Don't Miss!
- News Lok Sabha Elections 2024: ಮತದಾನದ ದಿನ ಏನಿರುತ್ತೆ...ಏನಿರಲ್ಲ..?
- Lifestyle Zero Shadow Day: ಬೆಂಗಳೂರಲ್ಲಿ ಇಂದು ಶೂನ್ಯ ನೆರಳು ದಿನ.! ಯಾವ ಸಮಯದಲ್ಲಿ ಗೊತ್ತಾ?
- Sports ಟಿ20 ವಿಶ್ವಕಪ್ಗಾಗಿ ಭಾರತದ ಟಾಪ್ 3 ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ವಿರಾಟ್ ಕೊಹ್ಲಿ ಸ್ಥಾನವೇನು?
- Finance April 24 Gold Rate: ಚಿನ್ನದ ಬೆಲೆ ಇಳಿಕೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Technology Infinix: ನಾಳೆ ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ಫೋನ್ ಖರೀದಿಗೆ ಲಭ್ಯ..108ಎಂಪಿ ಕ್ಯಾಮೆರಾ!
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಜಯ್ ನಟನೆಯ 'ಕನಕ'ನಿಗೆ ಮಹಾರಾಷ್ಟ್ರದ ಎಮ್ಮೆಗಳು
ದುನಿಯಾ ವಿಜಯ್ ಮತ್ತು ಆರ್.ಚಂದ್ರು ಕಾಂಬಿನೇಷನ್ ನಲ್ಲಿ 'ಕನಕ' ಅಣ್ಣಾವ್ರ ಅಭಿಮಾನಿ ಚಿತ್ರ ಮೊದಲ ಚಿತ್ರವಾಗಿ ನಿರ್ಮಾಣವಾಗುತ್ತಿದೆ. 'ಮಾಸ್ತಿ ಗುಡಿ' ಚಿತ್ರೀಕರಣದ ವೇಳೆ ಸಂಭವಿಸಿದ ದುರ್ಘಟನೆಯಿಂದ ಇಬ್ಬರು ನಟರು ಸಾವನಪ್ಪಿದ ಕಾರಣ ದುನಿಯಾ ವಿಜಯ್ ಯಾವುದೇ ಚಿತ್ರಗಳಲ್ಲಿ ನಟಿಸದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸೂಚಿಸಿತ್ತು.[ಅಣ್ಣಾವ್ರ ಅಭಿಮಾನಿ 'ಕನಕ' ಸಾಂಗ್ ರೆಕಾರ್ಡಿಂಗ್ ಆರಂಭ]
ಈಗ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ವಿಜಯ್ ರವರು ಚಿತ್ರದಲ್ಲಿ ನಟಿಸಲು ಅನುಮತಿ ನೀಡಿದ್ದು, ಈ ವಿಷಯ ತಿಳಿದ ಆರ್.ಚಂದ್ರು ವಿಜಯ್ ನಟನೆಯ 'ಕನಕ' ಚಿತ್ರೀಕರಣ ಮುಂದುವರೆಸಿದ್ದಾರೆ.
ಕನಕ ಚಿತ್ರತಂಡ ಈಗ ಕನಕದಾಸರ ಹುಟ್ಟಿದ ಭಾಗದ ಚಿತ್ರೀಕರಣ ಮಾಡುತ್ತಿದ್ದು, ಇದರ ಚಿತ್ರೀಕರಣಕ್ಕಾಗಿ ಮಹಾರಾಷ್ಟ್ರದಿಂದ ಲಾರಿಗಳಲ್ಲಿ ಎಮ್ಮೆಗಳನ್ನು ಬೆಂಗಳೂರಿಗೆ ತರಿಸುತ್ತಿದೆಯಂತೆ. ಅಸಲಿ ಸಿನಿಮಾ ಸಂತ ಕನಕದಾಸರ ಬಗ್ಗೆ ಅಲ್ಲವಾದರೂ ಸಹ, ಅವರಿಗೆ ಗೌರವ ಸಲ್ಲಿಸಲು ಮುಂದಾಗಿರುವುದಾಗಿ ಆರ್.ಚಂದ್ರು ಹೇಳಿದ್ದಾರೆ.[ಆರ್ ಚಂದ್ರು ಚಿತ್ರದಲ್ಲಿ 'ರಾಜ್ ಕುಮಾರ್ ಫ್ಯಾನ್' ಯಾರು ಗೊತ್ತಾ?]
'ಕನಕ' ಚಿತ್ರಕ್ಕೆ ನವೀನ್ ಸಜ್ಜು ಸಂಗೀತ ನೀಡಲಿದ್ದು, ಸತ್ಯ ಹೆಗಡೆ ಛಾಯಾಗ್ರಹಣವಿದೆ. ಮುಂದಿನ ವಾರದ ಒಳಗೆ ಚಿತ್ರಕ್ಕೆ ನಾಯಕ ನಟಿ ಆಯ್ಕೆ ಅಂತಿಮಗೊಳ್ಳಲಿದೆ ಎಂದು ಆರ್.ಚಂದ್ರು ಹೇಳಿದ್ದಾರೆ.