Don't Miss!
- News ಕಾಂಗ್ರೆಸ್ ಜನರಿಗೆ ಹೋಲ್ಸೆಲ್ ಮೋಸ ಮಾಡುತ್ತಿದೆ: ಮಾಜಿ ಸಿಎಂ
- Sports ಲಾರೆಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್ನಲ್ಲಿ ವಿರಾಟ್ ಕೊಹ್ಲಿಯ 50ನೇ ಏಕದಿನ ಶತಕ!
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
''ನಟ ಸುದೀಪ್ ರನ್ನು ಬ್ಯಾನ್ ಮಾಡಿ''- ಕನ್ನಡಪರ ಸಂಘಟನೆಯ ಒತ್ತಡ
ನಟ ಕಿಚ್ಚ ಸುದೀಪ್ ರನ್ನು ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂದು ಕನ್ನಡಪರ ಸಂಘಟನೆವೊಂದು ಒತ್ತಡ ಹೇರಿದೆ. ರಮ್ಮಿ ಜಾಹಿರಾತಿನಲ್ಲಿ ಸುದೀಪ್ ಕಾಣಿಸಿಕೊಂಡಿದ್ದು, ಇದರಿಂದ ತಪ್ಪು ಸಂದೇಶ ಹೋಗುತ್ತಿದೆ ಎಂದು ಸಂಘಟನೆ ಅಧ್ಯಕ್ಷ ಆರೋಪ ಮಾಡಿದ್ದಾರೆ.
Recommended Video
''ರಮ್ಮಿ ಒಂದು ಜೂಜಾಟ. ಇದನ್ನು ಸುದೀಪ್ ಪ್ರಚಾರ ಮಾಡುತ್ತಿದ್ದಾರೆ. ಇದು ಅನೇಕರ ಮೇಲೆ ಪರಿಣಾಮ ಬೀರಿದೆ. ಸಾಕಷ್ಟು ಅಭಿಮಾನಿಗಳನ್ನು ಕೆಟ್ಟ ದಾರಿಗೆ ಪ್ರಚೋದಿಸುತ್ತಿದ್ದಾರೆ. ಇದರಿಂದ ಎಷ್ಟೋ ಜನರ ಜೀವನ ಹಾಳಾಗುತ್ತಿದೆ'' ಎಂದು ಆರೋಪ ಮಾಡಿದ್ದಾರೆ.
ಸುದೀಪ್ ಕೂಡಲೇ ಈ ಜಾಹಿರಾತಿನಿಂದ ಹೊರ ಬರಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇಲ್ಲದಿದ್ದರೆ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂದು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಂಘಟನೆಯ ಅಧ್ಯಕ್ಷ ಶಿವಕುಮಾರ್ ನಾಯಕ್ ದೂರು ನೀಡಿದ್ದಾರೆ.
ದಾದಾ ಸಾಹೇಬ್ ಫಾಲ್ಕೆ ಭರವಸೆ ನಟ ಪ್ರಶಸ್ತಿ ಸ್ವೀಕರಿಸಿದ ಕಿಚ್ಚ ಸುದೀಪ್
ಒಬ್ಬ ನಟ ಜೂಜಾಟಕ್ಕೆ ಸಂದೇಶ ಕೊಡಬಾರದು. ದರ್ಶನ್, ಯಶ್ ರೀತಿ ಒಳ್ಳೆಯ ಕೆಲಸಕ್ಕೆ ಪ್ರೇರಣೆ ನೀಡಲಿ. ಯಶೋಮಾರ್ಗದಿಂದ ಯಶ್ ಸಾಕಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆ. ಈ ರೀತಿ ಸುದೀಪ್ ಸಹ ಒಳ್ಳೆ ಸಂದೇಶವನ್ನು ಅಭಿಮಾನಿಗಳಿಗೆ ನೀಡಬೇಕು ಎಂದು ಶಿವಕುಮಾರ್ ನಾಯಕ್ ಹೇಳಿದ್ದಾರೆ.
ಜಾಹಿರಾತಿನಲ್ಲಿ ಕಾಣಿಸಿಕೊಂಡ ಸುದೀಪ್ : ಬ್ಯಾನ್ ಮಾಡಿ ಎಂದು ಕನ್ನಡಪರ ಸಂಘಟನೆಯ ಒತ್ತಡ ಹೇರಿದೆ @KicchaSudeep | #sudeep | #rummyadvertisement pic.twitter.com/U6WwYCcnEl
— Kannada Filmibeat (@FilmibeatKa) February 26, 2020
5ನೇ ತಾರೀನ ಒಳಗೆ ಸುದೀಪ್ ರನ್ನು ಸಂಪರ್ಕಿಸುವುದಾಗಿ ಅಧ್ಯಕ್ಷರು ಭರವಸೆ ನೀಡಿದ್ದು, ಅದು ಆಗದೆ ಇದ್ದರೆ, ಸುದೀಪ್ ಮನೆಯ ಮುಂದೆ ಧರಣಿ ಮಾಡುವುದಾಗಿ ಸಂಘಟನೆ ಅಧ್ಯಕ್ಷರು ಎಚ್ಚರಿಕೆ ನೀಡಿದ್ದಾರೆ.