Don't Miss!
- News ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್–2 ಬಗ್ಗೆ ಕೆವಿನ್ ಪೀಟರ್ಸನ್ ಏನ್ ಹೇಳಿದ್ರು ಗೊತ್ತಾ?
- Lifestyle 11 ರೀತಿಯ ವಾಹನಗಳ ಲೈಸೆನ್ಸ್ ಹೊಂದಿರುವ ಮಹಿಳೆ..! ಮಣಿ ಅಮ್ಮ ಎಂಬ ಧೀರ ಮಹಿಳೆ ಕಥೆ
- Sports ಮತ್ತೆ ಪಾಕಿಸ್ತಾನ ಕ್ರಿಕೆಟ್ ತಂಡದ ಚುಕ್ಕಾಣಿ ಬಾಬರ್ ಅಜಮ್ ಕೈಗೆ?
- Finance ಐಟಿಆರ್ ಸಲ್ಲಿಸಿದ್ದರೂ, ಆದಾಯ ತೆರಿಗೆ ಇಲಾಖೆಯಿಂದ ನಿಮಗೆ ಇಮೇಲ್ ಬಂದಿದೆಯೇ?
- Automobiles ಜಿಮ್ನಿಗೆ ಸೆಡ್ಡು ಹೊಡೆಯಲು ಎಂಜಿ ಮಾಸ್ಟರ್ ಪ್ಲಾನ್: ಸದ್ಯದಲ್ಲೇ ಕಾಮೆಟ್ ಆಧರಿಸಿ 5 ಡೋರ್ ಕಾರು ಭಾರತಕ್ಕೆ?
- Technology ರೆಡ್ಮಿಯ ಈ ಮೊಬೈಲ್ಗೆ ಇರುವ ಬಿಗ್ ಆಫರ್ ತಿಳಿದ್ರೆ, ಖಂಡಿತಾ ವಾವ್ ಅಂತೀರಾ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಾಮೀನಿನ ಮೇಲೆ 'ಮೆಂಟಲ್ ಮಂಜ' ಬಿಡುಗಡೆ
ಗುರುವಾರ (ಆ.30) ವಿಚಾರಣೆ ನಡೆಸಿದ 7ನೇ ಎಸಿಎಂಎಂ ನ್ಯಾಯಾಲಯ ಅರ್ಜುನ್ ಗೆ ಜಾಮೀನು ನೀಡಿದೆ. ರು.1 ಲಕ್ಷ ಬಾಂಡು ಹಾಗೂ 15 ದಿನಗಳಿಗೊಮ್ಮೆ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಸಹಿ ಹಾಕಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ಹಾಗೆಯೇ ಸಾಕ್ಷಿ ನಾಶಕ್ಕೆ ಪ್ರಯತ್ನಿಸಬಾರದೂ ಎಂದೂ ನ್ಯಾಯಾಲಯ ಅರ್ಜುನ್ ಅವರಿಗೆ ಎಚ್ಚರಿಕೆ ನೀಡಿದೆ. ಅರ್ಜುನ್ ಪತ್ನಿ ಲತಾಶ್ರೀ ಅವರು ವರದಕ್ಷಿಣೆ ಕಿರುಕುಳ ತಾಳಲಾರದೆ ಪೀಣ್ಯಾ ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಪೊಲೀಸರು ಮಂಗಳವಾರ (ಆ.28) ರಾತ್ರಿ ಬಂಧಿಸಿದ್ದರು.
ಮಂಗಳವಾರ ರಾತ್ರಿ ತನ್ನ ಸಂಗಡಿಗರೊಂದಿಗೆ ಆಗಮಿಸಿದ ಅರ್ಜುನ್ ಬಾಗಲಗುಂಟೆ ಎಂಇಐ ಲೇಔಟ್ ನಲ್ಲಿರುವ ತನ್ನ ಪತ್ನಿ ಲಲಾಶ್ರೀ ಹಾಗೂ ಅವರ ಮನೆಯವರ ಮೇಲೆ ಗಲಾಟೆ ಮಾಡಿದ್ದ. ಇದಿಷ್ಟೇ ಅಲ್ಲದೆ ಮನೆಯ ಭದ್ರತಾ ಸಿಬ್ಬಂದಿಯ ಮೇಲೂ ಹಲ್ಲೆ ಮಾಡಿದ್ದಾಗಿ ದೂರು ನೀಡಿಲಾಗಿತ್ತು.
ಕನ್ನಡದಲ್ಲಿ ತಕ್ಕಮಟ್ಟಿಗೆ ತನ್ನ ಛಾಪು ಮೂಡಿಸಿದ್ದ ನಟ ಈತ. ಪ್ರೇಮ್ ನಗರ, ಜರ್ನಿ, ತಿಮ್ಮ ಚಿತ್ರಗಳಲ್ಲೂ ಅಭಿನಯಿಸಿದ್ದಾರೆ. ಸದ್ಯಕ್ಕೆ 'ಆಟೋ ಮಂಜ' ಎಂಬ ಚಿತ್ರದಲ್ಲೂ ಅಭಿನಯಿಸುತ್ತಿದ್ದು ಅದು ಇನ್ನೂ ಚಿತ್ರೀಕರಣ ಹಂತದಲ್ಲಿದೆ.
ಲತಾಶ್ರೀ ಆವರನ್ನು ಅರ್ಜುನ್ ಪ್ರೀತಿಸಿ ಮದುವೆಯಾಗಿದ್ದರು. ಈಕೆ ಅರ್ಜುನ್ ಅವರ ಸಂಬಂಧಿಕರು. ಇವರಿಬ್ಬರ ದಾಂಪತ್ಯ ಜೀವನದ ಫಲವಾಗಿ ಇವರಿಗೆ 3 ವರ್ಷದ ಮಗು ಕೂಡ ಇದೆ. (ಒನ್ ಇಂಡಿಯಾ ಸಿನಿ ಡೆಸ್ಕ್)