ರಾಜ್ ಸಮಾಧಿ ಬಳಿ ಹೋಗಿದ್ದ ಚರಣ್ ರಾಜ್ ಗೆ ಪುನೀತ್ ಸಿಕ್ಕಿದ್ರು.! ಆಮೇಲೇನಾಯ್ತು?

By Bharath Kumar

Recommended Video

ರಾಜ್ ಸಮಾಧಿ ಬಳಿ ಚರಣ್ ರಾಜ್ ಹಾಗು ಪುನೀತ್ ಭೇಟಿ | Oneindia Kannada

ನಟ ಚರಣ್ ರಾಜ್ ಕನ್ನಡದಲ್ಲಿ ಮೊದಲನೇ ಸಲ ಒಂದು ಚಿತ್ರವನ್ನು ನಿರ್ದೇಶನ ಮಾಡಲು ಮುಂದಾಗಿರುವ ಬಗ್ಗೆ ಇತ್ತೀಚೆಗೆ ಸುದ್ದಿಯಾಗಿತ್ತು. ಇದೀಗ ಆ ಹಿನ್ನೆಲೆಯಲ್ಲಿಯೇ ಕೆಲಸ ಕಾರ್ಯಗಳನ್ನು ನಡೆಸುತ್ತಿರುವ ಚರಣ್ ರಾಜ್ ಮೊನ್ನೆ ಬೆಂಗಳೂರಿಗೆ ಬಂದಿದ್ದಾಗ ಅಚಾನಕ್ಕಾಗಿ ಎದುರುಗೊಂಡ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರನ್ನ ಭೇಟಿ ಮಾಡಿದ್ದಾರೆ.

ಡಾ.ರಾಜ್‌ಕುಮಾರ್ ಕುಟುಂಬದ ಜೊತೆ ಆತ್ಮೀಯವಾದ ಒಡನಾಟ ಇಟ್ಟುಕೊಂಡಿದ್ದ ಚರಣ್ ರಾಜ್ ಪಾರ್ವತಮ್ಮ ರಾಜ್‌ಕುಮಾರ್ ಅವರಿಗೂ ಅಚ್ಚುಮೆಚ್ಚಿನವರಾಗಿದ್ದರು. ಆದರೆ ಪಾರ್ವತಮ್ಮನವರು ಮರಣ ಹೊಂದಿದಾಗ ಅವರು ಮಲೇಶಿಯಾದಲ್ಲಿದ್ದರಂತೆ. ಅಂತಿಮ ದರ್ಶನವನ್ನೂ ಪಡೆಯಲಾಗದ ಕೊರಗಿನಲ್ಲಿದ್ದ ಚರಣ್ ರಾಜ್ ಅದನ್ನು ನೀಗಿಕೊಳ್ಳಲು ಮೊನ್ನೆ ದಿನ ಬೆಂಗಳೂರಿಗೆ ಬಂದಿದ್ದಾಗ ಪಾರ್ವತಮ್ಮ ಅವರ ಸಮಾಧಿಗೆ ತೆರಳಿ ನಮನ ಸಲ್ಲಿಸಿದ್ದರು.

ಹೀಗೆ ಪಾರ್ವತಮ್ಮ ಮತ್ತು ರಾಜ್‌ಕುಮಾರ್ ಅವರ ಸಮಾಧಿಗೆ ನಮನ ಸಲ್ಲಿಸಿ ವಾಪಾಸಾಗುತ್ತಿದ್ದಾಗಲೇ ಚರಣ್ ರಾಜ್ ಅವರಿಗೆ ಪುನೀತ್ ರಾಜ್‌ಕುಮಾರ್ ಎದುರಾಗಿದ್ದರು. ಆಮೇಲೆ ಏನಾಯ್ತು? ಮುಂದೆ ಓದಿ.....

ಸದ್ಯದಲ್ಲೇ ಚರಣ್ ರಾಜ್ ಜೊತೆ ಅಪ್ಪು ನಟನೆ.!

ಸದ್ಯದಲ್ಲೇ ಚರಣ್ ರಾಜ್ ಜೊತೆ ಅಪ್ಪು ನಟನೆ.!

ಪುನೀತ್ ಸ್ವತಃ ಚರಣ್ ನಿಮ್ಮ ಜೊತೆ ಸಿನಿಮಾ ಮಾಡಲು ಕಾಲ ಕೂಡಿ ಬರಲೇ ಇಲ್ಲ ಅಂತ ಪ್ರಸ್ತಾಪ ಮಾಡಿದಾಗ ಚರಣ್ ರಾಜ್ ಈಗಾಗಲೇ ಶಿವಣ್ಣನ ಜೊತೆಗೆಲ್ಲ ಸಿನಿಮಾ ಮಾಡಿದ್ದೇನೆ. ನಿಮ್ಮ ಜೊತೆಗೂ ನಟಿಸಬೇಕೆಂಬ ಆಸೆ ಇದೆ. ಯಾವಾಗ ಕರೆದರೂ ನಾನು ರೆಡಿಯಾಗಿರುತ್ತೇನೆ. ದೊಡ್ಡಮನೆಯ ಸಿನಿಮಾ ಮಾಡೋದಕ್ಕಿಂತ ಭಾಗ್ಯ ಬೇರೇನಿದೆ ಅಂದಿದ್ದಾರೆ. ಬೇಗನೆ ಒಟ್ಟಿಗೆ ಸಿನಿಮಾ ಮಾಡೋ ಕಾಲ ಹತ್ತಿರದಲ್ಲಿದೆ ಎಂದೂ ಪುನೀತ್ ಹೇಳಿದ್ದಾರಂತೆ.

ಪಾರ್ವತಮ್ಮ ಅಗಲಿಕೆಗೆ ಸಂತಾಪ

ಪಾರ್ವತಮ್ಮ ಅಗಲಿಕೆಗೆ ಸಂತಾಪ

ಇದೇ ಸಂದರ್ಭದಲ್ಲಿ ಪಾರ್ವತಮ್ಮನವರು ತಮ್ಮ ಬಗ್ಗೆ ಹೊಂದಿದ್ದ ಪ್ರೀತಿಯನ್ನೂ ಕೂಡಾ ಚರಣ್ ರಾಜ್ ನೆನಪಿಸಿಕೊಂಡಿದ್ದಾರೆ. ಸಿಕ್ಕಿದಲ್ಲೆಲ್ಲಾ `ಇಲ್ಲೆಲ್ಲೋ ಹುಟ್ಟಿದ ನೀನು ಬೇರೆ ಭಾಷೆಯಲ್ಲಿ ಹೋಗಿ ಹೆಸರು ಮಾಡಿದ್ದನ್ನು ಕಂಡರೆ ಹೆಮ್ಮೆ ಅನಿಸುತ್ತೆ, ನೀನು ನನ್ನ ಮಗನಿದ್ದಂತೆ ಅನ್ನುತಿದ್ದ ಪಾರ್ವತಮ್ಮನವರನ್ನು ನೆನಪಿಸಿಕೊಂಡು ಭಾವುಕರಾದರು.

ಅಪ್ಪು ಸರಳತೆ ಕಂಡು ಚರಣ್ ರಾಜ್ ಫಿದಾ

ಅಪ್ಪು ಸರಳತೆ ಕಂಡು ಚರಣ್ ರಾಜ್ ಫಿದಾ

ಅಷ್ಟು ದೊಡ್ಡ ಸ್ಟಾರ್ ನಟನಾಗಿದ್ದರೂ ಯಾವ ಹಮ್ಮು ಬಿಮ್ಮೂ ಇಲ್ಲದೆ ತಂದೆಯವರಾದ ರಾಜ್‌ಕುಮಾರ್ ಅವರಂತೆಯೇ ಸೌಜನ್ಯ ರೂಢಿಸಿಕೊಂಡಿರೋ ಪುನೀತ್ ಅವರ ಬಗ್ಗೆ ಚರಣ್ ರಾಜ್ ಅಭಿಮಾನ ವ್ಯಕ್ತ ಪಡಿಸಿದ್ದಾರೆ. ಪುನೀತ್ ಅವರೇ ಚರಣ್ ರಾಜ್ ಅವರ ಮಗ ತೇಜನ ಸಿನಿಮಾ ಯಾನದ ಕುರಿತು ಮಾತಾಡಿ ಮೆಚ್ಚುಗೆಯನ್ನೂ ಸೂಚಿಸಿದ್ದಾರೆ.

ಹೊಸ ಸಿನಿಮಾ ನಿರ್ದೇಶನ

ಹೊಸ ಸಿನಿಮಾ ನಿರ್ದೇಶನ

ಅಂತೂ ಕನ್ನಡದಲ್ಲಿಯೇ ಮತ್ತೊಂದು ಇನ್ನಿಂಗ್ಸ್ ಆರಂಭಿಸಲು ತಯಾರಿ ನಡೆಸಿರುವ ಚರಣ್ ರಾಜ್ ಅವರಿಗೆ ಪುನೀತ್ ಭೇಟಿ ಮತ್ತಷ್ಟು ಹುರುಪು ತುಂಬಿದೆ. ಏಪ್ರಿಲ್ 27ರಂದು ತಮ್ಮ ಹುಟ್ಟು ಹಬ್ಬದ ದಿನದಂದೇ ಚರಣ್ ರಾಜ್ ನಿರ್ದೇಶನದ ಚಿತ್ರಕ್ಕೆ ಚಾಲನೆ ಸಿಗಲಿದೆ. ಈ ಚಿತ್ರವನ್ನು ಮಂಜುನಾಥ್, ಎನ್ ರವಿ ಕುಮಾರ್, ಎಸ್‌ವಿಕೆ ಬ್ರದರ್ಸ್, ಸಿ ದೇವೇಂದ್ರ ರಾಜ್ ಸೇರಿದಂತೆ ಸ್ನೇಹಿತರೇ ಸೇರಿಕೊಂಡು ನಿರ್ಮಾಣ ಮಾಡಲಿದ್ದಾರೆ.

ಚರಣ್ ಚಿತ್ರದಲ್ಲಿ ಮಗ ಅಭಿನಯ

ಚರಣ್ ಚಿತ್ರದಲ್ಲಿ ಮಗ ಅಭಿನಯ

ಚಿತ್ರಕ್ಕೆ ಕಥೆ ಚಿತ್ರಕಥೆ ಮತ್ತು ನಿರ್ದೇಶನವನ್ನು ಚರಣ್ ರಾಜ್ ಅವರೇ ಮಾಡಲಿದ್ದಾರೆ. ಸಾಯಿಕೃಷ್ಣ ಸಂಭಾಷಣೆ ಬರೆಯಲಿದ್ದಾರೆ. ಈ ಚಿತ್ರದ ನಾಯಕ ಮತ್ತು ನಾಯಕಿಗಾಗಿ ಹುಡುಕಾಟ ಚಾಲ್ತಿಯಲ್ಲಿದೆ. ಕನ್ನಡದ ಖ್ಯಾತ ಕಾಮಿಡಿ ನಟರೋರ್ವರು ಮುಖ್ಯಪಾತ್ರವೊಂದನ್ನು ಮಾಡಲಿದ್ದಾರಂತೆ. ಚರಣ್ ರಾಜ್ ಅವರ ಪುತ್ರ ತೇಜ್ ಕೂಡಾ ಈ ಚಿತ್ರದ ಭಾಗವಾಗಲಿದ್ದಾರೆಂಬುದು ಅಸಲೀ ವಿಶೇಷ. ತೇಜ್ ಈ ಚಿತ್ರದಲ್ಲಿ ಒಂದು ಹಾಡಿನಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ.

More from Filmibeat

English summary
Kannada actor Charan Raj has meet sandalwood power star Puneet Raj Kumar at dr rajkumar memorial.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X