Don't Miss!
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- News ಲೋಕಸಭಾ ಚುನಾವಣೆ 2ನೇ ಹಂತದ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ; ಮನೆ ಮನೆ ಪ್ರಚಾರಕ್ಕೆ ಅವಕಾಶ
- Sports CSK vs LSG IPL 2024: ರುತುರಾಜ್ ಭರ್ಜರಿ ಶತಕ, ದುಬೆ ಸ್ಫೋಟಕ ಬ್ಯಾಟಿಂಗ್; ಲಕ್ನೋಗೆ ಬೃಹತ್ ಗುರಿ ನೀಡಿದ ಚೆನ್ನೈ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗಣರಾಜ್ಯೋತ್ಸವದ ದಿನ ಚಿತ್ರಮಂದಿರಕ್ಕೆ ಎಂಟ್ರಿ ಕೊಡ್ತಾನೆ 'ಕನಕ'
ಇತ್ತೀಚಿಗಷ್ಟೆ ಹುಟ್ಟುಹಬ್ಬ ಮಾಡಿಕೊಂಡ ದುನಿಯಾ ವಿಜಯ್ ಅವರಿಗೆ ಇದೇ ತಿಂಗಳು ಮತ್ತೊಂದು ಸಂತೋಷದ ಸಂದರ್ಭ ಎದುರಾಗಿದೆ. ದುನಿಯಾ ವಿಜಯ್ ಅವರ ಈ ವರ್ಷದ ನಿರೀಕ್ಷಿತ ಸಿನಿಮಾ 'ಕನಕ' ಇದೇ ಶುಕ್ರವಾರ ರಿಲೀಸ್ ಆಗುತ್ತಿದೆ. ಗಣರಾಜ್ಯೋತ್ಸವದ ವಿಶೇಷವಾಗಿ ಈ ಸಿನಿಮಾ ತೆರೆಗೆ ಬರುತ್ತಿದೆ.
'ಕನಕ' ಸಿನಿಮಾ ಒಬ್ಬ ಅಪ್ಪಟ್ಟ ಡಾ.ರಾಜ್ ಕುಮಾರ್ ಅವರ ಅಭಿಮಾನಿಯ ಕಥೆಯಾಗಿದ್ದು, ಇಲ್ಲಿ ದುನಿಯಾ ವಿಜಯ್ ಆಟೋ ಡ್ರೈವರ್ ಆಗಿದ್ದಾರೆ. ಅಣ್ಣವ್ರ ಅಭಿಮಾನಿಯಾಗಿ ದುನಿಯಾ ವಿಜಯ್ ಮಿಂಚಿದ್ದಾರೆ. ಈಗಾಗಲೇ ಸಿನಿಮಾ ಟ್ರೇಲರ್ ಮತ್ತು ಹಾಡುಗಳು ಸೂಪರ್ ಹಿಟ್ ಆಗಿದೆ. ಮಾಸ್ ಪ್ರೇಕ್ಷಕರಿಗೆ ಇಷ್ಟ ಆಗುವ ಸಿನಿಮಾ ಇದಾಗಿದೆ.
ಅಣ್ಣಾವ್ರಿಗೆ ಹಾಲಿನ ಅಭಿಷೇಕ ಅಭಿಮಾನಿಗಳಿಗೆ ಬಿರಿಯಾನಿ
'ಕನಕ' ಸಿನಿಮಾದಲ್ಲಿ ಇಬ್ಬರು ನಾಯಕಿಯರಿದ್ದು, ಹರಿಪ್ರಿಯಾ ಮತ್ತು ಕೆಂಡಸಂಪಿಗೆ ಬೆಡಗಿ ಮಾನ್ವಿತಾ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆರ್.ಚಂದ್ರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ನವೀನ್ ಸಜ್ಜು ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅವರ ಎಣ್ಣಿ ಹಾಡು ಎಲ್ಲರ ಮನ ಗೆದ್ದಿದೆ.
ಇನ್ನು ಗಾಂಧಿನಗರದಲ್ಲಿ ನರ್ತಕಿ ಚಿತ್ರಮಂದಿರದಲ್ಲಿ 'ಕನಕ' ರಿಲೀಸ್ ಆಗುತ್ತಿದೆ. ಈ ಚಿತ್ರಮಂದಿರದ ಮುಂದೆ ಇಂದಿನಿಂದನೇ ಸಂಭ್ರಮ ಶುರುವಾಗಿದೆ. ನರ್ತಕಿ ಚಿತ್ರಮಂದಿರದ ಮುಂದೆ ಡಾ.ರಾಜ್ ಕುಮಾರ್ ಮತ್ತು ದುನಿಯಾ ವಿಜಯ್ ಅವರ ದೊಡ್ಡ ಕಟ್ ಔಟ್ ಹಾಕಿ ಅದಕ್ಕೆ ಇಂದು ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಲಿದ್ದಾರೆ.