Don't Miss!
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬ್ರಾಹ್ಮಣರು ಗೋಮಾಂಸ ತಿಂದಿದ್ದಾರೆ: ಕಮಲ್ ಹಾಸನ್
ಸಕಲಕಲಾವಲ್ಲಭ ಕಮಲ್ ಹಾಸನ್ ಅವರು ಕೊಡುವ ಹೇಳಿಕೆಗಳು ವಿವಾದಾತ್ಮಕ ತಿರುವು ಪಡೆದುಕೊಳ್ಳುವುದು ಹೊಸದೇನು ಅಲ್ಲ. ಇತ್ತೀಚೆಗೆ ಅವರು ಗೋಹತ್ಯೆ ನಿಷೇಧದ ಬಗ್ಗೆ ಅವರು ಕೊಟ್ಟಿರುವ ತಾಜಾ ಹೇಳಿಕೆ ಇದೀಗ ಹೊಸ ಸಂಚಲನಕ್ಕೆ ಕಾರಣವಾಗಿದೆ.
ಗೋಹತ್ಯೆಯನ್ನು ನಿಷೇಧಿಸಿರುವುದು ಸರಿಯಲ್ಲ ಎಂದಿರುವ ಅವರು, ನಿಷೇಧ ವಿಧಿಸುವುದಾದರೆ ಎಲ್ಲ ಹತ್ಯೆಗಳನ್ನೂ ನಿಷೇಧಿಸಲಿ. ಯಾವುದೇ ಪ್ರಾಣಿಯನ್ನೂ ಹತ್ಯೆ ಮಾಡಬಾರದು. ಮಹಾವಿಷ್ಣು ಮತ್ಸ್ಯಾವತಾರ ತಾಳಿದ ಕಾರಣ...ಗೋವಿನಂತೆ ಮೀನು ಸಹ ಪವಿತ್ರವಾದದ್ದು. ಅದರ ಹತ್ಯೆಯನ್ನೂ ನಿಷೇಧಿಸಿ.
ನಮ್ಮ ದೇಶದ ಕೆಲವು ಪ್ರದೇಶಗಳಲ್ಲಿ ಬ್ರಾಹ್ಮಣರು ಸಹ ಮೀನನ್ನು ತಿನ್ನುತ್ತಾರೆ. ಇದಿಷ್ಟೇ ಅಲ್ಲದೆ ಕೆಲವು ಶತಮಾನಗಳ ಹಿಂದೆ ಬ್ರಾಹ್ಮಣರು ಗೋಮಾಂಸವನ್ನು ತಿನ್ನುತ್ತಿದ್ದರು ಎಂದು ಪುರಾಣ ಗ್ರಂಥಗಳಲ್ಲಿ ಇದೆ. ಮಾಂಸಾಹಾರ, ಶಾಕಾಹಾರ ಅದು ಅವರರವರ ವೈಯಕ್ತಿಕ ಇಷ್ಟ ಎಂದು ಕಮಲ್ ತನ್ನದೇ ಆದಂತಹ ಡೈಲಾಗ್ ಹೊಡೆದಿದ್ದಾರೆ. [ರಮೇಶ್-ಕಮಲ್ ಜೋಡಿಯ 'ಉತ್ತಮ ವಿಲನ್' ಟ್ರೇಲರ್]
ಆಹಾರದ ಮೇಲೆ ಯಾರ ನಿಷೇಧವೂ ಇರಕೂಡದು ಎಂದಿದ್ದಾರೆ. ಮಹಾರಾಷ್ಟ್ರದಲ್ಲಿ ಗೋಹತ್ಯೆ ನಿಷೇಧವನ್ನು ಜಾರಿ ತಂದಿರುವ ಹಿನ್ನೆಲೆಯಲ್ಲಿ ಕಮಲ್ ಹಾಸನ್ ಈ ಹೇಳಿಕೆಯನ್ನು ನೀಡಿದ್ದಾರೆ. ಇದೀಗ ಅವರ ಹೇಳಿಕೆಗಳು ಭಾರಿ ಚರ್ಚೆಗೆ ಗ್ರಾಸವಾಗಿವೆ.
ಇನ್ನು ಕಮಲ್ ಹಾಸನ್ ಅವರ ಚಿತ್ರಗಳ ವಿಚಾರಕ್ಕೆ ಬಂದರೆ, ರಮೇಶ್ ಅರವಿಂದ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ 'ಉತ್ತಮ ವಿಲನ್' ಚಿತ್ರ ಇದೇ ಮೇ.1ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಎನ್ ಲಿಂಗುಸ್ವಾಮಿ ಹಾಗೂ ಕಮಲ್ ಹಾಸನ್ ಜಂಟಿ ನಿರ್ಮಾಪಕರು.