Don't Miss!
- News ಪಿಎಸ್ ಐ ಪರೀಕ್ಷೆ ಅಕ್ರಮ ಆರೋಪಿ ಮನೆಗೆ ಉಮೇಶ್ ಜಾಧವ ಭೇಟಿ : ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Finance Shilpa Shetty: ಇಡಿಯಿಂದ ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ಅವರ 98 ಕೋಟಿ ಮೌಲ್ಯದ 2 ಫ್ಲಾಟ್, ಷೇರು ವಶ
- Technology Realme: ರಿಯಲ್ಮಿ C65 5G ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! 6.67″ 120Hz ಡಿಸ್ಪ್ಲೆ...
- Lifestyle ಮಾಲ್ನೊಳಗೆ ನುಗ್ಗಿದ 100ಕ್ಕೂ ಹೆಚ್ಚು ನಾಯಿಗಳು..! ಕೋಳಿ ಕಾಲು ತೋರಿಸಿ ಹಿಡಿದ ಜನ..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರಗಳು; ಸತತ ಐದನೇ ಬಾರಿ 'ಅಯ್ಯಪ್ಪ ಸ್ವಾಮಿ' ಆದ ದರ್ಶನ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮತ್ತೊಮ್ಮೆ 'ಸ್ವಾಮಿಯೇ ಶರಣಂ ಅಯ್ಯಪ್ಪ' ಎಂದು ಮಾಲೆ ಧರಿಸಿದ್ದಾರೆ. ಅವರ ಜೊತೆ ಸಹೋದರ ದಿನಕರ್ ತೂಗುದೀಪ, ನಿರ್ದೇಶಕ ಎಂ.ಡಿ.ಶ್ರೀಧರ್, ಶಿವಮಣಿ, ನಟ ಧರ್ಮ ಕೀರ್ತಿರಾಜ್ ಕೂಡ ಮಾಲೆ ಧರಿಸಿ, ಶಬರಿಮಲೈ ಯಾತ್ರೆ ಕೈಗೊಂಡಿದ್ದಾರೆ.
ಕಳೆದ ಐದು ವರ್ಷಗಳಿಂದ ದರ್ಶನ್ ಮಾಲೆ ಧರಿಸುತ್ತಿದ್ದಾರೆ. ಅವರಿಗೆ ತಂದೆ ತೂಗುದೀಪ ಶ್ರೀನಿವಾಸ್ ಪ್ರೇರಣೆ.[ಅಣ್ಣಾವ್ರ ಮಕ್ಕಳ ಶಬರಿಮಲೈ ಯಾತ್ರೆ ಆರಂಭ]
ಕನ್ನಡ ಚಿತ್ರರಂಗದ ಖ್ಯಾತ ನಟ ತೂಗುದೀಪ ಶ್ರೀನಿವಾಸ್ ಗೆ ಅಯ್ಯಪ್ಪ ಸ್ವಾಮಿ ಮೇಲೆ ಅಪಾರ ಭಕ್ತಿ. ಅಪ್ಪನಂತೆ ಮಗ ದರ್ಶನ್ ಕೂಡ ಭಯ-ಭಕ್ತಿಯಿಂದ ವ್ರತ ಆಚರಿಸಿ ಸತತ ಐದನೇ ಬಾರಿ ಶಬರಿಗಿರಿಗೆ ತೆರಳಿದ್ದಾರೆ.
ನಿನ್ನೆ ಬೆಳಗ್ಗೆ ಮೊದಲು ರಾಜರಾಜೇಶ್ವರಿ ನಗರದಲ್ಲಿ ಇರುವ ಅವರ ನಿವಾಸದಲ್ಲಿ ಪೂಜಾ ಕಾರ್ಯಗಳನ್ನು ನೆರವೇರಿಸಿ, ಬೆಂಗಳೂರಿನ ಶ್ರೀರಾಂಪುರದಲ್ಲಿರುವ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಬಂದ ದರ್ಶನ್ ಇರುಮುಡಿ ಕಟ್ಟಿದರು.[ಶಿವಣ್ಣ ಮತ್ತೊಮ್ಮೆ ಸ್ವಾಮಿಯೇ ಶರಣಂ ಅಯ್ಯಪ್ಪ]
ಅಲ್ಲಿಂದ ದರ್ಶನ್ ಜೊತೆ 40 ಜನರ ತಂಡ ಶಬರಿಮಲೈ ಯಾತ್ರೆ ಆರಂಭಿಸಿತು. ಇಂದು ಅಯ್ಯಪ್ಪ ಸ್ವಾಮಿ ದರ್ಶನ ಮಾಡಿದ ಬಳಿಕ 'ದಾಸ' ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. (ಚಿತ್ರಕೃಪೆ - ಡಿ ಕಂಪನಿ)