Don't Miss!
- News Gold Price: ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರೀ ಇಳಿಕೆ, ಇಂದಿನ ಬೆಲೆ ವಿವರ
- Lifestyle ಬಾಯಿ ಚಪ್ಪರಿಸಿ ಸವಿಯುವ ನೆಲ್ಲಿಕಾಯಿ ಉಪ್ಪಿನಕಾಯಿ..!
- Finance BMRCL: ಇಂದು ನಮ್ಮ ಮೆಟ್ರೋ ಕಾರ್ಯಾಚರಣೆ ಅವಧಿ ವಿಸ್ತರಣೆ, ಸಮಯ ವಿವರ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪ್ರಚಾರದ ನಡುವೆಯೂ ಅಣ್ಣಾವ್ರರನ್ನ ಮರೆಯದ ಚಾಲೆಂಜಿಂಗ್ ಸ್ಟಾರ್
ಇವತ್ತು ಡಾ ರಾಜ್ ಕುಮಾರ್ ಅವರ 13ನೇ ಪುಣ್ಯ ಸ್ಮರಣೆ. ರಾಜ್ ಕುಮಾರ್ ಕಳೆದುಕೊಂಡು 13 ವರ್ಷಗಳಾದರು ಅಭಿಮಾನಿಗಳ ಪ್ರೀತಿ ಕಿಂಚಿತ್ತು ಕಮ್ಮಿ ಆಗಿಲ್ಲ. ಪ್ರತಿ ವರ್ಷದಂದೆ ಈ ವರ್ಷವು ಸಹ ಅಪಾರ ಸಂಖ್ಯೆಯ ಅಭಿಮಾನಿಗಳು ಕಂಠೀರವ ಸ್ಟುಡಿಯೋದಲ್ಲಿರುವ ರಾಜ್ ಸ್ಮಾರಕದ ಬಳಿ ತೆರೆಳಿ ಪೂಜೆ ಸಲ್ಲಿಸಿ ಮೇರು ನಟನನ್ನು ನೆನಪಿಸಿಕೊಂಡಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಇಂದು ಬೆಳಗ್ಗೆ ರಾಜ್ ಕುಮಾರ್ ಕುಟುಂಬದವರು ಕಂಠೀರವ ಸ್ಟುಡಿಯೋಗೆ ತೆರಳಿ ಅಪ್ಪಾಜಿ ಸ್ಮಾರಕಕ್ಕೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಏಪ್ರಿಲ್ ತಿಂಗಳು ಅಂದ್ರೆನೇ ರಾಜ್ ಕುಮಾರ್ ತಿಂಗಳು ಅಂತ ಕರೆಯಲಾಗುತ್ತೆ. ಕನ್ನಡದ ಈ ಖ್ಯಾತ ನಟ ಹುಟ್ಟಿದ್ದು ಮತ್ತು ನಿಧನರಾಗಿದ್ದು ಏಪ್ರಿಲ್ ತಿಂಗಳಿನಲ್ಲೇ. ಇಂತಹ ವಿಶೇಷ ದಿನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಡಾ.ರಾಜ್ ಅವರನ್ನು ಸ್ಮರಿಸಿದ್ದಾರೆ.
ಡಾ.ರಾಜ್ ನಿಧನದ ದಿನ ಸುದ್ದಿ ಪತ್ರಿಕೆಗಳಲ್ಲಿ ಕಂಡು ಬಂದ ಶೀರ್ಷಿಕೆಗಳು
"ಕಲೆಯನ್ನೇ ಉಸಿರಾಗಿಸಿಕೊಂಡು ಕನ್ನಡ ಚಿತ್ರರಂಗಕ್ಕೆ ಆಲದ ಮರದ ನೆರಳಿನಂತೆ ನೆರವಾದ ಅಣ್ಣಾವ್ರ ಪುಣ್ಯ ತಿಥಿ ಇಂದು. ಸದಾ ನಮ್ಮೊಂದಿಗೆ ಡಾ.ರಾಜ್ ಕುಮಾರ್" ಎಂದು ದಚ್ಚು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ಸದ್ಯ ಮಂಡ್ಯ ಚುನಾವಣಾ ಪ್ರಚಾರದಲ್ಲಿ ಬ್ಯುಸಿ ಇರುವ ದರ್ಶನ್ ಪ್ರಚಾರದ ನಡುವೆಯು ಡಾ.ರಾಜ್ ಕುಮಾರ್ ನೆನಪಿಸಿಕೊಂಡು ಟ್ವೀಟ್ ಮಾಡಿದ್ದಾರೆ. ರಾಜ್ ಕುಮಾರ್ ಕುಟುಂಬದ ಜೊತೆ ದರ್ಶನ್ ತಂದೆ ತೂಗುದೀಪ ಶ್ರೀನಿವಾಸ್ ಉತ್ತಮ ಒಡನಾಟ ಇಟ್ಟುಕೊಂಡಿದ್ದರು. ಈಗ ಅದೇ ಸಂಬಂಧವನ್ನು ದರ್ಶನ್ ಕೂಡ ಮುಂದುವರೆಸಿಕೊಂಡು ಬಂದಿದ್ದಾರೆ.