Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ದಿಢೀರನೆ ಧರ್ಮಸ್ಥಳಕ್ಕೆ ಬೇಟಿ ನೀಡಿದ್ದಾರೆ. ಚಿತ್ರೀಕರಣದ ನಡುವೆಯು ಧರ್ಮಸ್ಥಳಕ್ಕೆ ಭೇಟಿ ನೀಡಿರುವ ಡಿ ಬಾಸ್ ಇಂದು ಬೆಳಗ್ಗೆ ಶ್ರೀ ಮಂಜುನಾಥನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಂಜುನಾಥನ ಸನ್ನಿಧಿಯಲ್ಲಿ ದಿಢೀರನೆ ದರ್ಶನ್ ಅವರನ್ನು ನೋಡಿದ ಅಭಿಮಾನಿಗಳು ಒಮ್ಮೆ ಫುಲ್ ಖುಷ್ ಆಗಿದ್ದಾರೆ.
ಅಷ್ಟೆಯಲ್ಲ ದರ್ಶನ್ ಅವರನ್ನು ನೋಡುತ್ತಿದಂತೆ ಅಭಿಮಾನಿಗಳು ಪೋಟೋ ಕ್ಲಿಕ್ಕಿಸಿಕೊಳ್ಳಲು ಮತ್ತು ಸೆಲ್ಫಿಗಾಗಿ ಮುಗಿಬಿದ್ದಾರೆ. ದರ್ಶನ್ ಜೊತೆ ಅವರ ಸ್ನೇಹಿತರು ಕೂಡ ಧರ್ಮಸ್ಥಳಕ್ಕೆ ತೆರಳಿ ಮಂಜುನಾಥನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ರಿಲೀಸ್ ಆಗ್ತಿವೆ 'ಕುರುಕ್ಷೇತ್ರ' ಸಿನಿಮಾದ ಹಾಡುಗಳು
ದರ್ಶನ್ ಸದ್ಯ ರಾಬರ್ಟ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೆ ರಾಬರ್ಟ್ ಚಿತ್ರದ ಚಿತ್ರೀಕರಣ ಸಾಕಷ್ಟು ಭಾಗ ಮುಗಿಯುತ್ತ ಬಂದಿದೆ. ಚಿತ್ರಕ್ಕೆ ತರುಣ್ ಸುಧೀರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸಾಕಷ್ಟು ನಿರೀಕ್ಷೆಯನ್ನು ರಾಬರ್ಟ್ ಚಿತ್ರದ ಫಸ್ಟ್ ಲುಕ್ ಇತ್ತೀಚಿಗಷ್ಟೆ ರಿವೀಲ್ ಮಾಡಲಾಗಿದೆ.
ಇನ್ನು ದರ್ಶನ್ ಅಭಿನಯದ ಕುರುಕ್ಷೇತ್ರ ಮತ್ತು ಒಡೆಯ ಸಿನಿಮಾ ರಿಲೀಸ್ ಗೆ ತಯಾರಿ ಮಾಡಿಕೊಳ್ಳುತ್ತಿವೆ. ಕುರುಕ್ಷೇತ್ರ ಚಿತ್ರದ ಆಡಿಯೋ ಜುಲೈ 7ಕ್ಕೆ ತೆರೆಗೆ ಬರಲು ಸಿದ್ಧವಾಗಿವೆ. ಜೊತೆಗೆ ಬಹು ನಿರೀಕ್ಷೆಯ 'ಗಂಡುಗಲಿ ಮದಕರಿನಾಯಕ' ಚಿತ್ರದ ಚಿತ್ರೀಕರಣ ಕೂಡ ಸಧ್ಯದಲ್ಲೆ ಪ್ರಾರಂಭವಾಗಲಿದೆ.