Don't Miss!
- News Mysuru Zoo: ಬೇಸಿಗೆಯಲ್ಲೂ ಮೈಸೂರು ಮೃಗಾಲಯ ಕೂಲ್.. ಕೂಲ್! ಹೇಗೆ ಗೊತ್ತಾ?
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಛೇ...ಪತ್ನಿ-ಪುತ್ರನ ಬಗ್ಗೆ ಇದೆಂಥಾ ಮಾತು ಆಡಿಬಿಟ್ಟರು ನಟ ದರ್ಶನ್..!?
ಚಾಲೆಂಜಿಂಗ್ ಸ್ಟಾರ್ ದರ್ಶನ್ ನೋವಿನಲ್ಲಿದ್ದಾರೆ ನಿಜ. ಸೆಲೆಬ್ರಿಟಿ ಆಗಿರುವ ಕಾರಣ ನಮ್ಮ-ನಿಮ್ಮೆಲ್ಲರಿಗಿಂತ ದರ್ಶನ್ ಹೆಚ್ಚು ಒತ್ತಡದಲ್ಲಿದ್ದಾರೆ ಅನ್ನೋದು ಕೂಡ ಅಷ್ಟೇ ಸತ್ಯ.
ಎಲ್ಲರ ಮನೆ ದೋಸೆ ತೂತೇ. ಆದ್ರೆ, ಸಾಮಾಜಿಕ ಜವಾಬ್ದಾರಿ ಹೊತ್ತಿರುವ ನಟ ದರ್ಶನ್ ರವರ ಕೌಟುಂಬಿಕ ಕಲಹ ಬೀದಿ ರಂಪಾಟವಾಗಬಾರದಿತ್ತು ಅನ್ನೋದು ಅವರ ಅಭಿಮಾನಿಗಳ ಕಾಳಜಿ. [ನನ್ನ ಹೆಂಡ್ತಿ ವಿಜಯಲಕ್ಷ್ಮಿಗೆ ಪ್ರಿಯಕರನಿದ್ದಾನೆ ಎಂದ ದರ್ಶನ್]
ಅದರಲ್ಲೂ ಮಾಧ್ಯಮಗಳ ಮುಂದೆಯೇ ಪತ್ನಿ ವಿಜಯಲಕ್ಷ್ಮಿ ನಡತೆ ಬಗ್ಗೆ ಗಂಭೀರ ಆರೋಪ ಮಾಡಿರುವ ದರ್ಶನ್, ತಮ್ಮ ಮಗುವಿನ ಡಿ.ಎನ್.ಎ ಟೆಸ್ಟ್ ಬಗ್ಗೆ ಮಾತನಾಡಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಮುಂದೆ ಓದಿ.....[ಸಂಥಿಂಗ್ ವಿತ್ ಶಾಮ್ ನಲ್ಲಿ ಮಲ್ಯ, ದರ್ಶನ್ ಬಗ್ಗೆ, ಕ್ಲಿಕ್ ಮಾಡಿ]
ಪತ್ನಿ ವಿಜಯಲಕ್ಷ್ಮಿ ಮೇಲೆ ಕಿಡಿ ಕಿಡಿ
ಪತ್ನಿ ವಿಜಯಲಕ್ಷ್ಮಿ ಮೇಲೆ ಕಿಡಿಕಾರುತ್ತಾ ನಿನ್ನೆ ಸುದ್ದಿ ವಾಹಿನಿ ಜೊತೆ ಮಾತನಾಡುವಾಗ, ತಮ್ಮ ಮಗು ತಮಗೆ ಜನಿಸಿದ್ದು ಅಲ್ಲ ಅಂತ ನಟ ದರ್ಶನ್ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ರು. [ಬಾಯ್ ಫ್ರೆಂಡ್ ಇದ್ದಾನಾ? ದರ್ಶನ್ ಪತ್ನಿ ವಿಜಯಲಕ್ಷ್ಮಿ ಏನಂದ್ರು ಗೊತ್ತಾ?]
ಪತ್ನಿಗೆ ದರ್ಶನ್ ಸವಾಲು
ಪತ್ನಿ ವಿಜಯಲಕ್ಷ್ಮಿ ಬಾಯ್ ಫ್ರೆಂಡ್ ವಿಚಾರದ ಕುರಿತು ಮಾತನಾಡುವಾಗ, ತಮ್ಮ ಮಗುವನ್ನೇ ಡಿ.ಎನ್.ಎ ಪರೀಕ್ಷೆಗೆ ಒಳಪಡಿಸುವ ಬಗ್ಗೆ ಪತ್ನಿ ವಿಜಯಲಕ್ಷ್ಮಿಗೆ ಕನ್ನಡ ನ್ಯೂಸ್ ಚಾನೆಲ್ ಒಂದರಲ್ಲಿ ನಿನ್ನೆ ದರ್ಶನ್ ಸವಾಲು ಹಾಕಿದ್ದರು. [ನಟ ದರ್ಶನ್ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪತ್ನಿ ವಿಜಯಲಕ್ಷ್ಮಿ]
ಪ್ರತಿ ಸವಾಲು ಹಾಕಿದ ಪತ್ನಿ ವಿಜಯಲಕ್ಷ್ಮಿ
ದರ್ಶನ್ ರವರ ಮಾತಿಗೆ ಕೊಂಚ ಸಿಡುಕಿನಿಂದಲೇ ಅದೇ ವಾಹಿನಿಗೆ ಪ್ರತಿಕ್ರಿಯೆ ನೀಡಿದ ವಿಜಯಲಕ್ಷ್ಮಿ 'ಡಿ.ಎನ್.ಎ ಪರೀಕ್ಷೆಗೆ ಸಿದ್ಧ' ಅಂತ ಪ್ರತಿ ಸವಾಲು ಹಾಕಿದ್ದಾರೆ. ['ಗಲಾಟೆ ಸಂಸಾರ'; ದರ್ಶನ್ ಬೆಟ್ಟು ಮಾಡುತ್ತಿರುವ 'ಅವರು' ಯಾರು?]
ಇದೆಲ್ಲಾ ಯಾಕೆ?
ತಮ್ಮ ಮಗ ವಿನೀಶ್ ಬಗ್ಗೆ ಅಪಾರ ಪ್ರೀತಿ-ಕಾಳಜಿ ವ್ಯಕ್ತಪಡಿಸುವ ನಟ ದರ್ಶನ್, ಕೋಪದಲ್ಲಿ ಹೀಗೆಲ್ಲಾ ಮಾತನಾಡಿರುವುದು ಅಭಿಮಾನಿಗಳ ಮನಸ್ಸಲ್ಲಿ ನೋವುಂಟು ಮಾಡಿರುವುದು ಸತ್ಯ. [ಹೆಂಡತಿಯನ್ನು ಕೀಳು ಭಾಷೆಯಲ್ಲಿ ನಿಂದಿಸುವ "ದರ್ಶನ್" ಆಡಿಯೋ ಕ್ಲಿಪ್]
ಆಗಿದ್ದೆಲ್ಲಾ ಆಯ್ತು!
ಮಾಧ್ಯಮಗಳ ಮುಂದೆ ಇದ್ದ ಸಿಟ್ಟನ್ನೆಲ್ಲಾ ಹೊರಹಾಕಿರುವ ನಟ ದರ್ಶನ್ ಇಂದು ಎಸಿಪಿ ಕಛೇರಿಗೆ ಭೇಟಿ ಕೊಟ್ಟು ಪೊಲೀಸರಿಗೆ ವಿವರಣೆ ನೀಡಿದರು. ['ಇನ್ಮುಂದೆ ಪತ್ನಿ ಜೊತೆ ಗಲಾಟೆ ಮಾಡಲ್ಲ' ಎಂದ ನಟ ದರ್ಶನ್]
'ಇನ್ಮುಂದೆ ಗಲಾಟೆ ಮಾಡಲ್ಲ'
'ಇನ್ಮುಂದೆ ಪತ್ನಿ ಜೊತೆ ಗಲಾಟೆ ಮಾಡಲ್ಲ. ಕೌಟುಂಬಿಕ ಸಮಸ್ಯೆಯನ್ನ ಅಂಬರೀಶ್ ಸಮ್ಮುಖದಲ್ಲಿ ಬಗೆಹರಿಸಿಕೊಳ್ಳುತ್ತೇವೆ'' ಅಂತ ನಟ ದರ್ಶನ್ ಪೊಲೀಸರಿಗೆ ಮುಚ್ಚಳಿಕೆ ಬರೆದು ಕೊಟ್ಟಿದ್ದಾರೆ. [ಕೌಟುಂಬಿಕ ಕಲಹ ; ದರ್ಶನ್ ಕಿವಿ ಹಿಂಡಿದ 'ಅಪ್ಪಾಜಿ' ಅಂಬರೀಶ್]
ಇನ್ನಾದರೂ ಸುಖ ಸಂಸಾರ ನಡೆಸಲಿ..
ಆಡಿರುವ ಮಾತುಗಳನ್ನ ಈಗ ವಾಪಸ್ ಪಡೆಯಲು ಸಾಧ್ಯವಿಲ್ಲ. ಆದ್ರೆ, ಆಗಿರುವುದನ್ನೆಲ್ಲಾ ಮರೆತು ಕೂಡಿ ಬಾಳಿದರೆ ಸ್ವರ್ಗ ಸುಖ ಸಾಧ್ಯ. ರೆಬೆಲ್ ಸ್ಟಾರ್ ಅಂಬರೀಶ್ ಕೂಡ ಇದೇ ಸಲಹೆ ನೀಡಿದ್ದಾರೆ. ದರ್ಶನ್-ವಿಜಯಲಕ್ಷ್ಮಿ ಮನಸ್ಸು ಮಾಡಿದರೆ ಅಸಾಧ್ಯ ಯಾವುದೂ ಇಲ್ಲ. ಅಭಿಮಾನಿಗಳು ಎದುರು ನೋಡುತ್ತಿರುವುದು ಇದನ್ನೇ..ಅಲ್ಲವೇ?