Don't Miss!
- Finance ಭಾರತದ ಮೊದಲ ಬುಲೆಟ್ ರೈಲಿನ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್ ಸಿಸ್ಟಮ್ ಹಳಿ ಚಿತ್ರ ಬಹಿರಂಗ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಾಸ್ಯನಟ, ರಂಗಭೂಮಿ ಕಲಾವಿದ ಚಿಕ್ಕ ಸುರೇಶ್ ಇನ್ನಿಲ್ಲ
ಕನ್ನಡದ ಅನೇಕ ಸಿನಿಮಾಗಳಲ್ಲಿ ಹಾಸ್ಯ ನಟನಾಗಿ ಗುರುತಿಸಿಕೊಂಡಿರುವ, ರಂಗಭೂಮಿ, ಬೀದಿ ನಾಟಕ, ಕಿರುತೆರೆಯಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಚಿಕ್ಕ ಸುರೇಶ್ ಇಂದು ಚಿರನಿದ್ರೆಗೆ ಜಾರಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಕುಟುಂಬ ಸಮೇತ ಗೋವಾ ಪ್ರವಾಸಕ್ಕೆ ಚಿಕ್ಕ ಸುರೇಶ್ ತೆರಳಿದ್ದರು. ಆದ್ರೆ, ಗೋವಾ ತಲುಪಿದ ದಿನವೇ ಚಿಕ್ಕ ಸುರೇಶ್ ಅನಾರೋಗ್ಯಕ್ಕೆ ಒಳಗಾದರು. ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರುವಾಗ ಮಾರ್ಗ ಮಧ್ಯೆ ಚಿಕ್ಕ ಸುರೇಶ್ ಕೊನೆಯುಸಿರೆಳೆದಿದ್ದಾರೆ.
ಸದ್ಯ ಹನುಮಂತನಗರದ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ಒಳಗೆ ಅಂತಿಮ ಸಂಸ್ಕಾರ ನಡೆಯಲಿದೆ.
ಬೆಂಗಳೂರಿನ ಹನುಮಂತನಗರದಲ್ಲಿ ಹುಟ್ಟಿ ಬೆಳೆದ ಚಿಕ್ಕ ಸುರೇಶ್ ಗೆ ರಂಗಭೂಮಿ ಕೈಬೀಸಿ ಕರೆಯಿತು. ರಂಗಭೂಮಿಯಲ್ಲಿ ಸಾಕಷ್ಟು ವರ್ಷ ದುಡಿದ ಚಿಕ್ಕ ಸುರೇಶ್, ನಂತರ ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸಲು ಆರಂಭಿಸಿದರು. 'ಬಣ್ಣದ ಗೆಜ್ಜೆ', 'ನಂದಿ' ಮುಂತಾದ ಸಿನಿಮಾಗಳಲ್ಲಿ ಹಾಸ್ಯ ನಟನಾಗಿ ಕಾಣಿಸಿಕೊಂಡಿದ್ದ ಚಿಕ್ಕ ಸುರೇಶ್, ಅನೇಕ ಸರ್ಕಾರಿ ಸಾಕ್ಷ್ಯಚಿತ್ರಗಳನ್ನೂ ರೂಪಿಸಿದ್ದಾರೆ.