Don't Miss!
- News ಕಾಂಗ್ರೆಸ್ ಜನರಿಗೆ ಹೋಲ್ಸೆಲ್ ಮೋಸ ಮಾಡುತ್ತಿದೆ: ಮಾಜಿ ಸಿಎಂ
- Sports ಲಾರೆಸ್ ವರ್ಲ್ಡ್ ಸ್ಪೋರ್ಟ್ಸ್ ಅವಾರ್ಡ್ಸ್ನಲ್ಲಿ ವಿರಾಟ್ ಕೊಹ್ಲಿಯ 50ನೇ ಏಕದಿನ ಶತಕ!
- Lifestyle UPSCಯಲ್ಲಿ 2ನೇ ರ್ಯಾಂಕ್ ಗಳಿಸಿದ ಸಾಧಕನ ಡ್ಯಾನ್ಸ್ ವೀಡಿಯೋ ವೈರಲ್: ಇವರ ಬದುಕಿನಲ್ಲಿ ನಡೆದಿದೆ ಹಲವು ದುರಂತಗಳು
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಾರ್ಗಿಲ್ ವಿಜಯೋತ್ಸವ'ವನ್ನ ಸ್ಮರಿಸಿದ ಚಾಲೆಂಜಿಂಗ್ ಸ್ಟಾರ್
ದೇಶಾದ್ಯಂತ ಇಂದು (ಜುಲೈ 26) ಕಾರ್ಗಿಲ್ ವಿಜಯೋತ್ಸವ ಆಚರಿಸಲಾಗುತ್ತಿದ್ದು, ಕಾರ್ಗಿಲ್ ಯುದ್ಧದಲ್ಲಿ ಮಡಿದ ಸೈನಿಕರಿಗೆ ಭಾರತೀಯರು ಗೌರವ ಸಲ್ಲಿಸುತ್ತಿದ್ದಾರೆ. ಈ ವಿಶೇಷ ಸಂಭ್ರಮಕ್ಕೆ ಕಾರಣವಾದ ಎಲ್ಲ ಸೈನಿಕರಿಗೂ ಕನ್ನಡ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಧನ್ಯವಾದ ತಿಳಿಸಿದ್ದಾರೆ.
''1999 ರಲ್ಲಿ ನಡೆದ ಕಾರ್ಗಿಲ್ ಮಹಾಯುದ್ಧದಲ್ಲಿ ದೇಶದ ಸಂರಕ್ಷಣೆಗಾಗಿ ಪಣ ತೊಟ್ಟು ಪ್ರಚಂಡ ಜಯಭೇರಿ ಬಾರಿಸಿದ ಭಾರತೀಯ ಸೇನೆಪಡೆಯ ಕಾರ್ಯ ಶ್ರದ್ಧೆಯನ್ನು ಸ್ಮರಿಸಲು ಈ ವಿಜಯ್ ದಿವಸ್ ಆಚರಿಸಲಾಗುತ್ತದೆ. ನಮ್ಮೆಲ್ಲರ ಒಳಿತಿಗಾಗಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹೋರಾಡುವ ಪ್ರತಿಯೊಬ್ಬ ಸೈನಿಕನಿಗೂ ಹಾಟ್ಸ್ ಆಫ್'' ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.
ವಿಜಯ್ ದಿವಸ್: ಕಾರ್ಗಿಲ್ ಯುದ್ಧದ ಆ ರೋಚಕ ಕ್ಷಣಕ್ಕೆ 19 ವರ್ಷ
ಕೇವಲ ದರ್ಶನ್ ಮಾತ್ರವಲ್ಲದೇ ಮಲಯಾಳಂ ನಟ ಮೋಹನ್ ಲಾಲ್, ಬಾಲಿವುಡ್ ನಟ ಸಿದ್ಧಾರ್ಥ ಮಲ್ಹೋತ್ರ, ಅನುಪಮ್ ಖೇರ್ ಸೇರಿದಂತೆ ಹಲವು ಸಿನಿಮಾ ತಾರೆಯರು 'ಕಾರ್ಗಿಲ್ ವಿಜಯ ದಿವಸ್'ವನ್ನ ಸ್ಮರಿಸಿದ್ದಾರೆ.
1999 ಜುಲೈ 26 ರಂದು ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯಪತಾಕೆಯನ್ನು ಹಾರಿಸಿದ ದಿನವಾಗಿದೆ. ಪಾಕ್ ಮೇಲೆ ಭಾರತೀಯ ಯೋಧರು ವಿಜಯ ಸಾಧಿಸಿದ ಸ್ಮರಣಾರ್ಥ ಇಂದು ದೇಶದೆಲ್ಲೆಡೆ ಕಾರ್ಗಿಲ್ ವಿಜಯ್ ದಿವಸ್' ಆಚರಣೆ ಮಾಡಲಾಗುತ್ತಿದೆ.
೧೯೯೯ ರಲ್ಲಿ ನಡೆದ ಕಾರ್ಗಿಲ್ ಮಹಾಯುದ್ಧದಲ್ಲಿ ದೇಶದ ಸಂರಕ್ಷಣೆಗಾಗಿ ಪಣ ತೊಟ್ಟು ಪ್ರಚಂಡ ಜಯಭೇರಿ ಬಾರಿಸಿದ ಭಾರತೀಯ ಸೇನೆಪಡೆಯ ಕಾರ್ಯ ಶ್ರದ್ಧೆಯನ್ನು ಸ್ಮರಿಸಲು ಈ ವಿಜಯ್ ದಿವಸ್ ಆಚರಿಸಲಾಗುತ್ತದೆ. ನಮ್ಮೆಲ್ಲರ ಒಳಿತಿಗಾಗಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಹೋರಾಡುವ ಪ್ರತಿಯೊಬ್ಬ ಸೈನಿಕನಿಗೂ ಹಾಟ್ಸ್ ಆಫ್. pic.twitter.com/L0OfZarH44
— Darshan Thoogudeepa (@dasadarshan) July 26, 2018
ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣ ಸಚಿವ ಸೇರಿದಂತೆ ರಾಷ್ಟ್ರದ ಎಲ್ಲ ರಾಜ್ಯಗಳಲ್ಲೂ 'ಕಾರ್ಗಿಲ್ ವಿಜಯ ದಿವಸ' ಆಚರಿಸಲಾಗುತ್ತಿದೆ.