Don't Miss!
- Automobiles Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- News Ballari Lok Sabha Election: ಶ್ರೀರಾಮುಲು ಪತ್ನಿ ನಾಮಪತ್ರ ವಾಪಸ್, ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು
- Technology ನಾಳೆ ವಿವೋದ ಈ ಹೊಸ ಫೋನ್ ಫಸ್ಟ್ ಸೇಲ್!..ಬಜೆಟ್ ಬೆಲೆಗೆ ಲಭ್ಯ!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಾಮೀನಿನ ಮೇಲೆ 'ಮೆಂಟಲ್ ಮಂಜ' ಬಿಡುಗಡೆ
ಗುರುವಾರ (ಆ.30) ವಿಚಾರಣೆ ನಡೆಸಿದ 7ನೇ ಎಸಿಎಂಎಂ ನ್ಯಾಯಾಲಯ ಅರ್ಜುನ್ ಗೆ ಜಾಮೀನು ನೀಡಿದೆ. ರು.1 ಲಕ್ಷ ಬಾಂಡು ಹಾಗೂ 15 ದಿನಗಳಿಗೊಮ್ಮೆ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಸಹಿ ಹಾಕಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ಹಾಗೆಯೇ ಸಾಕ್ಷಿ ನಾಶಕ್ಕೆ ಪ್ರಯತ್ನಿಸಬಾರದೂ ಎಂದೂ ನ್ಯಾಯಾಲಯ ಅರ್ಜುನ್ ಅವರಿಗೆ ಎಚ್ಚರಿಕೆ ನೀಡಿದೆ. ಅರ್ಜುನ್ ಪತ್ನಿ ಲತಾಶ್ರೀ ಅವರು ವರದಕ್ಷಿಣೆ ಕಿರುಕುಳ ತಾಳಲಾರದೆ ಪೀಣ್ಯಾ ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಪೊಲೀಸರು ಮಂಗಳವಾರ (ಆ.28) ರಾತ್ರಿ ಬಂಧಿಸಿದ್ದರು.
ಮಂಗಳವಾರ ರಾತ್ರಿ ತನ್ನ ಸಂಗಡಿಗರೊಂದಿಗೆ ಆಗಮಿಸಿದ ಅರ್ಜುನ್ ಬಾಗಲಗುಂಟೆ ಎಂಇಐ ಲೇಔಟ್ ನಲ್ಲಿರುವ ತನ್ನ ಪತ್ನಿ ಲಲಾಶ್ರೀ ಹಾಗೂ ಅವರ ಮನೆಯವರ ಮೇಲೆ ಗಲಾಟೆ ಮಾಡಿದ್ದ. ಇದಿಷ್ಟೇ ಅಲ್ಲದೆ ಮನೆಯ ಭದ್ರತಾ ಸಿಬ್ಬಂದಿಯ ಮೇಲೂ ಹಲ್ಲೆ ಮಾಡಿದ್ದಾಗಿ ದೂರು ನೀಡಿಲಾಗಿತ್ತು.
ಕನ್ನಡದಲ್ಲಿ ತಕ್ಕಮಟ್ಟಿಗೆ ತನ್ನ ಛಾಪು ಮೂಡಿಸಿದ್ದ ನಟ ಈತ. ಪ್ರೇಮ್ ನಗರ, ಜರ್ನಿ, ತಿಮ್ಮ ಚಿತ್ರಗಳಲ್ಲೂ ಅಭಿನಯಿಸಿದ್ದಾರೆ. ಸದ್ಯಕ್ಕೆ 'ಆಟೋ ಮಂಜ' ಎಂಬ ಚಿತ್ರದಲ್ಲೂ ಅಭಿನಯಿಸುತ್ತಿದ್ದು ಅದು ಇನ್ನೂ ಚಿತ್ರೀಕರಣ ಹಂತದಲ್ಲಿದೆ.
ಲತಾಶ್ರೀ ಆವರನ್ನು ಅರ್ಜುನ್ ಪ್ರೀತಿಸಿ ಮದುವೆಯಾಗಿದ್ದರು. ಈಕೆ ಅರ್ಜುನ್ ಅವರ ಸಂಬಂಧಿಕರು. ಇವರಿಬ್ಬರ ದಾಂಪತ್ಯ ಜೀವನದ ಫಲವಾಗಿ ಇವರಿಗೆ 3 ವರ್ಷದ ಮಗು ಕೂಡ ಇದೆ. (ಒನ್ ಇಂಡಿಯಾ ಸಿನಿ ಡೆಸ್ಕ್)