Don't Miss!
- News Karnataka Lok Sabha Election 2024: ಏ.26ಕ್ಕೆ ಕರ್ನಾಟಕ ಮೊದಲ ಹಂತದ ಮತದಾನ: 14 ಕ್ಷೇತ್ರ, ಅಭ್ಯರ್ಥಿ, ಪೈಪೋಟಿ ಬಗ್ಗೆ ಮಾಹಿತಿ
- Lifestyle ಐಸ್ ಟೀ ಮಾಡುವುದು ಹೇಗೆ? ಇಲ್ಲಿದೆ ಪರ್ಫೆಕ್ಟ್ ಐಸ್ ಟೀ ರೆಸಿಪಿ
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಮನೆಗೆ ಬರಲಿಲ್ಲ ಅಂದ್ರೆ ಸಾಯಿಸ್ತೀನಿ ಬಡ್ಡಿಮಗನೇ' ಎಂದಿದ್ದ ಅಂಬರೀಶ್.!
ಕನ್ನಡ ಚಿತ್ರರಂಗದ ಹಿರಿಯ ಕೊಂಡಿ ಕಳಚಿ ಬಿದ್ದಿದೆ. ರೆಬೆಲ್ ಸ್ಟಾರ್ ಅಂಬರೀಶ್ ಇಹಲೋಕ ತ್ಯಜಿಸಿದ್ದಾರೆ. ಮಂಡ್ಯದ ಗಂಡು, ಕಲಿಯುಗದ ಕರ್ಣ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.
ಅಂಬರೀಶ್ ನಿಧನಕ್ಕೆ ಇಡೀ ಕರುನಾಡು ಕಂಬನಿ ಮಿಡಿದಿದೆ. ಅಂಬರೀಶ್ ಗೆ ಅತ್ಯಂತ ಆತ್ಮೀಯರಾಗಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಭಾವುಕರಾಗಿದ್ದಾರೆ.
ಅಂಬರೀಶ್ ನಿಧನದ ಸುದ್ದಿ ಕೇಳಿದ ಕೂಡಲೆ ಬೆಂಗಳೂರಿಗೆ ಆಗಮಿಸಿದ ರಜನಿಕಾಂತ್, ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಅಂಬಿ ಪಾರ್ಥೀವ ಶರೀರದ ಮುಂದೆ ನಿಂತು ಭಾವುಕರಾದ ತಲೈವಾ, ಹಳೇ ನೆನಪುಗಳಿಗೆ ಜಾರಿ ಕಣ್ಣೀರಿಟ್ಟರು. ಅಂಬರೀಶ್ ಗೆ ರಜನಿಕಾಂತ್ ಸಲ್ಲಿಸಿದ ನುಡಿ ನಮನ ಇಲ್ಲಿದೆ...
ಮನಸ್ಸಿಗೆ ತುಂಬಾ ಭಾರವಾಗಿದೆ
''ಅಂಬರೀಶ್ ಅಗಲಿಕೆಯಿಂದ ಮನಸ್ಸಿಗೆ ತುಂಬಾ ಭಾರವಾಗಿದೆ. ನಾನು ಯಾವಾಗ ಬೆಂಗಳೂರಿಗೆ ಬಂದರೂ ಅಂಬರೀಶ್ ಮನೆಗೆ ಊಟ ಮಾಡದೇ ಹೋಗುತ್ತಿರಲಿಲ್ಲ. ನಾಲ್ಕೈದು ಬಾರಿ ಬೆಂಗಳೂರಿಗೆ ಬಂದಾಗ ಅಂಬರೀಶ್ ಮನೆಗೆ ಹೋಗಲು ಆಗಿರಲಿಲ್ಲ'' - ರಜನಿಕಾಂತ್, ನಟ
ಅಂಬಿ ಪಾರ್ಥಿವ ಶರೀರದ ಮುಂದೆ ಕಣ್ಣೀರು ಹಾಕಿದ ರಜನಿಕಾಂತ್
ಸಾಯಿಸಿಬಿಡುವೆ..
''ಏಳು ದಿನಗಳ ಹಿಂದೆಯಷ್ಟೇ ನಾನು ಬೆಂಗಳೂರಿಗೆ ಬಂದಿದ್ದೆ. ಆಗ ಫೋನ್ ಮಾಡಿದ್ದಾಗ, ನನಗೆ ಅಂಬರೀಶ್ ಬೈದಿದ್ದರು. ಮುಂದಿನ ಬಾರಿ ಮನೆಗೆ ಬಾರದೇ ಇದ್ದರೆ ಬಡ್ಡಿಮಗನೇ ನಿನ್ನನ್ನ ಸಾಯಿಸಿಬಿಡುವೆ ಎಂದಿದ್ದ'' ಎನ್ನುತ್ತಾ ರಜನಿಕಾಂತ್ ಭಾವುಕರಾದರು.
ಹಿರಿಯಣ್ಣ ಅಂಬಿ ಇನ್ನಿಲ್ಲ: ಕಂಬನಿ ಮಿಡಿದ ಕನ್ನಡ ಚಿತ್ರರಂಗ
ಸಾಧ್ಯವೇ ಇಲ್ಲ
''ಆಪ್ತ ಗೆಳೆಯರು ಒಬ್ಬರೋ, ಇಬ್ಬರೋ ಇರ್ತಾರೆ ಅಷ್ಟೇ. ಆದ್ರೆ, ಅಂಬರೀಶ್ ಗೆ ನೂರು-ಇನ್ನೂರು ಆಪ್ತ ಗೆಳೆಯರು ಇದ್ದಾರೆ. ಚಿತ್ರರಂಗದಲ್ಲಿ ಅಂಬರೀಶ್ ತರಹ ಒಬ್ಬ ನಟ ಬರಬಹುದು. ಆದ್ರೆ, ಅವರ ಹಾಗೆ ಓರ್ವ ಮನುಷ್ಯ ಬರಲು ಸಾಧ್ಯ ಇಲ್ಲ'' - ರಜನಿಕಾಂತ್, ನಟ
ಇದಕ್ಕೆ ಕಾಕತಾಳೀಯ ಅಂತೀರಾ, ವಿಚಿತ್ರ ಅಂತೀರಾ.?
ರಾಜನ ಹಾಗೆ ಬದುಕಿದ್ದ ಅಂಬರೀಶ್
''ಸುಮಲತಾ ಮತ್ತು ಅಭಿಶೇಕ್ ಗೆ ದುಃಖ ಭರಿಸುವ ಶಕ್ತಿ ಆ ದೇವರು ಕೊಡಲಿ. ಅಂಬರೀಶ್ ಆತ್ಮಕ್ಕೆ ಶಾಂತಿ ಸಿಗಲಿ. ರಾಜನ ಹಾಗೆ ಬದುಕಿದ್ದರು ಅಂಬರೀಶ್'' - ರಜನಿಕಾಂತ್, ನಟ