಲ್ಲ.
ಕಲ್ಪನಾ ಇಹಲೋಕ ತ್ಯಜಿಸಿ 40 ವರ್ಷಗಳೆ ಆಗಿವೆ. ಆದ್ರೆ ಅವರು ಸಾವನ್ನಪ್ಪಿದ ಗೋಟೂರು ಐಬಿಯಲ್ಲಿ ಇಂದಿಗೂ ಅಮಾವಾಸ್ಯೆ-ಹುಣ್ಣಿಮೆ ಬಂತೆಂದ್ರೆ ನಟಿ ಪ್ರೇತಾತ್ಮ ಸುಳಿದಾಡುತ್ತಂತೆ. ಕಲ್ಪನಾ ಧ್ವನಿಯನ್ನ ಅಲ್ಲಿನ ಸ್ಥಳೀಯರು ಕೇಳಿ ಬೆಚ್ಚಿಬಿದ್ದಿದ್ದಾರಂತೆ. ಗೆಜ್ಜೆ ಸಪ್ಪಳ ಕೇಳಿ ಸ್ಥಳೀಯ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರಂತೆ.
ಮಿನುಗುತಾರೆ ಕಲ್ಪನಾ ಪ್ರೇತಾತ್ಮ! ವದಂತಿಯೋ..ವಾಸ್ತವವೋ?
ಹೀಗಂತ ಸುದ್ದಿಗಳು ಅನೇಕ ವರ್ಷಗಳಿಂದ ಹರಿದಾಡುತ್ತಲೆ ಇದೆ. ಕಲ್ಪನಾ ಭೂತದ ವಿಚಾರವಾಗಿ ಸ್ಯಾಂಡಲ್ ವುಡ್ ನಲ್ಲಿ ಸಿನಿಮಾವೊಂದು ತಯಾರಾಗುತ್ತಿದೆ. ಕಲ್ಪನಾ ಸಾವಿನ ನಂತರ ಆ ಊರಿನ ಸುತ್ತಮುತ್ತಿಲನ ಜನಕ್ಕೆ ಆದ ಅನುಭವವನ್ನು ಇಟ್ಟುಕೊಂಡೆ ಸಿನಿಮಾ ಮಾಡುತ್ತಿದ್ದಾರೆ ಐಟಿ ಉದ್ಯೋಗಿಗಳು.
ಈ ಚಿತ್ರಕ್ಕೆ 'ಕಲ್ಪನಾ ನಿವಾಸ' ಎಂದು ಟೈಟಲ್ ಇಡಲಾಗಿದೆ. ವಿಶೇಷ ಅಂದ್ರೆ ಈ ಚಿತ್ರದಲ್ಲಿ ಕಲ್ಪನ ಅವರ ಬಗ್ಗೆ ಯಾವುದೆ ವಿಚಾರವನ್ನು ತೋರಿಸುವುದಿಲ್ಲವಂತೆ. ಅವರ ಸಾವಿನ ನಂತರ ಆ ಊರಿನಲ್ಲಿ ಹರಿದಾಡುತ್ತಿರುವ ಕಲ್ಪನ ಭೂತದ ಬಗ್ಗೆ ಸಿನಿಮಾ ಇರಲಿದೆಯಂತೆ.
ಅಂದ್ಹಾಗೆ ಚಿತ್ರಕ್ಕೆ ವಿಜಯ್ ರಾಮ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಅಶೋಕ್ ಭಾರದ್ವಜ್ ನಿರ್ಮಾಣ ಮಾಡುತ್ತಿದ್ದಾರೆ. ವೇದಾ ಮತ್ತು ಆಶಿಶ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸಾಕಷ್ಟು ಕುತೂಹಲ ಮೂಡಿಸಿರುವ ಕಲ್ಪನಾ ನಿವಾಸ ಹೇಗಿರಲಿದೆ ಎನ್ನುವುದು ಸಧ್ಯದಲ್ಲೇ ಗೊತ್ತಾಗಲಿದೆ.