ಡಾ.ರಾಜ್ ಸ್ಮಾರಕ ಪಕ್ಕದಲ್ಲಿ ಅಂಬರೀಶ್ ಅಂತ್ಯಕ್ರಿಯೆ ನಡೆಸಲು ತೀರ್ಮಾನ

Recommended Video

Ambareesh, Kannada Actor Demise : ಡಾ ರಾಜ್ ಸ್ಮಾರಕ ಪಕ್ಕದಲ್ಲೇ ಅಂಬರೀಶ್ ಅಂತ್ಯಕ್ರಿಯೆಗೆ ನಿರ್ಧಾರ

ಕರುನಾಡ ಕರ್ಣ, ಸ್ಯಾಂಡಲ್ ವುಡ್ ನ ರೆಬೆಲ್ ಸ್ಟಾರ್ ಅಂಬರೀಶ್ ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅಂಬರೀಶ್ ನಿನ್ನೆ (ನವೆಂಬರ್ 24) ರಾತ್ರಿ 10.15 ಸುಮಾರಿಗೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ವಿಧಿವಶರಾದರು.

ಅಂಬರೀಶ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ, ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಯಶ್, ರಾಕ್ ಲೈನ್ ವೆಂಕಟೇಶ್, ದ್ವಾರಕೀಶ್ ಸೇರಿದಂತೆ ಚಿತ್ರರಂಗದ ತಾರೆಯರು ವಿಕ್ರಂ ಆಸ್ಪತ್ರೆಗೆ ಭೇಟಿ ಕೊಟ್ಟರು.

ಸದ್ಯಕ್ಕೆ ಅಂಬರೀಶ್ ಮೃತದೇಹ ಇನ್ನೂ ವಿಕ್ರಂ ಆಸ್ಪತ್ರೆಯಲ್ಲೇ ಇದ್ದು, ಭಾನುವಾರ (ನವೆಂಬರ್ 25) ಬೆಳಗ್ಗೆ 8 ಗಂಟೆಯಿಂದ ಬೆಂಗಳೂರಿನ ಕಂಠೀರವ ಸ್ಟೇಡಿಯಮ್ ನಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ.

kannada-actor-ambareesh-final-rites-be-held-at-kanteerava-studio-bengaluru

ರಾಜ್ಯ ಸರ್ಕಾರ ಹೊರಡಿಸಿರುವ ಅಧಿಕೃತ ಪ್ರಕಟಣೆ ಪ್ರಕಾರ, ಭಾನುವಾರ ಇಡೀ ದಿನ ಕಂಠೀರವ ಸ್ಟೇಡಿಯಮ್ ನಲ್ಲಿ ಸಾರ್ವಜನಿಕರು ಅಂತಿಮ ದರ್ಶನ ಪಡೆಯಬಹುದು. ಮಂಡ್ಯದಿಂದ ಬರುವ ಅಭಿಮಾನಿಗಳಿಗೆ ಕೆ.ಎಸ್.ಆರ್.ಟಿ.ಸಿ ಕಡೆಯಿಂದ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ಸೋಮವಾರ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್ ಸ್ಮಾರಕ ಪಕ್ಕದಲ್ಲಿ ಅಂಬರೀಶ್ ಅಂತಿಮ ಸಂಸ್ಕಾರ ನಡೆಸಲು ಸರ್ಕಾರ ತೀರ್ಮಾನ ಮಾಡಿದೆ. ಕುಟುಂಬಸ್ಥರು ಮತ್ತು ಚಿತ್ರರಂಗದ ಒಪ್ಪಿಗೆ ಪಡೆದು ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

ಸೋಮವಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂಬರೀಶ್ ಅಂತಿಮ ಸಂಸ್ಕಾರ ನಡೆಯಲಿದೆ. ರಾಜ್ಯ ಸರ್ಕಾರ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದೆ.

More from Filmibeat

English summary
Kannada Actor Ambareesh final rites to be held at Kanteerava Studio, Bengaluru.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X