Don't Miss!
- Automobiles Tata Curvv Vs Citroen Basalt: ಟಾಟಾಗೆ ಸೆಡ್ಡು ಹೊಡೆಯುವ ತಾಕತ್ತಿದೆಯೇ?
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಿವಣ್ಣ ಫ್ಯಾನ್ಸ್ ಆಕ್ರೋಶದ ಬಳಿಕ 'ಡಾಲಿ' ಧನಂಜಯ್ ಹೇಳಿದ್ದೇನು.?
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಧನಂಜಯ್, ವಸಿಷ್ಠ ಸಿಂಹ ಮುಖ್ಯ ಭೂಮಿಕೆಯಲ್ಲಿ ಅಭಿನಯಿದ ಟಗರು ಸಿನಿಮಾ ಯಶಸ್ವಿ ಪ್ರದರ್ಶನ ಕಾಣ್ತಿದೆ. ಆದ್ರೆ, ಯಶಸ್ಸಿನ ಜೊತೆ ವಿವಾದವೂ ಅಂಟಿಕೊಂಡಿದೆ. ಚಿತ್ರದಲ್ಲಿ ಶಿವಣ್ಣನಿಗೆ ಧನಂಜಯ್ ಮತ್ತು ವಸಿಷ್ಠ ಸಿಂಹ ಅವಾಚ್ಯ ಶಬ್ದಗಳಿಂದ ಬೈಯುತ್ತಾರೆ.
ಇದನ್ನ ಖಂಡಿಸಿರುವ ರಾಜ್ ಕುಮಾರ್ ಮತ್ತು ಶಿವರಾಜ್ ಕುಮಾರ್ ಅಭಿಮಾನಿಗಳು ನಿರ್ದೇಶಕ ಸೂರಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಚಿತ್ರದಲ್ಲಿ ಡೈಲಾಗ್ ಗೆ ಕತ್ತರಿ ಹಾಕಿ, ಇಲ್ಲವಾದಲ್ಲಿ ಸೂರಿ ಮುಖಕ್ಕೆ ಮಸಿ ಬಳಿಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಟಗರು' ಹುಟ್ಟುಹಾಕಿದ ವಿವಾದ: ಸೂರಿ ವಿರುದ್ಧ ರೊಚ್ಚಿಗೆದ್ದ ಶಿವಣ್ಣ ಫ್ಯಾನ್ಸ್.!
ಇದೀಗ, ಡಾಲಿ ಪಾತ್ರದಲ್ಲಿ ಮಿಂಚಿರುವ ಧನಂಜಯ್ ಈ ವಿವಾದದ ಬಗ್ಗೆ ಮಾತನಾಡಿದ್ದು, ಶಿವಣ್ಣನಿಗೆ ಬೈಯ್ದಿಲ್ಲ, ನೋವಾಗಿದ್ದರೇ ಕ್ಷಮಿಸಿ ಎಂದಿದ್ದಾರೆ. ಧನಂಜಯ್ ಏನಂದ್ರು ಎಂಬುದನ್ನ ಸಂಪೂರ್ಣವಾಗಿ ತಿಳಿಯಲು ಮುಂದೆ ಓದಿ....
ಸಿನಿಮಾಗಾಗಿ ಹೇಳಿದ್ದು ಅಷ್ಟೇ
''ಈ ಬಗ್ಗೆ ಯಾರಿಗೂ ಅರಿವು ಇರಲಿಲ್ಲ. ಯಾಕಂದ್ರೆ, ರಿಯಾಲಿಸ್ಟಿಕ್ ಸಿನಿಮಾ. ಹಾಗೆ ಮಾಡಬೇಕು ಎಂದು ನಿರ್ಧಾರ ಮಾಡಿದ್ದೇವು. ಸಾಮಾನ್ಯವಾಗಿ ಕೆಲವು ಜನರು ಚಿಕ್ಕ ವಿಷ್ಯಗಳಿಗೆ ಕೆಲವು ಪದಗಳನ್ನ ಬಳಸುವುದು ಉಂಟು. ಇನ್ನು ರೌಡಿಗಳು. ಅದರಲ್ಲೂ ತುಂಬ ಕೆಟ್ಟ ರೌಡಿಗಳು ಅಂದಾಗ ಆ ರೀತಿ ಮಾತನಾಡುವ ಸಾಧ್ಯತೆ ಇದೆ'' - ಧನಂಜಯ್, ನಟ
ಈ 5 ಡೈಲಾಗ್ ಕೇಳಿದ್ರೆ ಸಾಕು, 'ಟಗರು' ಏನೂ ಅಂತ ಗೊತ್ತಾಗುತ್ತೆ.!
ಅದು ಪಾತ್ರಗಳ ನಡುವಿನ ದೃಶ್ಯ ಮಾತ್ರ
''ಇದು ಡಾಲಿ ಮತ್ತು ಟಗರು ಶಿವನ ನಡುವಿನ ದೃಶ್ಯ, ಚಿಟ್ಟೆ ಮತ್ತು ಶಿವ ಪಾತ್ರದ ನಡುವಿನ ದೃಶ್ಯ. ಇಲ್ಲಿ ಧನಂಜಯ್ ಆಗಲಿ, ವಸಿಷ್ಠ ಸಿಂಹ ಆಗಲಿ ಅಥವಾ ಶಿವಣ್ಣ ಅವರಗಾಲಿ ವೈಯಕ್ತಿಕವಾಗಿ ಬರುವುದಿಲ್ಲ. ಹೀಗಾಗಿ, ಆ ರೀತಿ ಯೋಚನೆ ಬಂದಿರಲಿಲ್ಲ. ಹೀಗೆ, ಯೋಚನೆ ಮಾಡ್ಕೊಂಡು ಸಂಪೂರ್ಣವಾಗಿ ಸಿನಿಮಾ ಪ್ರೀತಿಸಿ ಮಾಡಿಕೊಂಡು ಹೋಗಿದ್ದು. ಈಗ ರಿಲೀಸ್ ಆದ್ಮೇಲೆ ಇದರ ಪರಿಣಾಮ ಗೊತ್ತಾಗುತ್ತಿದೆ. ಮ್ಯೂಟ್ ಮಾಡುವ ಯೋಚನೆ ಮಾಡಿದ್ದಾರೆ'' - ಧನಂಜಯ್, ನಟ
ಶಿವಣ್ಣನೇ ಸಪೋರ್ಟ್ ಮಾಡಿದ್ದಾರೆ
''ಸ್ವತಃ ಶಿವಣ್ಣನೇ ಹೇಳುತ್ತಿದ್ದರು. ಇಲ್ಲ ಮಾಡಿ, ಅದು ಡಾಲಿ ಪಾತ್ರವಷ್ಟೇ. ಕ್ಯಾರೆಕ್ಟರ್ ಗೆ ಬೇಕು ಎಂದು ಪ್ರೋತ್ಸಾಹ ನೀಡಿದ್ರು. ಅವರೇ ನಮಗೆ ಧೈರ್ಯ. ಅದರಿಂದಲೇ ನಾವು ನೈಜವಾಗಿ ಅಭಿನಯಿಸಲು ಸಾಧ್ಯವಾಯಿತು'' - ಧನಂಜಯ್, ನಟ
ಟ್ವಿಟ್ಟರ್ ವಿಮರ್ಶೆ: 'ಟಗರು' ಮಾರ್ನಿಂಗ್ ಶೋ ನೋಡಿದ ಪ್ರೇಕ್ಷಕರು ಖುಷಿಯೋ ಖುಷಿ
ನೋವಾಗಿದ್ದರೇ, ನಾನು ಕ್ಷಮೆ ಕೇಳ್ತಿನಿ
''ಸಿನಿಮಾನ ಬರಿ ಸಿನಿಮಾ ದೃಷ್ಟಿಯಲ್ಲಿ ನೋಡೋಣ. ಅದನ್ನ ಇನ್ನೊಂದು ಲವೆಲ್ ಗೆ ಕರೆದುಕೊಂಡು ಹೋಗೋಣ. ಬೇರೆ ಇಂಡಸ್ಟ್ರಿಯವರು ನಮ್ಮ ಸಿನಿಮಾ ಕಡೆ ನೋಡೋ ಹಾಗೆ ಮಾಡೋಣ. ಇದನ್ನ ಗಂಭೀರವಾಗಿ ತಗೆದುಕೊಳ್ಳೋದು ಬೇಡ. ಇದರಿಂದ ತೊಂದರೆಯಾಗೋದು ಬೇಡ. ಅದಕ್ಕೂ ಮೇಲೆ ನೋವಾಗಿದ್ದರೇ, ನಾನು ಕ್ಷಮೆ ಕೇಳ್ತಿನಿ'' - ಧನಂಜಯ್, ನಟ
ಶಿವಣ್ಣ ಏನಂದ್ರು.?
''ಸಹಜವಾಗಿ ಹೀರೋಗಳು ವಿಲನ್ ಬೈಯ್ದಾಗ ಚಪ್ಪಾಳೆ ಹೊಡಿತೀರಾ. ಶಿಳ್ಳೆ ಹೊಡಿತೀರಾ....ಹೀರೋಗೆ ವಿಲನ್ ಬೈದ್ರೆ ತಪ್ಪಾಗುತ್ತಾ.? ಇದನ್ನ ಯಾಕೆ ಸಹಿಸಲ್ಲ'' ಎಂದು ಅಭಿಮಾನಿಗಳನ್ನ ನಟ ಶಿವರಾಜ್ ಕುಮಾರ್ ಪ್ರಶ್ನಿಸಿದ್ದಾರೆ.