Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಚೇತನ್ ಚಂದ್ರ ಶ್ರಮಕ್ಕೆ ಸಿಕ್ಕ ಪ್ರತಿಫಲ
ಕನ್ನಡದ ನಟ ಚೇತನ್ ಚಂದ್ರ ತಮ್ಮ ಪ್ರತಿಭೆ ಮೂಲಕ ಜನಮನ್ನಣೆ ಗಳಿಸಿಕೊಂಡಿರುವ ನಟ. ಕನ್ನಡ ಚಿತ್ರರಂಗಕ್ಕೆ ಬಂದು ಸುಮಾರು 10 ವರ್ಷ ಕಳೆಯುತ್ತಿದೆ. ಇಲ್ಲಿಯವರೆಗೂ 12ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ.
ದಶಕಗಳ ಕಾಲ ಸ್ಯಾಂಡಲ್ ವುಡ್ ನಲ್ಲಿ ಏಳು-ಬೀಳು ಕಂಡ ನಟ ಈಗ ತಮ್ಮ ಜೀವನದ ಸಂತಸದ ಕ್ಷಣವನ್ನ ವ್ಯಕ್ತಪಡಿಸಿದ್ದಾರೆ. ಹೌದು, ಹೊಸ ಆಡಿ ಕಾರ್ ಖರೀದಿಸಿರುವ ಚೇತನ್ ''ಇದು ತಾಳ್ಮೆ ಮತ್ತು ಶ್ರಮಕ್ಕೆ ಸಿಕ್ಕ ಪ್ರತಿಫಲ'' ಎಂದು ಖುಷಿ ಹಂಚಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ಚೇತನ್ ಚಂದ್ರ ಅಭಿನಯದ 'ಸಂಯುಕ್ತ-2' ಸಿನಿಮಾ ಬಿಡುಗಡೆಯಾಗಿತ್ತು. ಈಗ 'ವ್ಯಾಘ್ರ' ಮತ್ತು 'ಪ್ರಭುತ್ವ' ಎಂಬ ಎರಡು ಹೊಸ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. 'ವ್ಯಾಘ್ರ' ಸಿನಿಮಾ ತಮಿಳಿನಲ್ಲೂ ತಯಾರಾಗುತ್ತಿದೆ.
ಇನ್ನು ಇದೇ ವರ್ಷ ಏಪ್ರಿಲ್ ತಿಂಗಳಿನಲ್ಲಿ ತಮ್ಮ ಗೆಳತಿ ರಚನಾ ಹೆಗಡೆ ಅವರನ್ನ ಚೇತನ್ ಚಂದ್ರ ವಿವಾಹವಾಗಿದ್ದರು. ಪರಸ್ಪರ ಪ್ರೀತಿಸಿ ಕುಟುಂಬದವರನ್ನ ಒಪ್ಪಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಹಸೆಮಣೆ ಏರಿದ ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ
'ಪಿಯುಸಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ನಟ ಚೇತನ್ ಚಂದ್ರ ಬಳಿಕ ನಟ ಯಶ್ ರೊಂದಿಗೆ 'ರಾಜಧಾನಿ' ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಬಳಿಕ 'ಹುಚ್ಚುಡುಗ್ರು', 'ಕುಂಭರಾಶಿ', 'ಪ್ಲಸ್', 'ಜಾತ್ರೆ', 'ಪ್ರೇಮಿಸಂ' ಚಿತ್ರಗಳಲ್ಲಿ ನಾಯಕರಾಗಿ ಅಭಿನಯಿಸಿದ್ದರು.
ಚೇತನ್ ಚಂದ್ರ ಚಿತ್ರಕ್ಕೆ ಟಾಲಿವುಡ್ ನಿರ್ದೇಶಕನಿಂದ ಆಕ್ಷನ್ ಕಟ್