Don't Miss!
- News ತೊಳೆಯೋದಕ್ಕೂ ನೀರು ಇಲ್ಲ ಗುರೂ: ಜನ ಹಿಂಗೆ ಕೇಳ್ತಿದ್ದಾರೆ!
- Lifestyle ಬೇಸಿಗೆಗೆ ಈ 3 ಸೊಪ್ಪಿನ ಚಟ್ನಿ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಐಪಿಎಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ದೊಡ್ಡ ಗೆಲುವು: ಗುಜರಾತ್ಗೆ ತವರಿನಲ್ಲಿ ಸೋಲು
- Automobiles ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- Finance ಇನ್ಮುಂದೆ EMI ಕಟ್ಟೋದು ತಡವಾದ್ರೆ ಚಿಂತಿಸೋಹಾಗಿಲ್ಲ, ಫೈನ್ ಕೂಡ ಕಟ್ಟುವಂತಿಲ್ಲ!
- Technology ಸದ್ಯ ಎಂಟ್ರಿ ಲೆವೆಲ್ನಲ್ಲಿ ಇವೇ ಬೆಸ್ಟ್ ಸ್ಮಾರ್ಟ್ಫೋನ್ಗಳು!..ಫೀಚರ್ಸ್ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕೌರವ' ಬಿಸಿ ಪಾಟೀಲ್ ಭೇಟಿ ಮಾಡಿದ ಡಿ-ಬಾಸ್ ದರ್ಶನ್
ನಟ-ರಾಜಕಾರಣಿ ಬಿಸಿ ಪಾಟೀಲ್ ಅವರನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ ಮಾಡಿದ್ದಾರೆ. ಬಿಸಿ ಪಾಟೀಲ್ ಅವರ ಮನೆಗೆ (ಕಚೇರಿ) ಹೋಗಿದ್ದ ಡಿ ಬಾಸ್ ಕೆಲ ಸಮಯ ಅವರ ಜೊತೆ ಕುಳಿತು ಯೋಗಕ್ಷೇಮ ವಿಚಾರಿಸಿದ್ದಾರೆ.
Recommended Video
ಬಿಸಿ ಪಾಟೀಲ್ ಮತ್ತು ನಟ ದರ್ಶನ್ ಭೇಟಿ ಆಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಹಜವಾಗಿ ಕೆಲವು ಚರ್ಚೆಗಳಿಗೆ ಕಾರಣವಾಗಿದೆ. ಆರ್ ಆರ್ ನಗರ ಚುನಾವಣೆ ನಂತರ ರಾಜಕೀಯ ನಾಯಕರ ಜೊತೆ ಕಾಣಿಸಿಕೊಂಡಿರುವ ದರ್ಶನ್ ಕುರಿತು ಕುತೂಹಲ ಮೂಡಿದೆ. ಇನ್ನು ಇಬ್ಬರು 'ಕೌರವ'ವರನ್ನು ಒಟ್ಟಿಗೆ ನೋಡಿದ ಅಭಿಮಾನಿಗಳು ಸಹ ಥ್ರಿಲ್ ಆಗಿದ್ದಾರೆ. ಅಷ್ಟಕ್ಕೂ ಈ ಭೇಟಿ ಏಕೆ? ಮುಂದೆ ಓದಿ...
ಆರ್ ಆರ್ ನಗರ ಚುನಾವಣೆಯಲ್ಲಿ ಪ್ರಚಾರ
ಇತ್ತೀಚಿಗಷ್ಟೆ ನಡೆದ ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ನಟ ದರ್ಶನ್ ಅವರು ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಪ್ರಚಾರ ಮಾಡಿದ್ದರು. ಈ ವೇಳೆ ಬಿಸಿ ಪಾಟೀಲ್ ಸಹ ದರ್ಶನ್ ಜೊತೆ ಪ್ರಚಾರದಲ್ಲಿ ಭಾಗಿಯಾಗಿದ್ದರು.
ಬಾಗಲಕೋಟೆಯಲ್ಲಿ ದರ್ಶನ್ ಗೆ ನೆನಪಾದರು ಬಿ ಸಿ ಪಾಟೀಲ್
ಬಾಗಲಕೋಟೆಯಲ್ಲಿ ಕೌರವನನ್ನು ನೆನೆದಿದ್ದ ದರ್ಶನ್
ಈ ಹಿಂದೆ ಬಾಗಲಕೋಟೆಯ ಇಳಕಲ್ನಲ್ಲಿ ನಡೆದ ರಾಷ್ಟ್ರೀಯ ಯುವ ಉತ್ಸವದಲ್ಲಿ ಭಾಗಿಯಾಗಿದ್ದ ದರ್ಶನ್ ವೇದಿಕೆಯಲ್ಲಿ ಬಿಸಿ ಪಾಟೀಲ್ ಅವರನ್ನು ನೆನಪಿಸಿಕೊಂಡಿದ್ದರು. ಇಳಕಲ್ ಸೀರೆ ಅಂದ್ರೆ ಬಿಸಿ ಪಾಟೀಲ್ ನೆನಪಾಗ್ತಾರೆ ಎಂದಿದ್ದರು.
ಎಸ್ಟಿ ಸೋಮಶೇಖರ್ ಸಹ ಇದ್ದರು
ಬಿಸಿ ಪಾಟೀಲ್ ಹಾಗೂ ದರ್ಶನ್ ಅವರು ಭೇಟಿ ಮಾಡಿದ ಸಮಯದಲ್ಲಿ ಕಾಂಗ್ರೆಸ್ ಶಾಸಕ ಎಸ್ ಟಿ ಸೋಮಶೇಖರ್ ಸಹ ಇದ್ದರು. ಮಂಡ್ಯ ಚುನಾವಣೆ, ಆರ್ ಆರ್ ನಗರ ಚುನಾವಣೆಯ ನಂತರ ರಾಜಕೀಯ ನಾಯಕರ ಜೊತೆ ದರ್ಶನ್ ಅವರ ಸ್ನೇಹ ಮತ್ತಷ್ಟು ಹೆಚ್ಚಾಗುತ್ತಿದೆ.
ಕೌರವನ ಪಾತ್ರದಲ್ಲಿ ಬಿಸಿ ಪಾಟೀಲ್
ದರ್ಶನ್ ಕುರುಕ್ಷೇತ್ರ ಸಿನಿಮಾದಲ್ಲಿ ದುರ್ಯೋಧನನ ಪಾತ್ರ ಮಾಡುವುದಕ್ಕೂ ಮುಂಚೆ, ಕನ್ನಡ ಇಂಡಸ್ಟ್ರಿಯಲ್ಲಿ ಕೌರವ ಅಂದ್ರೆ ಬಿಸಿ ಪಾಟೀಲ್ ಕಣ್ಣ ಮುಂದೆ ಬರ್ತಿದ್ದರು. ತಮ್ಮ ಹಲವು ಚಿತ್ರಗಳಲ್ಲಿ ದುರ್ಯೋಧನ ಗೆಟಪ್ ಹಾಕಿದ್ದ ಬಿಸಿ ಪಾಟೀಲ್ ನಾಟಕಗಳಲ್ಲಿಯೂ ಪಾತ್ರ ಮಾಡಿದ್ದರಂತೆ. ಕೌರವ ಎಂಬ ಸಿನಿಮಾದ ಒಂದು ದೃಶ್ಯದಲ್ಲಿ ದುರ್ಯೋಧನನ ಪಾತ್ರದಲ್ಲಿ ಮಿಂಚಿದ್ದರು.