Don't Miss!
- Sports David Warner: ಊಟನೂ ಬೇಡ, ಹುಡುಗಿನೂ ಬೇಡ; ಆಧಾರ್ ಕಾರ್ಡ್ ಬೇಕೆಂದ ಡೇವಿಡ್ ವಾರ್ನರ್!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- News Lok Sabha Election: ಕರ್ನಾಟಕದ ಈ ಕ್ಷೇತ್ರದಲ್ಲಿ ಮಹಿಳಾ ಮತದಾರರೇ ನಿರ್ಣಾಯಕ
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಷಾಢ ಶುಕ್ರವಾರ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ದರ್ಶನ್
ಇಂದು ಆಷಾಢ ಶುಕ್ರವಾಡ. ಚಾಮುಂಡಿ ತಾಯಿಯ ಸನ್ನಿಧಿಯಲ್ಲಿ ವಿಶೇಷವಾದ ಪೂಜೆ ಕೈಂಕರ್ಯಗಳು ನೆರವೇರಲಿದೆ. ಈಗಾಗಲೆ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶ್ರುಕ್ರವಾರದ ಪೂಜೆಯ ಸಂಭ್ರಮ ಮನೆ ಮಾಡಿದೆ. ಈ ವಿಶೇಷ ದಿನದಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಾಮುಂಡಿ ತಾಯಿ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಪ್ರತೀ ವರ್ಷ ಆಷಾಢದಲ್ಲಿ ದರ್ಶನ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಆಷಾಢದ ಮೊದಲ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಹೋಗುವುದನ್ನು ದರ್ಶನ್ ಯಾವಾಗಲು ಮಿಸ್ ಮಾಡುವುದೆ ಇಲ್ಲ. ಇನ್ನು ಚಾಮುಂಡಿ ತಾಯಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುವ ಕಾರಣ ಭಕ್ತಾದಿಗಳ ಸಂಖ್ಯೆಯು ಹೆಚ್ಚಾಗಿರುತ್ತೆ.
'ಕುರುಕ್ಷೇತ್ರ' ಚಿತ್ರದ ಹೊಸ ಪೋಸ್ಟರ್ ನಲ್ಲೊಂದು ವಿಶೇಷ
ಅಪಾರ ಸಂಖ್ಯೆ ಭಕ್ತಾದಿಗಳ ನಡುವೆ ದರ್ಶನ್ ತಾಯಿಯ ಆಶೀರ್ವಾದ ಪಡೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ಗೆ ಸಾಕಷ್ಟು ಸ್ನೇಹಿತರು ಸಾಥ್ ನೀಡಿದ್ದಾರೆ. ವಿಶೇಷ ಪೂಜೆ ಬಳಿಕ ಮಾತನಾಡಿದ ದರ್ಶನ್ ಚಾಮುಂಡಿ ತಾಯಿ ಎಲ್ಲರಿಗೂ ಒಳ್ಳೆಯದು ಮಾಡಲಿ ಎಂದು ಹೇಳಿದ್ದಾರೆ.
ಡಿ ಬಾಸ್ ಸದ್ಯ 'ರಾಬರ್ಟ್' ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ತರುಣ್ ಸುಧೀರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸಿನಿಮಾ. ಫಸ್ಟ್ ಲುಕ್ ಮೂಲಕವೆ ಭಾರಿ ನಿರೀಕ್ಷೆ ಮೂಡಿಸಿರುವ 'ರಾಬರ್ಟ್' ಸಾಕಷ್ಟು ವಿಶೇಷತೆಗಳಿಂದ ಗಮನ ಸಳೆಯುತ್ತಿದೆ. ಇನ್ನು ದರ್ಶನ್ ಅಭಿನಯ 'ಒಡೆಯ' ಸಿನಿಮಾ ರಿಲೀಸ್ ಗೆ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಅಲ್ಲದೆ ಬಹು ನಿರೀಕ್ಷೆಯ 'ಕುರುಕ್ಷೇತ್ರ' ಚಿತ್ರದ ಆಡಿಯೋ ರಿಲೀಸ್ ಆಗುತ್ತಿದ್ದು ಸಿನಿಮಾ ಮುಂದಿನ ತಿಂಗಳು ತೆರೆಗೆ ಬರುತ್ತಿದೆ.