Just In
Don't Miss!
- Sports
ರಾಜಸ್ಥಾನ ತಂಡದಿಂದ ಸ್ಟೀವ್ ಸ್ಮಿತ್ ಔಟ್, ಸಂಜು ಹೊಸ ಕ್ಯಾಪ್ಟನ್!
- Lifestyle
ಕೋವಿಡ್ 19 ಲಸಿಕೆಯ ಅಡ್ಡಪರಿಣಾಮದಿಂದ ಸಾವು ಸಂಭವಿಸಲ್ಲ: ಏಮ್ಸ್ ನಿರ್ದೇಶಕ
- Automobiles
ಭಾರೀ ಗಾತ್ರದ ಎಸ್ಯುವಿಯನ್ನು ಬಾಯಿಂದ ಹಿಂದಕ್ಕೆಳೆದ ಹುಲಿ
- News
ಮಕ್ಕಳಿಗೆ ಯಾವ ಕೊರೊನಾ ಲಸಿಕೆ ಸೂಕ್ತ; ಏಮ್ಸ್ ನಿರ್ದೇಶಕರ ಸಲಹೆ
- Education
UAS Dharwad Recruitment 2021: ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಜ.28ಕ್ಕೆ ನೇರ ಸಂದರ್ಶನ
- Finance
ಸೆನ್ಸೆಕ್ಸ್, ನಿಫ್ಟಿ ಹೊಸ ದಾಖಲೆ; ಟಾಟಾ ಮೋಟಾರ್ಸ್ 6%ಗೂ ಹೆಚ್ಚು ಗಳಿಕೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ದಿಢೀರನೆ ಧರ್ಮಸ್ಥಳಕ್ಕೆ ಬೇಟಿ ನೀಡಿದ್ದಾರೆ. ಚಿತ್ರೀಕರಣದ ನಡುವೆಯು ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಡಿ ಬಾಸ್ ಇಂದು ಬೆಳಗ್ಗೆ ಶ್ರೀ ಮಂಜುನಾಥನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಂಜುನಾಥನ ಸನ್ನಿಧಿಯಲ್ಲಿ ದಿಢೀರನೆ ದರ್ಶನ್ ಅವರನ್ನು ನೋಡಿದ ಅಭಿಮಾನಿಗಳು ಒಮ್ಮೆ ಫುಲ್ ಖುಷ್ ಆಗಿದ್ದಾರೆ.
ಅಷ್ಟೆಯಲ್ಲ ದರ್ಶನ್ ಅವರನ್ನು ನೋಡುತ್ತಿದಂತೆ ಅಭಿಮಾನಿಗಳು ಪೋಟೋ ಕ್ಲಿಕ್ಕಿಸಿಕೊಳ್ಳಲು ಮತ್ತು ಸೆಲ್ಫಿಗಾಗಿ ಮುಗಿಬಿದ್ದಾರೆ. ದರ್ಶನ್ ಜೊತೆ ಅವರ ಸ್ನೇಹಿತರು ಕೂಡ ಧರ್ಮಸ್ಥಳಕ್ಕೆ ತೆರಳಿ ಮಂಜುನಾಥನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ರಿಲೀಸ್ ಆಗ್ತಿವೆ 'ಕುರುಕ್ಷೇತ್ರ' ಸಿನಿಮಾದ ಹಾಡುಗಳು
ದರ್ಶನ್ ಸದ್ಯ ರಾಬರ್ಟ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೆ ರಾಬರ್ಟ್ ಚಿತ್ರದ ಚಿತ್ರೀಕರಣ ಸಾಕಷ್ಟು ಭಾಗ ಮುಗಿಯುತ್ತ ಬಂದಿದೆ. ಚಿತ್ರಕ್ಕೆ ತರುಣ್ ಸುಧೀರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸಾಕಷ್ಟು ನಿರೀಕ್ಷೆಯನ್ನು ರಾಬರ್ಟ್ ಚಿತ್ರದ ಫಸ್ಟ್ ಲುಕ್ ಇತ್ತೀಚಿಗಷ್ಟೆ ರಿವೀಲ್ ಮಾಡಲಾಗಿದೆ.
ಇನ್ನು ದರ್ಶನ್ ಅಭಿನಯದ ಕುರುಕ್ಷೇತ್ರ ಮತ್ತು ಒಡೆಯ ಸಿನಿಮಾ ರಿಲೀಸ್ ಗೆ ತಯಾರಿ ಮಾಡಿಕೊಳ್ಳುತ್ತಿವೆ. ಕುರುಕ್ಷೇತ್ರ ಚಿತ್ರದ ಆಡಿಯೋ ಜುಲೈ 7ಕ್ಕೆ ತೆರೆಗೆ ಬರಲು ಸಿದ್ಧವಾಗಿವೆ. ಜೊತೆಗೆ ಬಹು ನಿರೀಕ್ಷೆಯ 'ಗಂಡುಗಲಿ ಮದಕರಿನಾಯಕ' ಚಿತ್ರದ ಚಿತ್ರೀಕರಣ ಕೂಡ ಸಧ್ಯದಲ್ಲೆ ಪ್ರಾರಂಭವಾಗಲಿದೆ.