Don't Miss!
- News Lok Sabha Election 2024: ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಪುರುಷರದ್ದೇ ಆಡಳಿತ: ಮಹಿಳೆಯರು ಮತಕ್ಕಾಗಿ ಮಾತ್ರ!
- Lifestyle ಬಿಸಿಲಿನಲ್ಲಿ ಬಸವಳಿದಿದ್ದ ಆನೆಗೆ ನೀರು ನೀಡಿ ಹೀರೋ ಆದ ಯುವಕ..!
- Automobiles ಸಾಮಾನ್ಯನ ಸ್ಟೋರಿ: ಬಹುಕಾಲದ ಕನಸನ್ನು ನನಸು ಮಾಡಿಕೊಂಡ ವಿಘ್ನೇಶ..! ನೆಚ್ಚಿನ ವ್ಯಾಗನ್ಆರ್ ಕಾರು ಖರೀದಿ
- Technology ನೀವು ಜಿಯೋ ಗ್ರಾಹಕರೇ?..ಹಾಗಿದ್ರೆ, ಈ ಪ್ಲ್ಯಾನಿಗೆ ಖಂಡಿತಾ ಫಿದಾ ಆಗ್ತೀರಾ!
- Finance ದೀಪಿಕಾ ಪಡುಕೋಣೆಯೊಂದಿಗೆ ಅಂಬಾನಿ ಮಗಳು ಒಪ್ಪಂದ, ಇಲ್ಲಿದೆ ವಿವರ
- Sports RCB: ಇದೇ ಆರ್ಸಿಬಿ ಸಮಸ್ಯೆ ಮೂಲ; ವಿದೇಶಿ ಕೋಚಿಂಗ್ ಸ್ಟಾಫ್ ವಿರುದ್ಧ ಸಿಡಿಮಿಡಿಗೊಂಡ ವೀರೇಂದ್ರ ಸೆಹ್ವಾಗ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಾಸ್ಯನಟ, ರಂಗಭೂಮಿ ಕಲಾವಿದ ಚಿಕ್ಕ ಸುರೇಶ್ ಇನ್ನಿಲ್ಲ
ಕನ್ನಡದ ಅನೇಕ ಸಿನಿಮಾಗಳಲ್ಲಿ ಹಾಸ್ಯ ನಟನಾಗಿ ಗುರುತಿಸಿಕೊಂಡಿರುವ, ರಂಗಭೂಮಿ, ಬೀದಿ ನಾಟಕ, ಕಿರುತೆರೆಯಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಚಿಕ್ಕ ಸುರೇಶ್ ಇಂದು ಚಿರನಿದ್ರೆಗೆ ಜಾರಿದ್ದಾರೆ.
ಕೆಲ ದಿನಗಳ ಹಿಂದೆಯಷ್ಟೇ ಕುಟುಂಬ ಸಮೇತ ಗೋವಾ ಪ್ರವಾಸಕ್ಕೆ ಚಿಕ್ಕ ಸುರೇಶ್ ತೆರಳಿದ್ದರು. ಆದ್ರೆ, ಗೋವಾ ತಲುಪಿದ ದಿನವೇ ಚಿಕ್ಕ ಸುರೇಶ್ ಅನಾರೋಗ್ಯಕ್ಕೆ ಒಳಗಾದರು. ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆತರುವಾಗ ಮಾರ್ಗ ಮಧ್ಯೆ ಚಿಕ್ಕ ಸುರೇಶ್ ಕೊನೆಯುಸಿರೆಳೆದಿದ್ದಾರೆ.
ಸದ್ಯ ಹನುಮಂತನಗರದ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ಒಳಗೆ ಅಂತಿಮ ಸಂಸ್ಕಾರ ನಡೆಯಲಿದೆ.
ಬೆಂಗಳೂರಿನ ಹನುಮಂತನಗರದಲ್ಲಿ ಹುಟ್ಟಿ ಬೆಳೆದ ಚಿಕ್ಕ ಸುರೇಶ್ ಗೆ ರಂಗಭೂಮಿ ಕೈಬೀಸಿ ಕರೆಯಿತು. ರಂಗಭೂಮಿಯಲ್ಲಿ ಸಾಕಷ್ಟು ವರ್ಷ ದುಡಿದ ಚಿಕ್ಕ ಸುರೇಶ್, ನಂತರ ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸಲು ಆರಂಭಿಸಿದರು. 'ಬಣ್ಣದ ಗೆಜ್ಜೆ', 'ನಂದಿ' ಮುಂತಾದ ಸಿನಿಮಾಗಳಲ್ಲಿ ಹಾಸ್ಯ ನಟನಾಗಿ ಕಾಣಿಸಿಕೊಂಡಿದ್ದ ಚಿಕ್ಕ ಸುರೇಶ್, ಅನೇಕ ಸರ್ಕಾರಿ ಸಾಕ್ಷ್ಯಚಿತ್ರಗಳನ್ನೂ ರೂಪಿಸಿದ್ದಾರೆ.