Don't Miss!
- Automobiles Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- News ಮಳೆ.. ಮಳೆ.. ಭರ್ಜರಿ ಮಳೆ.. ಬೇಸಿಗೆಯಲ್ಲೂ ಮಳೆ!
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡರ್ಟಿ ಪೋಲೀಸ್ ಆಗಿ ಟಾಲಿವುಡ್ ಗೆ ಕಾಲಿಟ್ಟ ನಟ ಚೇತನ್
ಸ್ಯಾಂಡಲ್ ವುಡ್ ನ ನಟ ಮತ್ತು ಸಾಮಾಜಿಕ ಹೋರಾಟಗಾರ ಆ ದಿನಗಳು ಚೇತನ್ ತೆಲುಗು ಸಿನಿಮಾರಂಗದ ಕಡೆ ಮುಖ ಮಾಡಿದ್ದಾರೆ. ಸ್ಯಾಂಡಲ್ ವುಡ್ ಈಗಾಗಲೇ 8 ಸಿನಿಮಾಗಳನ್ನು ಮಾಡಿರುವ ಚೇತನ್ ಇದೀಗ ಚೊಚ್ಚಲ ತೆಲುಗು ಸಿನಿಮಾದ ತಯಾರಿಯಲ್ಲಿದ್ದಾರೆ.
ಸಾಯಿ ಕಾರ್ತಿಕ್ ಮತ್ತು ಶ್ರೀಕಾಂತ್ ಸಿನಿಮಾಗೆ ಬಂಡವಾಳ ಹೂಡುತ್ತಿದ್ದು, ಚಿತ್ರಕ್ಕೆ ಖ್ಯಾತ ಚಿತ್ರಕಥೆ ಬರಹಗಾರ ಚಕ್ರವರ್ತಿ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ತೆಲುಗು ಜೊತೆಗೆ ಕನ್ನಡದಲ್ಲೂ ತಯಾರಾಗುತ್ತಿದೆ. ತೆಲುಗು ಆವೃತ್ತಿಯನ್ನು ಈಗಾಗಲೇ ಪ್ರಾರಂಭ ಮಾಡಲಾಗಿದೆ. ಹೈದರಾಬಾದ್ ನಲ್ಲಿ ಈಗಾಗಲೆ ಮುಹೂರ್ತ ನೆರವೇರಿದೆ.
'ಮಹಿಳೆಯನ್ನು ನಾಯಿ ನರಿ, ಕ್ರಿಮಿ, ಕೀಟ ಎನ್ನುವ ಹೀರೋ...': ನಟ ಚೇತನ್ ಕಿಡಿಕಾರಿದ್ದು ಯಾರ ವಿರುದ್ಧ?
ಚಿತ್ರದಲ್ಲಿ ಚೇತನ್ ಡರ್ಟಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮೊದಲ ಬಾರಿಗೆ ಇಂಥ ಪಾತ್ರದಲ್ಲಿ ಚೇತನ್ ಮಿಂಚುತ್ತಿದ್ದಾರೆ. ಕಥೆ ಕೇಳಿ ಸಖತ್ ಥ್ರಿಲ್ ಆದ ಚೇತನ್ ಈ ಸಿನಿಮಾ ಮಾಡಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸದ್ಯ ಮುಹೂರ್ತ ನಡೆದಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ.
ಚೇತನ್ ಸದ್ಯ ರಣಂ ಸಿನಿಮಾದ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ಈ ಸಿನಿಮಾ ಕನ್ನಡ ಜೊತೆಗೆ ತೆಲುಗಿನಲ್ಲೂ ರಿಲೀಸ್ ಆಗುತ್ತಿದೆ. ಇನ್ನು ಉಳಿದಂತೆ ಮಾರ್ಗ ಸಿನಿಮಾದಲ್ಲೂ ಬ್ಯುಸಿಯಾಗಿದ್ದಾರೆ. ಮುಂದಿನ ವರ್ಷ ಈ ಸಿನಿಮಾದ ಚಿತ್ರೀಕರಣ ನಡೆಯಲಿದೆ.
Recommended Video
ಚೇತನ್ ಸಿನಿಮಾ ವಿಚಾರಗಳಿಗಿಂತ ಹೆಚ್ಚಾಗಿ ಸಾಮಾಜಿಕ ಹೋರಾಟದ ಮೂಲಕ ಸುದ್ದಿಯಲ್ಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ಚೇತನ್ ಸದಾ ಪೋಸ್ಟ್ ಗಳನ್ನು ಹಾಕುತ್ತಿರುತ್ತಾರೆ.