Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್-ಯಶ್ ಸ್ಫೂರ್ತಿಯಿಂದ ಅಭಿಮಾನಿಗಳಲ್ಲಿ ಮನವಿ ಮಾಡಿದ ಅಭಿಷೇಕ್ ಅಂಬರೀಶ್
Recommended Video
ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿಮಾನಿಗಳಲ್ಲಿ ಒಂದು ಮನವಿ ಮಾಡಿಕೊಂಡಿದ್ದಾರೆ. ಅಭಿಷೇಕ್ ಹುಟ್ಟುಹಬ್ಬ ಸಮೀಪಿಸುತ್ತಿದೆ. ಮುಂದಿನ ತಿಂಗಳು ಆಕ್ಟೋಬರ್ 3ಕ್ಕೆ ಅಭಿಷೇಕ್ ಹುಟ್ಟುಹಬ್ಬ. ಈಗಾಗಲೆ ಅಭಿಮಾನಿಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಆದ್ರೆ ಅಭಿಷೇಕ್ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.
ದೂರದ ಊರುಗಳಿಂದ ಬರುವ ಅಭಿಮಾನಿಗಳು ಹುಟ್ಟುಹಬ್ಬಕ್ಕೆ ವಿಶ್ ಮಾಡಲು ಇಲ್ಲಿವರೆಗೂ ಬರುವುದು ಬೇಡ. ಅಲ್ಲೆ ನಿಮ್ಮ ನಿಮ್ಮ ಊರಿನಲ್ಲಿಯೆ ಅಂಬರೀಶ್ ಹೆಸರಿನಲ್ಲಿ ಗಿಡ ನೆಟ್ಟು ಗೌರವ ಸಲ್ಲಿಸಿ ಅದೆ ಹುಟ್ಟುಹಬ್ಬ ಆಚರಿಸಿದಂತೆ ಎಂದು ಕೇಳಿಕೊಂಡಿದ್ದಾರೆ. ಈ ಬಗ್ಗೆ ದೀರ್ಘವಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಅಂಬಿ ಪುತ್ರನ ಎರಡನೇ ಸಿನಿಮಾಗೆ 'ಆರೆಂಜ್' ನಿರ್ದೇಶಕನ ಸಾರಥ್ಯ?
"ಇದು ನನ್ನ ಒಂದು ಸಣ್ಣ ಮನವಿ. ನನ್ನ ತಂದೆಗೆ ಎಷ್ಟು ಕೊಟ್ಟಿದ್ದೀರೋ ನನಗೂ ಅಷ್ಟೆ ಪ್ರೀತಿ ಕೊಟ್ಟು ಇಲ್ಲೀವರೆಗೂ ಬೆಳೆಸುತ್ತಾ ಬಂದಿದ್ದೀರಿ. ಚಿಕ್ಕಂದಿನಿಂದ ಇಲ್ಲಿಯವರೆಗೆ ಪ್ರತೀ ವರ್ಷ ತಮ್ಮ ತಮ್ಮ ಊರುಗಳಿಂದ ನನ್ನ ಹುಟ್ಟುಹಬ್ಬಕ್ಕೆ ಬಂದು, ಆಶೀರ್ವಾದ ಮಾಡಿ ಹಾರೈಸಿದ್ದೀರಿ. ನಿಮ್ಮ ಈ ಪ್ರೀತಿ ಅಭಿಮಾನಕ್ಕೆ ನಮ್ಮ ಕುಟುಂಬ ಸದಾ ಚಿರಋಣಿ. ಆದರೆ ಈ ವರ್ಷ ನನ್ನ ತಂದೆ ದಿವಂಗತರಾಗಿರುವುದರಿಂದ ನನ್ನ ಹುಟ್ಟುಹಬ್ಬವನ್ನು ಆಚರಿಸುವ ಬದಲು, ನಾವೆಲ್ಲರೂ ನಮ್ಮ ನಮ್ಮ ಊರುಗಳಲ್ಲಿ ಅಥವಾ ನಮ್ಮ ನಿವಾಸಗಳ ಹತ್ತಿರ ರೆಬೆಲ್ ಸ್ಟಾರ್ ಅಂಬರೀಶ್ ಹೆಸರಿನಲ್ಲಿ ಗಿಡ ನೆಟ್ಟು ಗೌರವ ಸಲ್ಲಿಸೋಣ. ಇದರ ಮೂಲಕ ಅವರ ನೆನಪು ನಮ್ಮೊಂದಿಗೆ ಸದಾ ಇರಲಿ. ಇದು ತಮ್ಮಲ್ಲಿ ವಿನಂತಿ" ಎಂದು ಕೇಳಿಕೊಂಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಅನೇಕ ನಟರು ಸಹ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಕೊಳ್ಳುವ ನಿರ್ಧಾರ ಮಾಡಿದ್ದಾರೆ. ಈಗ ಅದೆ ಸಾಲಿಗೆ ನಟ ಅಭಿಷೇಕ್ ಅಂಬರೀಶ್ ಕೂಡ ಸೇರಿದ್ದಾರೆ. ವಿಶೇಷ ಅಂದ್ರೆ ಈ ಪೋಸ್ಟ್ ಹಾಕುವ ಜೊತೆಗೆ "ಇದು ತನ್ನ ಸಹೋದರರಾದ ದರ್ಶನ್ ಮತ್ತು ಸುದೀಪ್ ಅವರಿಂದ ಸ್ಫೂರ್ತಿ ಪಡೆದು ಈ ನಿರ್ಧಾರ ಕೈಗೊಂಡಿದ್ದೀನಿ" ಎಂದು ಬರೆದುಕೊಂಡಿದ್ದಾರೆ.