Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಶ್ವರೂಪಂ ಚಿತ್ರಕ್ಕೆ ಕರ್ನಾಟಕದಲ್ಲಿ ನಿಷೇಧ ಇಲ್ಲ
ಕಮಲ್ ಹಾಸನ್ ನಟಿಸಿ, ನಿರ್ದೇಶಿಸಿ, ನಿರ್ಮಿಸಿರುವ ಭಾರಿ ಬಜೆಟ್ 'ವಿಶ್ವರೂಪಂ' ಚಿತ್ರಕ್ಕೆ ತಮಿಳುನಾಡು ಸರ್ಕಾರ ನಿಷೇಧ ಹೇರಿದೆ. ಈ ಚಿತ್ರ ಜ.25ರಂದು ದೇಶದಾದ್ಯಂತ ಬಿಡುಗಡೆಯಾಗುತ್ತಿದೆ. ಆದರೆ ತಮಿಳುನಾಡಿನಲ್ಲಿ ಮಾತ್ರ 15 ದಿನಗಳ ಕಾಲ ನಿಷೇಧ ಹೇರಲಾಗಿದೆ.
ಈ ಚಿತ್ರಕ್ಕೆ ವಿವಿಧ ಮುಸ್ಲಿಂ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಚಿತ್ರವನ್ನು ನಿಷೇಧಿಸುವಂತೆ ಆಗ್ರಹಿಸಿದ್ದವು. ಚಿತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ಧಕ್ಕೆ ತರುವ ಸನ್ನಿವೇಶಗಳಿವೆ ಎಂದು ಆರೋಪಿಸಲಾಗಿತ್ತು. ಈ ಎಲ್ಲಾ ಕಾರಣಗಳಿಗಾಗಿ ಚಿತ್ರವನ್ನು ಬ್ಯಾನ್ ಮಾಡಲಾಗಿದೆ.
'ವಿಶ್ವರೂಪಂ' ತೆಲುಗು ಆವೃತ್ತಿ ಕೋಲಾರ, ಚಿತ್ರದುರ್ಗ, ಬಾಂಬೆ ಕರ್ನಾಟಕ, ಹೈದರಾಬಾದ್ ಕರ್ನಾಟಕ ಪ್ರದೇಶಗಳಲ್ಲಿ ಬಿಡುಗಡೆಯಾಗುತ್ತಿದೆ. ಮೊದಲೇ ಚಿತ್ರಮಂದಿರ ಸಮಸ್ಯೆಯಿಂದ ತಿಣುಕಾಡುತ್ತಿರುವ ಕನ್ನಡ ಚಿತ್ರಗಳಿಗೆ 'ವಿಶ್ವರೂಪಂ' ಚಿತ್ರ ಮತ್ತೊಂದು ಹೊಡೆತ ನೀಡಿದೆ.
ಮುಸ್ಲಿಂ ಸಂಘಟನೆಗಳ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಕಮಲ್ ಹಾಸನ್, "ತಮ್ಮ ಚಿತ್ರಕ್ಕೆ ನಿಷೇಧ ಹೇರಿರುವುದು ನಿಜಕ್ಕೂ ಆಘಾತಕಾರಿ ಬೆಳವಣಿಗೆ. ಇದೊಂದು ಸಾಂಸ್ಕೃತಿಕ ಭಯೋತ್ಪಾದನೆ" ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
"ತಮ್ಮ ಚಿತ್ರದಲ್ಲಿ ಮುಸ್ಲಿಂ ಭಾಂಧವರ ಮನೋಭಾವಗಳಿಗೆ ಧಕ್ಕೆ ತರುವಂತಹ ಯಾವುದೇ ಸನ್ನಿವೇಶಗಳಿಲ್ಲ. ಎಲ್ಲ ಧರ್ಮಗಳ ಮೌಲ್ಯಗಳನ್ನೂ ನಾನು ಗೌರವಿಸುತ್ತಾ ಬಂದಿದ್ದೇನೆ. ಎಲ್ಲ ಧಾರ್ಮಿಕ ಬಾಂಧವರೊಂದಿಗೆ ಸೋದರಭಾವದಿಂದ ಬದುಕುತ್ತಿರುವ ಭಾರತದ ಸತ್ಪ್ರಜೆ ನಾನು. ಮುಸ್ಲಿಂ ಭಾವನೆಗಳಿಗೆ ಧಕ್ಕೆ ತರುವಂತೆ ನಾನೇಕೆ ಸಿನಿಮಾ ತೆಗೆಯುತ್ತೇನೆ" ಎಂದಿದ್ದಾರೆ ಕಮಲ್. (ಒನ್ಇಂಡಿಯಾ ಕನ್ನಡ)