Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮನೆಗೆ ಬರಲಿಲ್ಲ ಅಂದ್ರೆ ಸಾಯಿಸ್ತೀನಿ ಬಡ್ಡಿಮಗನೇ' ಎಂದಿದ್ದ ಅಂಬರೀಶ್.!
ಕನ್ನಡ ಚಿತ್ರರಂಗದ ಹಿರಿಯ ಕೊಂಡಿ ಕಳಚಿ ಬಿದ್ದಿದೆ. ರೆಬೆಲ್ ಸ್ಟಾರ್ ಅಂಬರೀಶ್ ಇಹಲೋಕ ತ್ಯಜಿಸಿದ್ದಾರೆ. ಮಂಡ್ಯದ ಗಂಡು, ಕಲಿಯುಗದ ಕರ್ಣ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.
ಅಂಬರೀಶ್ ನಿಧನಕ್ಕೆ ಇಡೀ ಕರುನಾಡು ಕಂಬನಿ ಮಿಡಿದಿದೆ. ಅಂಬರೀಶ್ ಗೆ ಅತ್ಯಂತ ಆತ್ಮೀಯರಾಗಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಭಾವುಕರಾಗಿದ್ದಾರೆ.
ಅಂಬರೀಶ್ ನಿಧನದ ಸುದ್ದಿ ಕೇಳಿದ ಕೂಡಲೆ ಬೆಂಗಳೂರಿಗೆ ಆಗಮಿಸಿದ ರಜನಿಕಾಂತ್, ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಅಂಬಿ ಪಾರ್ಥೀವ ಶರೀರದ ಮುಂದೆ ನಿಂತು ಭಾವುಕರಾದ ತಲೈವಾ, ಹಳೇ ನೆನಪುಗಳಿಗೆ ಜಾರಿ ಕಣ್ಣೀರಿಟ್ಟರು. ಅಂಬರೀಶ್ ಗೆ ರಜನಿಕಾಂತ್ ಸಲ್ಲಿಸಿದ ನುಡಿ ನಮನ ಇಲ್ಲಿದೆ...
ಮನಸ್ಸಿಗೆ ತುಂಬಾ ಭಾರವಾಗಿದೆ
''ಅಂಬರೀಶ್ ಅಗಲಿಕೆಯಿಂದ ಮನಸ್ಸಿಗೆ ತುಂಬಾ ಭಾರವಾಗಿದೆ. ನಾನು ಯಾವಾಗ ಬೆಂಗಳೂರಿಗೆ ಬಂದರೂ ಅಂಬರೀಶ್ ಮನೆಗೆ ಊಟ ಮಾಡದೇ ಹೋಗುತ್ತಿರಲಿಲ್ಲ. ನಾಲ್ಕೈದು ಬಾರಿ ಬೆಂಗಳೂರಿಗೆ ಬಂದಾಗ ಅಂಬರೀಶ್ ಮನೆಗೆ ಹೋಗಲು ಆಗಿರಲಿಲ್ಲ'' - ರಜನಿಕಾಂತ್, ನಟ
ಅಂಬಿ ಪಾರ್ಥಿವ ಶರೀರದ ಮುಂದೆ ಕಣ್ಣೀರು ಹಾಕಿದ ರಜನಿಕಾಂತ್
ಸಾಯಿಸಿಬಿಡುವೆ..
''ಏಳು ದಿನಗಳ ಹಿಂದೆಯಷ್ಟೇ ನಾನು ಬೆಂಗಳೂರಿಗೆ ಬಂದಿದ್ದೆ. ಆಗ ಫೋನ್ ಮಾಡಿದ್ದಾಗ, ನನಗೆ ಅಂಬರೀಶ್ ಬೈದಿದ್ದರು. ಮುಂದಿನ ಬಾರಿ ಮನೆಗೆ ಬಾರದೇ ಇದ್ದರೆ ಬಡ್ಡಿಮಗನೇ ನಿನ್ನನ್ನ ಸಾಯಿಸಿಬಿಡುವೆ ಎಂದಿದ್ದ'' ಎನ್ನುತ್ತಾ ರಜನಿಕಾಂತ್ ಭಾವುಕರಾದರು.
ಹಿರಿಯಣ್ಣ ಅಂಬಿ ಇನ್ನಿಲ್ಲ: ಕಂಬನಿ ಮಿಡಿದ ಕನ್ನಡ ಚಿತ್ರರಂಗ
ಸಾಧ್ಯವೇ ಇಲ್ಲ
''ಆಪ್ತ ಗೆಳೆಯರು ಒಬ್ಬರೋ, ಇಬ್ಬರೋ ಇರ್ತಾರೆ ಅಷ್ಟೇ. ಆದ್ರೆ, ಅಂಬರೀಶ್ ಗೆ ನೂರು-ಇನ್ನೂರು ಆಪ್ತ ಗೆಳೆಯರು ಇದ್ದಾರೆ. ಚಿತ್ರರಂಗದಲ್ಲಿ ಅಂಬರೀಶ್ ತರಹ ಒಬ್ಬ ನಟ ಬರಬಹುದು. ಆದ್ರೆ, ಅವರ ಹಾಗೆ ಓರ್ವ ಮನುಷ್ಯ ಬರಲು ಸಾಧ್ಯ ಇಲ್ಲ'' - ರಜನಿಕಾಂತ್, ನಟ
ಇದಕ್ಕೆ ಕಾಕತಾಳೀಯ ಅಂತೀರಾ, ವಿಚಿತ್ರ ಅಂತೀರಾ.?
ರಾಜನ ಹಾಗೆ ಬದುಕಿದ್ದ ಅಂಬರೀಶ್
''ಸುಮಲತಾ ಮತ್ತು ಅಭಿಶೇಕ್ ಗೆ ದುಃಖ ಭರಿಸುವ ಶಕ್ತಿ ಆ ದೇವರು ಕೊಡಲಿ. ಅಂಬರೀಶ್ ಆತ್ಮಕ್ಕೆ ಶಾಂತಿ ಸಿಗಲಿ. ರಾಜನ ಹಾಗೆ ಬದುಕಿದ್ದರು ಅಂಬರೀಶ್'' - ರಜನಿಕಾಂತ್, ನಟ