Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶನೇಶ್ವರನಿಗೆ ತುಲಾಭಾರ, ಸೂರ್ಯ ದೇವನಿಗೆ ಪೂಜೆ ಸಲ್ಲಿಸಿದ ನಟ ದರ್ಶನ್
ಯಾವ ದೇವರ ಕೃಪೆಯೋ, ಏನೋ.. ಇತ್ತೀಚೆಗಷ್ಟೆ ಕಾರು ಅಪಘಾತದಲ್ಲಿ ಕನ್ನಡ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು.
ಸಣ್ಣ-ಪುಟ್ಟ ಪೆಟ್ಟು ಮಾಡಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿರುವ ನಟ ದರ್ಶನ್ ನಿನ್ನೆಯಷ್ಟೇ ತಿರುನಲ್ಲರ್ ಶನೇಶ್ವರ ಪುಣ್ಯಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದರು.
ದರ್ಶನ್-ರಾಕ್ಲೈನ್ ಚಿತ್ರಕ್ಕಾಗಿ ಸುದೀಪ್ ಇಷ್ಟೊಂದು ತ್ಯಾಗಕ್ಕೆ ಸಿದ್ಧವಾದ್ರಾ.?
ಶನೇಶ್ವರ ದೇವಾಲಯದಲ್ಲಿ ತುಲಾಭಾರ ಸೇವೆ ಸಲ್ಲಿಸಿದ ನಟ ದರ್ಶನ್ ಇಂದು ತಮಿಳುನಾಡಿನ ಸೂರ್ಯ ಭಗವಾನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸೂರ್ಯ ದೇವನಿಗೆ ಭಕ್ತಿಯಿಂದ ನಮಸ್ಕರಿಸಿದ್ದಾರೆ ನಟ ದರ್ಶನ್.
ಹಾಗ್ನೋಡಿದ್ರೆ, ನಟ ದರ್ಶನ್ ಅಪ್ಪಟ ದೈವ ಭಕ್ತ. ಪ್ರತಿ ವರ್ಷ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಸ್ನೇಹಿತರೊಂದಿಗೆ ನಟ ದರ್ಶನ್ ಯಾತ್ರೆ ಕೈಗೊಳ್ತಾರೆ. ಯಾವುದೇ ಶುಭ ಕೆಲಸ ಮಾಡುವ ಮುನ್ನ ಚಾಮುಂಡಿ ದೇವಿಗೆ ನಟ ದರ್ಶನ್ ನಮಿಸುತ್ತಾರೆ. ಇದೀಗ ನಟ ದರ್ಶನ್ ಶನೇಶ್ವರ ಹಾಗೂ ಸೂರ್ಯ ಭಗವಾನ್ ದೇವಸ್ಥಾನಕ್ಕೆ ಭೇಟಿ ಕೊಟ್ಟು, ತಮ್ಮ ಹರಕೆ ತೀರಿಸಿದ್ದಾರೆ.
ಚಿತ್ರದುರ್ಗದ ದರ್ಶನ್ ಅಭಿಮಾನಿಯ ಕೆಲಸಕ್ಕೆ 'ಡಿ' ಭಕ್ತರು ಖುಷಿಯೋ ಖುಷಿ
ಅಪಘಾತದ ಬಳಿಕ ನಟ ದರ್ಶನ್ ಶೂಟಿಂಗ್ ನಲ್ಲಿ ಪಾಲ್ಗೊಳ್ಳುತ್ತಿಲ್ಲ. ತಮ್ಮ ಬಲಗೈ ಸಂಪೂರ್ಣವಾಗಿ ಸರಿಹೋದ ಬಳಿಕ 'ಯಜಮಾನ' ಶೂಟಿಂಗ್ ನಲ್ಲಿ ದರ್ಶನ್ ಭಾಗವಹಿಸುತ್ತಾರೆ. ಅದು ಮುಗಿದ್ಮೇಲೆ, 'ಒಡೆಯ' ಚಿತ್ರೀಕರಣ ಶುರುವಾಗಲಿದೆ.