Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣು ಸ್ಮಾರಕ ಸ್ಥಳಾಂತರ ಧರಣಿ ಬಗ್ಗೆ ದರ್ಶನ್ ಪ್ರತಿಕ್ರಿಯೆ
ಅಭಿನಯ ಭಾರ್ಗವ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ಸ್ಥಳಾಂತರದ ಬಗ್ಗೆ ವಿಷ್ಣು ಅಭಿಮಾನಿಗಳು ಬೃಹತ್ ಪ್ರತಿಭಟನೆ ಕೈಗೊಂಡಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಬಗ್ಗೆ ಸ್ಯಾಂಡಲ್ ವುಡ್ ನ ಸ್ಟಾರ್ ನಟರು ಯಾರೊಬ್ಬರೂ ತುಟಿಪಿಟಕ್ ಅನ್ನುತ್ತಿಲ್ಲ ಅಂತ ಎಲ್ಲರೂ ಮಾತನಾಡಿಕೊಂಡರು.
ಅದಕ್ಕೆ ಸರಿಯಾಗಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಇತ್ತೀಚೆಗೆ ಟ್ವಿಟ್ಟರ್ ನಲ್ಲಿ ವಿಷ್ಣು ಸ್ಮಾರಕ ಸ್ಥಳಾಂತರದ ಬಗ್ಗೆ ಮಾತನಾಡಿ ಎಲ್ಲರ ಬಾಯಿಗೆ ಬೀಗ ಜಡಿದಿದ್ದರು.[ವಿಷ್ಣು ಸ್ಮಾರಕ ಸ್ಥಳಾಂತರ ಬಗ್ಗೆ ಕೊನೆಗೂ ಬಾಯ್ಬಿಟ್ಟ ಸುದೀಪ್]
ಇದೀಗ ವಿಷ್ಣು ಅಭಿಮಾನಿಗಳ ಅನಿರ್ದಿಷ್ಟಾವಧಿ ಧರಣಿಗೆ ನಟ ದರ್ಶನ್ ಅವರು ಸ್ಪಂದಿಸಿ, ಅಭಿಮಾನಿಗಳ ಹೋರಾಟಕ್ಕೆ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಮುಕ್ತ ಬೆಂಬಲ ಸೂಚಿಸಿದ್ದಾರೆ.
"ಒಳ್ಳೆಯ ವಿಷಯಕ್ಕಾಗಿ ಹೋರಾಡುತ್ತಿರುವ ವಿಷ್ಣುದಾದಾ ಅಭಿಮಾನಿಗಳಿಗೆ ನನ್ನ ಸಹಕಾರ ಸದಾ ಕಾಲ ಇದ್ದೇ ಇರುತ್ತದೆ. ಎಲ್ಲರೂ ಜೊತೆಯಾಗಿಯೇ ಸಾಗೋಣ. ದೈಹಿಕವಾಗಿ ಧರಣಿ ಸ್ಥಳಕ್ಕೆ ಬರಲಿಲ್ಲ ಎಂದ ಮಾತ್ರಕ್ಕೆ ಅಭಿಮಾನ-ಬೆಂಬಲ ಇಲ್ಲ ಎಂದಲ್ಲ. ಎಲ್ಲಾ ಒಳ್ಳೆಯದಾಗ್ಲಿ. ಸುಖಾಂತ್ಯ ಕಾಣಲಿ" ಎಂದು ಚಾಲೆಂಜಿಂಗ್ ಸ್ಟಾರ್ ವಿಷ್ಣುಸೇನಾ ಅಭಿಮಾನಿಗಳಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
I would always stand by the cause. Physical Absence at Satyagraha doesn't mean that we aren't supporting. Ella Olledaagli.Sukhaantya Kaanli
— Darshan Thoogudeepa (@dasadarshan) June 15, 2016
"ನನ್ನ ಸಹಕಾರ ವಿಷ್ಣುದಾದಾ ಅಭಿಮಾನಿಗಳಿಗೆ ಯಾವಾಗಲೂ ಇರುತ್ತದೆ. ಒಳ್ಳೆ ಕೆಲಸಕ್ಕೆ, ಸರಿಯಾದ ಸಮಯದಲ್ಲಿ ಯಾರು ಹೋರಾಟ ಮಾಡುತ್ತಾರೋ ಅವರ ಜೊತೆ ಯಾವಾಗಲೂ ನಾನಿರುತ್ತೇನೆ. ನಮ್ಮ ಕೈಲಾದಷ್ಟು ಒಳ್ಳೆಯದನ್ನು ಮಾಡಲು ಸಿದ್ಧ" ಎಂದು ಬಾಕ್ಸಾಫೀಸ್ ಸುಲ್ತಾನ ದರ್ಶನ್ ಅವರು ಮತ್ತೊಂದು ಟ್ವೀಟ್ ಮಾಡಿದ್ದಾರೆ.
My support will always be there with Vishnu Dada Fans who have been fighting for the Right cause at the right time. We shall do our best
— Darshan Thoogudeepa (@dasadarshan) June 15, 2016
ಒಟ್ನಲ್ಲಿ ಮೊದಲು ಸುದೀಪ್ ಇದೀಗ ದರ್ಶನ್ ಅವರು ಟ್ವೀಟ್ ಮೂಲಕ ಬೆಂಬಲ ಸೂಚಿಸಿದ್ದರಿಂದ ವಿಷ್ಣುಸೇನಾ ಅಭಿಮಾನಿಗಳಿಗೆ ಆನೆ ಬಲ ಬಂದಂತಾಗಿದ್ದು, ಸಾಹಸ ಸಿಂಹ ವಿಷ್ಣು ಅವರ ಸ್ಮಾರಕವನ್ನು ಬೆಂಗಳೂರಿನಲ್ಲೇ ಉಳಿಸಿಕೊಳ್ಳುವಲ್ಲಿ ಅಭಿಮಾನಿಗಳು ಯಶಸ್ವಿಯಾಗಲಿ ಅಂತ ನಾವೂ ಹಾರೈಸೋಣ.[ವಿಷ್ಣು ಸ್ಮಾರಕ ಸ್ಥಳಾಂತರ ಗುಲ್ಲು; ಅಭಿಮಾನಿಗಳ ಬೃಹತ್ ಪ್ರತಿಭಟನೆ]